ಭೀಮಾ ತೀರದಲ್ಲಿ ವಿಷಜಂತುಗಳದ್ದೇ ಕಾಟ!
ವಿದ್ಯುತ್-ರಸ್ತೆ ಸಂಪರ್ಕ ಕಡಿತ,ರಾತ್ರಿಯಿಡೀ ಕತ್ತಲೆಯಲ್ಲಿ ಕಾಲ ಕಳೆಯುತ್ತಿರುವ ಸಂತ್ರಸ್ತರು
Team Udayavani, Oct 20, 2020, 4:41 PM IST
ಜೇವರ್ಗಿ: ಭೀಮಾನದಿ ಪ್ರವಾಹಕ್ಕೆ ತುತ್ತಾಗಿರುವ ಜೇವರ್ಗಿ ತಾಲೂಕಿನ 30ಕ್ಕೂ ಅಧಿಕ ಗ್ರಾಮಗಳಲ್ಲಿ ವಿಷ ಜಂತುಗಳ ಕಾಟ ಆರಂಭ ಗೊಂಡಿದ್ದು, ಸಂತ್ರಸ್ತರ ನಿದ್ದೆಗೆಡೆಸಿದೆ.
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ ಹೆಚ್ಚಿನ ನೀರು ಬಿಟ್ಟ ಪರಿಣಾಮ ನದಿ ತೀರದ ಜನರ ಬದುಕು ಬರ್ಬಾದ್ ಆಗಿದ್ದು, ಉತ್ತಮ ಬೆಳೆ, ಆದಾಯದ ನಿರೀಕ್ಷೆಯಲ್ಲಿದ್ದ ರೈತರಿಗೆಭೀಮಾ ಪ್ರವಾಹ ತಣ್ಣೀರು ಎರಚಿದೆ. ಇಷ್ಟೇ ಅಲ್ಲದೇ ಇದೀಗ ವಿಷ ಜಂತುಗಳಿಂದ ಜನರು ಇನ್ನಷ್ಟು ಭಯಪಡುವಂತಾಗಿದೆ.
ಕೋನಾಹಿಪ್ಪರಗಿ, ಮಂದರವಾಡ, ಕೋಬಾಳ ಗ್ರಾಮಗಳ ಜನರನ್ನು ಸಂಪೂರ್ಣ ಖಾಲಿ ಮಾಡಿಸಿ ಕಾಳಜಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಆದರೆ ಅರ್ಧದಷ್ಟು ಮುಳುಗಡೆಯಾದ ಇನ್ನೂ ಕೆಲ ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ನೀರು ನಿಂತಿರುವುದರಿಂದ ದುರ್ವಾಸನೆಯಿಂದ ಸೊಳ್ಳೆಗಳ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗದ ಭಯದಲ್ಲಿ ಗ್ರಾಮಸ್ಥರು ಕಾಲ ಕಳೆಯುವಂತಾಗಿದೆ. ಇದರ ಮಧ್ಯೆ ಪ್ರವಾಹದ ನೀರಲ್ಲಿ ವಿಷ ಜಂತುಗಳು ಬಂದು ಮನೆಗಳಿಗೆ ನುಗ್ಗುತ್ತಿವೆ. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಭೀಮಾ ನದಿ ಪ್ರವಾಹದಿಂದ ನಡುಗಡ್ಡೆಯಾದ ಕೆಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕಕಡಿತಗೊಳಿಸಲಾಗಿದೆ. ಗ್ರಾಮದ ಸುತ್ತಲೂ ನೀರುಬಂದಿರುವುದರಿಂದ ವಿದ್ಯುತ್ ಕಂಬ, ವಿದ್ಯುತ್ ಪರಿವರ್ತಕಗಳು ಮುಳುಗಡೆಯಾಗಿವೆ. ಇದರಿಂದ ಭೀಮಾ ತೀರದ ಜನರು ರಾತ್ರಿವಿಡೀ ಕತ್ತಲೆಯಲ್ಲಿ ವಿಷ ಜಂತುಗಳ ಹಾವಳಿಯಿಂದ ನಿದ್ರೆ ಇಲ್ಲದೇ ರಾತ್ರಿ ಕಳೆಯುತ್ತಿದ್ದಾರೆ.
ಕೆಲವು ಗ್ರಾಮಗಳು ನಡುಗಡ್ಡೆಯಾಗಿದ್ದರಿಂದ ಕೋವಿಡ್ ದಿಂದ ತೊಂದರೆ ಅನುಭವಿಸುತ್ತಿರುವ ಈ ಸಮಯದಲ್ಲಿ ಯಾರಿಗಾದರೂ ಯಾವುದೇ ರೋಗದಿಂದ ಹೆಚ್ಚು ಕಡಿಮೆಯಾದರೇ ತಾಲೂಕು ಕೇಂದ್ರದ ಆಸ್ಪತ್ರೆಗೆ ಸಾಗಿಸಲು ಸಹ ಪರದಾಡಬೇಕಾಗಿದೆ. ಅದರ ಜೊತೆ ಜಿಲ್ಲಾ ಕೇಂದ್ರ ಕಲಬುರಗಿ ನಗರಕ್ಕೂ ತೆರಳಲು ಈ ಪ್ರವಾಹ ಅಡ್ಡಿಯುಂಟು ಮಾಡಿದೆ. ಗ್ರಾಮಗಳ ಸಂಪರ್ಕ ರಸ್ತೆ ಸ್ಥಗಿತಗೊಂಡಿದ್ದರಿಂದ ಕಳೆದ ಮೂರ್ನಾಲ್ಕು ದಿನಗಳಿಂದ ನಡುಗಡ್ಡೆಯಾಗಿರುವ ಗ್ರಾಮದಲ್ಲಿಯೇ ಭಯದಿಂದ ಬದುಕು ಸಾಗಿಸಬೇಕಾದ ಅನಿವಾರ್ಯತೆ ಗ್ರಾಮಸ್ಥರಿಗೆ ಎದುರಾಗಿದೆ. ಈಗಾಗಲೇ ಭೀಮಾ ತೀರದ ಗ್ರಾಮಗಳ ಒಟ್ಟು 6,300 ಜನರನ್ನು ಕಾಳಜಿಕೇಂದ್ರದಲ್ಲಿ ಊಟೋಪಚಾರ ಹಾಗೂ ಸೌಲಭ್ಯ ಒದಗಿಸಿಕೊಡಲಾಗಿದೆ. ಇನ್ನೂ ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಭೀಮಾ ಪ್ರವಾಹ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಗ್ರಾಮಸ್ಥರ ಆತಂಕ ಕೂಡ ಅಧಿಕಗೊಂಡಿದೆ.
-ವಿಜಯಕುಮಾರ ಎಸ್.ಕಲ್ಲಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್