ಗ್ರಾಪಂ ಪಿಡಿಒ ವಜಾಕ್ಕೆ ಆಗ್ರಹ

ಗ್ರಾಪಂ ಅಧ್ಯಕ್ಷೆ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Team Udayavani, Oct 20, 2020, 3:28 PM IST

MANDYA-TDY-1

ಮಂಡ್ಯ: ಹಲಗೂರು ಗ್ರಾಮ ಪಂಚಾಯ್ತಿ ಪಿಡಿಒ ಎ.ಬಿ.ಶಶಿಧರ್‌ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ, ಗ್ರಾಪಂಸದಸ್ಯರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಪಂಚಾಯ್ತಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಹಲಗೂರು ಗ್ರಾಪಂ ಪಿಡಿಒ ಎ.ಬಿ.ಶಶಿಧರ್‌ಹಾಗೂ ಅಧ್ಯಕ್ಷೆ ಮಂಗಳಮ್ಮ ಸೇರಿ ಪಂಚಾಯ್ತಿಯ ವಿವಿಧ ಯೋಜನೆಯಲ್ಲಿ ಹಣಕಾಸಿನ ಅವ್ಯವಹಾರ ನಡೆಸಿದ್ದಾರೆ. ಇದರ ಬಗ್ಗೆ ತಾಪಂ ವತಿಯಿಂದ ತನಿಖೆ ನಡೆಸ ಲಾಗಿದ್ದು, ವರದಿಯಲ್ಲಿ ಸುಮಾರು 30 ಲಕ್ಷ ರೂ. ಹಣ ದುರುಪಯೋಗವಾಗಿರುವುದು ದೃಢಪಟ್ಟಿದೆ. ಆದ್ದರಿಂದ ಪಿಡಿಒ ಎ.ಬಿ.ಶಶಿಧರ್‌ ಪ್ರೊಬೆಷನರಿ ಅವಧಿಯಲ್ಲಿ ಲಕ್ಷಾಂತರ ರೂ. ಅವ್ಯವಹಾರ ನಡೆಸಿರುವುದರಿಂದ ಕಾನೂನು ಕ್ರಮ ಕೈಗೊಂಡು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ನಡೆದಿದೆ ಅವ್ಯವಹಾರ: 2018-19ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಸುಮಾರು 12 ಲಕ್ಷ ರೂ., ಗಾಂಧಿ ಗ್ರಾಮ ಪುರಸ್ಕಾರ ಯೋಜನೆಯಡಿ 5 ಲಕ್ಷ ರೂ., 14ನೇ ಹಣಕಾಸಿನಯೋಜನೆಯಡಿ ಸುಮಾರು 11 ಲಕ್ಷ ರೂ. ಹಾಗೂ ಗ್ರಾಪಂ ನಿಧಿಯಲ್ಲಿ 3 ಲಕ್ಷ ರೂ. ಹಣ ಅವ್ಯವಹಾರ ನಡೆಸಲಾಗಿದೆ ಎಂದು ದೂರಿದರು.

ಕ್ರಮ ಕೈಗೊಂಡಿಲ್ಲ: ಗ್ರಾಮ ಪಂಚಾಯ್ತಿಯಲ್ಲಿ ಎಸ್‌ಸಿಪಿ, ಟಿಎಸ್‌ಪಿ ಹಣ ಮೀಸಲಿರಿಸಿಸರಿಯಾಗಿ ಬಳಕೆ ಮಾಡಿಲ್ಲ. ನರೇಗಾ ಯೋಜನೆಯನ್ನು ಸರಿಯಾಗಿ ಅನುಷ್ಠಾನ ಮಾಡಿಲ್ಲ. ಹಲಗೂರು ಗ್ರಾಮದಲ್ಲಿ ಚರಂಡಿ, ರಸ್ತೆಗಳನ್ನು ಸರಿಯಾಗಿ ಕ್ಲೀನ್‌ ಮಾಡದೆ ದುರ್ವಾಸನೆಯಿಂದಕೂಡಿದೆ. ಗ್ರಾಪಂಕಟ್ಟಡಕ್ಕೆಹಣ ಮೀಸಲಿದ್ದರೂ, ಕಟ್ಟಡ ನಿರ್ಮಾಣದ ಬಗ್ಗೆ ಯಾವುದೇ ರೀತಿಯ ಕ್ರಮವಹಿಸಿಲ್ಲ. ಬೀದಿ ದೀಪ ನಿರ್ವಹಣೆ ಮಾಡಿಲ್ಲ ಎಂದು ಕಿಡಿಕಾರಿದರು.

ಸಾಮಾನ್ಯ ಸಭೆ ನಡೆಸಿಲ್ಲ: ಪಿಡಿಒ ಸಾರ್ವಜನಿಕರ ಜತೆ ಸರಿಯಾಗಿ ನಡೆದುಕೊಳ್ಳುವುದಿಲ್ಲ. ಗ್ರಾಪಂನಲ್ಲಿ ಸ್ಟಾಕ್‌ ಬುಕ್‌ ಮತ್ತು ಪ್ರೊಮ್‌ ಟು ರಿಜಿಸ್ಟ್ರಾರ್‌ ನಿರ್ವಹಣೆ ಮಾಡಿಲ್ಲ. ಗ್ರಾಮಸಭೆ ಮತ್ತು ವಾರ್ಡ್‌ ಸಭೆಯನ್ನು ಸರಿಯಾಗಿ ನಡೆಸಿರುವುದಿಲ್ಲ. ಅಧ್ಯಕ್ಷರು ಮತ್ತು ಪಿಡಿಒ ಇಬ್ಬರು ಸೇರಿ 8 ತಿಂಗಳ ಕಾಲ ಸಾಮಾನ್ಯ ಸಭೆ ನಡೆಸಿಲ್ಲ. ಇಲಾಖೆ ಅನುಮತಿ ಇಲ್ಲದೆ ಪಿಡಿಒ ಎ.ಬಿ.ಶಶಿಧರ್‌ ಐಷಾರಾಮಿ ಹೊಂಡೈ ಕಾರುಖರೀದಿಸಿದ್ದಾರೆ. ಆದ್ದರಿಂದ ಕೂಡಲೇ ಪಿಡಿಒ ಶಶಿಧರ್‌ ಹಾಗೂ ಅಧ್ಯಕ್ಷೆ ಮಂಗಳಮ್ಮ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಹಣ ವಸೂಲಿ ಮಾಡುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗ್ರಾಪಂ ಸದಸ್ಯರಾದ ಎಂ.ಶ್ರೀಕಂಠ, ಮಂಜುನಾಥ, ಅಬ್ಟಾಸ್‌, ಬಾಬು, ಅಕ್ರಂ ಉಲ್ಲಾ, ಪಾಪಣ್ಣ, ರಮಾನಂದ, ರವಿಗೌಡ, ಕೆಂಪಣ್ಣಸಾಗ್ಯ, ಹುರುಗಲವಾಡಿ ರಾಮಯ್ಯ, ದೇವರಾಜ್‌, ಶಿವಕುಮಾರ ಹುಲ್ಲೇಗಾಲ, ಜಕಾವುಲ್ಲ ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.