ಕವಿತೆಗಳ ಸೃಷ್ಟಿ ಸುಲಭವಲ್ಲ : ಶಿವಲೀಲಾ ಹುಣಸಗಿ


Team Udayavani, Oct 20, 2020, 4:26 PM IST

hasan-tdy-2

ಹಾಸನ: ಕವಿತೆಯ ಹುಟ್ಟು ಅಷ್ಟು ಸುಲಭದಮಾತಲ್ಲ. ಅದು ಪ್ರಸವ ವೇದನೆಗೆ ಸಮಾನ. ಅಷ್ಟು  ಅನುಭವದ ಗರಡಿಯಲ್ಲಿ ಮೈಳೈಸಿದಮೇಲೆಒಂದು ಕವಿತೆ ಅಮೂರ್ತದಿಂದ ಮೂರ್ತ ರೂಪಕ್ಕೆ ಬರುತ್ತದೆ ಎಂದು ಕವಯಿತ್ರಿ ಶಿವಲೀಲಾ ಹುಣಸಗಿ ಅಭಿಪ್ರಾಯಪಟ್ಟರು.

ನಗರದ ಸಂಸ್ಕೃತ ಭವನದಲ್ಲಿ ಮಾಣಿಕ್ಯ ಪ್ರಕಾಶನ ಹಮ್ಮಿಕೊಂಡಿದ್ದ 4ನೇ ವರ್ಷದ ವಾರ್ಷಿಕೋತ್ಸವ ಹಾಗೂ ರಾಜ್ಯ ಮಟ್ಟದ ಕವಿ-ಕಾವ್ಯ ಸಂಭ್ರಮದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಂದು ಶಿಲೆ ಮೂರ್ತಿಯಾಗಿಪರಿವರ್ತನೆಯಾಗಲು ಶಿಲ್ಪಿಯ ದೂರ ದೃಷ್ಟಿ,ಕೆತ್ತುವ ತಾಳ್ಮೆ ಎಷ್ಟು ಮುಖ್ಯವೋ ಹಾಗೆಯೇ ಒಬ್ಬ ಕವಿಗೆ ಕವಿತೆ ಸೃಷ್ಟಿಸುವಾಗ ಅವನ ಅನುಭವ ಜನ್ಯ, ವರ್ತಮಾನದ ಅಂಶಗಳಿಗೆ ವಾಸ್ತವಿಕ ನೆಲೆಗಟ್ಟನ್ನುಮೌಲ್ಯದ ಅಡಿಯಲ್ಲಿ ಕಟ್ಟಿ ಕೊಳ್ಳಲು ಜ್ಞಾನದ ಅವಶ್ಯಕತೆಯಿದೆ ಎಂದರು.

ಈ ನಿಟ್ಟಿನಲ್ಲಿ ಕವಿಯಾದವನಿಗೆ ತಾಳ್ಮೆಯ ಜೊತೆ ಸತತ ಸಾಧನೆ ಬೇಕು. ಜೊತೆಗೆ ಯಾವುದೇ ಹೊಗಳಿಕೆಗೆ ಬರೆಯದೇ ತನ್ನ ಆತ್ಮ ತೃಪ್ತಿಗಾಗಿ ಬರೆಯಬೇಕು ಎಂದು ಹೇಳಿದರು. ಪ್ರಕಾಶನದ ಸೇವೆ ಮೆಚ್ಚುವಂತದ್ದು: ಕವಿಗೋಷ್ಠಿಯಲ್ಲಿ ಭಾಗವಹಿಸಿದ ಎಲ್ಲ ಕವಿತೆಗಳು ಭಿನ್ನ ವಿಭಿನ್ನವಾಗಿವೆ. ಆದರೂ ಎಲ್ಲಾ ಕವಿತೆಗಳಆಶಯ ಸಮಾಜದ ಪರಿವರ್ತನೆಯ ಭಾವಗಳನ್ನು ತುಂಬಿಕೊಂಡಿವೆ. 34 ಕವಿಗಳು ನಾಡಿನ ವಿವಿಧೆಡೆಯಿಂದ ಆಗಮಿಸಿ ಕನ್ನಡದ ಕಂಪನ್ನು ಹಂಚಲು ಪ್ರಯತ್ನಿಸಿದ್ದಾರೆ. ಕನ್ನಡ ಸಾಹಿತ್ಯದ ಸೇವೆಗೆ ದುಡಿಯುತ್ತಿರುವ ಮಾಣಿಕ್ಯ ಪ್ರಕಾಶನದ ಸೇವೆ ಮೆಚ್ಚುವಂತದ್ದು ಎಂದು ಹೇಳಿದರು.

ಮಾಣಿಕ್ಯ ಪ್ರಕಾಶನದ ದೀಪಾ ಕೊಟ್ರೇಶ್‌ ಉಪ್ಪಾರ್‌ ಅವರ ನೇತೃತ್ವದಲ್ಲಿ ರಾಜ್ಯದ ವಿವಿಧೆಡೆ ಯಿಂದ ಕವಿಗಳನ್ನು ಆಹ್ವಾನಿಸಿ ಗೌರವಿಸುವ ಕಾರ್ಯ ಶ್ಲಾಘನೀಯವಾದುದು ಎಂದರು. ರಾಜ್ಯ ಸಂಘಟನಾಕಾರ್ಯದರ್ಶಿ ನಾಗರಾಜ್‌ ದೊಡ್ಡಮನಿ ಮಾತ ನಾಡಿ, ಹಾಸನ ಮಾತ್ರವಲ್ಲದೆ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಕೊಟ್ರೇಶ್‌ ಎಸ್‌.ಉಪ್ಪಾರ್‌ ಅವರು ತಮ್ಮ ಸಂಘಟನಾ ಶ‌ಕ್ತಿಯಿಂದ ಗುರುರ್ತಿಸಿಕೊಂಡಿದ್ದಾರೆ. ತಾನೂ ಬೆಳೆದು ತನ್ನವರನ್ನೂ ಬೆಳೆಸುವ ‌ ಅವರ ಗುಣ ಅಪರೂಪವಾದುದು ಎಂದರು.

ಹಾಸನ ಜಿಲ್ಲಾಧ್ಯಕ್ಷ ವಾಸು ಸಮುದ್ರವಳ್ಳಿ, ವಿಜಯಪುರ ಜಿಲ್ಲಾಧ್ಯಕ್ಷೆ ಗಿರಿಜಾ ಮಾಲಿ ಪಾಟೀಲ್‌, ಚಿತ್ರದುರ್ಗ ಜಿಲ್ಲಾಧ್ಯಕ್ಷ ನಂರುಶಿ ಕಡೂರು,ಶಿವಮೊಗ್ಗ ಜಿಲ್ಲಾಧ್ಯಕ್ಷೆ ಕುಮುದಾ ಬಿ.ಸುಶೀಲಪ್ಪ, ಮೈಸೂರು ಜಿಲ್ಲಾಧ್ಯಕ್ಷ ಡಾ.ಬಿ.ಬಸವರಾಜ್‌, ಚಾಮರಾಜನಗರ ಜಿಲ್ಲಾಧ್ಯಕ್ಷ ಡಾ.ಮಹೇಶ್‌ಚಿಕ್ಕಲ್ಲೂರು ಸೇರಿದಂತೆ ಹಲವು ಗಣ್ಯರು ಮಾತ ನಾಡಿದರು. ನೀಲಾವತಿ ಸಿ.ಎನ್‌.ಸ್ವಾಗತಿಸಿದರು, ಎ.ಸಿ.ನಿರಂಜನ್‌ ಎ.ಸಿ. ವಂದಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.