ಕರಾವಳಿಗೆ 94ಡಿ ಸೌಲಭ್ಯಕ್ಕೆ ಸರಕಾರದ ಉದಾಸೀನ

ಆದೇಶ ಮಾರ್ಪಾಟಾಗಿ ಬಂದಿಲ್ಲ ; ಡಿಸಿಯಿಂದ ಸರಕಾರಕ್ಕೆ ಪತ್ರ ; ಸಚಿವರಿಂದ ಭರವಸೆ

Team Udayavani, Oct 21, 2020, 4:34 AM IST

Kudಕರಾವಳಿಗೆ 94ಡಿ ಸೌಲಭ್ಯಕ್ಕೆ ಸರಕಾರದ ಉದಾಸೀನ

ಸಾಂದರ್ಭಿಕ ಚಿತ್ರ

ಕುಂದಾಪುರ: ಸಿದ್ದರಾಮಯ್ಯ ನೇತೃತ್ವದ ಸರಕಾರ ಇದ್ದಾಗ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪ ಅವರು ಮಹತ್ವಾಕಾಂಕ್ಷೆಯಿಂದ ಮಾಡಿದ 94 ಡಿ ಸೌಲಭ್ಯ ಕರಾವಳಿಗರ ಪಾಲಿಗೆ ಗಗನಕುಸುಮವಾಗಿದೆ.

ಏನಿದು 94 ಡಿ
2017 ಡಿ. 16ರಂದು ಆದೇಶವಾಗಿದ್ದು, ವಾಸಿಸುವವನೇ ಮನೆಯ ಒಡೆಯ ಉದ್ದೇಶದ 1964ರ ಕಲಂ 94 ಕರ್ನಾಟಕ ಭೂ ಕಂದಾಯ ಕಾಯ್ದೆಗೆ 94ಡಿ ತಿದ್ದುಪಡಿ ತರುವ ಮೂಲಕ ಸರಕಾರಿ ಒಡೆತನದ ಜಾಗವನ್ನೂ ಕಂದಾಯ ಗ್ರಾಮರಹಿತ ಜನವಸತಿಗಳಲ್ಲಿ ಹಾಲಿ ವಾಸವಿರುವವರಿಗೆ ಹಸ್ತಾಂತರಿಸಲು ಅವಕಾಶ ಕಲ್ಪಿಸಲಾಗಿದೆ. ಕಂದಾಯ ಗ್ರಾಮವಲ್ಲದ ಅನಧಿಕೃತ ಬಡಾವಣೆಗಳಾದ ಲಂಬಾಣಿ ತಾಂಡಾ, ಗೊಲ್ಲರ ಹಟ್ಟಿ, ವಡ್ಡರಹಟ್ಟಿ, ಕುರುಬರ ಹಟ್ಟಿ, ನಾಯಕರಹಟ್ಟಿ, ಮಜಾರೆ ಗ್ರಾಮ, ಹಾಡಿ, ದೊಡ್ಡಿ, ಪಾಳ್ಯ, ಕ್ಯಾಂಪ್‌, ಕಾಲನಿಯಂತಹ ರಾಜ್ಯದ 58 ಸಾವಿರಕ್ಕೂ ಅಧಿಕ ಜನವಸತಿ ಪ್ರದೇಶಗಳ ಮನೆಗಳು ಸರಕಾರಿ ಭೂಮಿಯಾಗಿದ್ದಲ್ಲಿ ಈಗಾಗಲೇ ವಾಸಿಸುತ್ತಿರುವವರಿಗೆ ಷರತ್ತಿಗೆ ಒಳಪಟ್ಟು ವಿತರಿಸಲು, 1979ರ ಪೂರ್ವದಲ್ಲಿ ವಾಸಿಸುತ್ತಿರುವವರ ಮನೆಗಳನ್ನು ಸಕ್ರಮಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಮಂಜೂರಾತಿಯು 4 ಸಾವಿರ ಚ. ಅಡಿ ಮಿತಿಗೆ ಒಳಪಟ್ಟಿದೆ.

ಖಾರ್ವಿಕೇರಿಯಲ್ಲಿ
ಇಲ್ಲಿನ ಪುರಸಭೆ ವ್ಯಾಪ್ತಿಯ ಖಾರ್ವಿಕೇರಿಯ 150ಕ್ಕೂ ಅಧಿಕ ಮಂದಿಗೆ ನಿವೇಶನವೇ ಇಲ್ಲ. ಈ ಕುರಿತು ಸಾಕಷ್ಟು ಹೋರಾಟಗಳಾಗಿವೆ. ಪುರಸಭೆಗೂ ಬೇಡಿಕೆ ಪಟ್ಟಿ ಮಂಡಿಸಲಾಗಿದೆ. ಆದರೆ ಬೇಡಿಕೆ ಈಡೇರಿಲ್ಲ. ಪುರಸಭಾ ವಾರ್ಡ್‌ ಸದಸ್ಯರಾಗಿದ್ದ ರವಿರಾಜ್‌ ಖಾರ್ವಿ, ಈಗಿನ ಸದಸ್ಯ ಚಂದ್ರಶೇಖರ್‌ ಖಾರ್ವಿ ನಿವೇಶನರಹಿತರ ಹೋರಾಟದ ಜತೆಗೆ ಅವರೂ ನೇತೃತ್ವ ವಹಿಸಿ ನಿವೇಶನ ದೊರಕಿಸಿಕೊಡಲು ಪ್ರಯತ್ನಿಸಿದ್ದರು.

ಡಿಸಿಯಿಂದ ಪತ್ರ
ಖಾರ್ವಿಕೇರಿಯಲ್ಲಿ ವಾಸಿಸುವವರಿಗೆ ಹಕ್ಕುಪತ್ರ ಇಲ್ಲದಿದ್ದರೂ ಅವರಿಗೆ ಈ ನಿಯಮದಡಿ ಭೂಮಿ ನೀಡಲು ಕಾನೂನಿನ ತೊಡಕಿದೆ. ಪುರಸಭೆ ವ್ಯಾಪ್ತಿ ಯಲ್ಲಿ 94ಸಿಸಿ ಅಸ್ತಿತ್ವದಲ್ಲಿರುವುದು. 94ಡಿಯಲ್ಲಿ ಮೀನುಗಾರ ಕುಟುಂಬಗಳಿಗೆ ನೀಡಲು ಅವಕಾಶ ಇಲ್ಲ. ತಾಂಡಾ ಪ್ರದೇಶ ಗುರುತಿಸಿ ನೋಟಿಫಿಕೇಶನ್‌ ಮಾಡಿದ ರಷ್ಟೇ ನಿವೇಶನ ಹಂಚಲು ಸಾಧ್ಯ. ಈ ಬದಲಾವಣೆ ಮಾಡಬೇಕು ಎಂದು ಉಡುಪಿ ಡಿಸಿ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ ಸರಕಾರದಿಂದ ಇದಕ್ಕೆ ಈವರೆಗೂ ಯಾವುದೇ ಸ್ಪಂದನ ದೊರೆತಿಲ್ಲ.

ಕರಾವಳಿಗಿಲ್ಲ
ನಿಯಮದಲ್ಲಿ ವಿವರಿಸಿದ ಮಾದರಿಯ ಪಂಗಡ ದ.ಕ., ಉಡುಪಿ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ದೊರೆಯದ ಕಾರಣ ಯಾವುದೇ ಹಕ್ಕುಪತ್ರ ವಿತರಣೆಯಾಗಿಲ್ಲ. ಜನಪ್ರತಿನಿಧಿಗಳು ಖುದ್ದು ಆಸಕ್ತಿ ವಹಿಸಿ ಈ ಕಾಯ್ದೆಯಲ್ಲಿ ಸ್ವಲ್ಪ ತಿದ್ದುಪಡಿಗೆ ಸೂಚಿಸುತ್ತಿದ್ದರೂ ಸಾವಿರಾರು ಮಂದಿಗೆ ಇದು ಪ್ರಯೋಜನಕ್ಕೆ ದೊರೆಯುತ್ತಿತ್ತು. ಕೃಷಿಕೂಲಿ ಕಾರ್ಮಿಕರು, ಮೀನುಗಾರ ಕುಟುಂಬದವರು, ಆದಿವಾಸಿಗಳು ಮೊದಲಾದವರನ್ನು ಸೇರಿಸುತ್ತಿದ್ದರೆ ಇಲ್ಲಿಯೂ ಅರ್ಹರ ಸಂಖ್ಯೆ ಇತ್ತು.

ಸಚಿವರ ಭರವಸೆ
ಈ ಹಿಂದಿನ ಎಸಿ ಭೂಬಾಲನ್‌ ಅವರು ಖಾರ್ವಿಕೇರಿ ಜನರಿಗೆ ಹಕ್ಕುಪತ್ರ ಕೊಡಿಸಬೇಕೆಂದು ಪ್ರಯತ್ನಿಸಿದರು. 127 ಮಂದಿ ಅರ್ಜಿ ನೀಡಿದ್ದು ಜಿಲ್ಲಾಧಿಕಾರಿಗೆ ಮುಂದಿನ ಕ್ರಮಕ್ಕೆ ಕಳುಹಿಸಿದ್ದರು. ಅಲ್ಲಿಂದ ಕಡತ ಎಸಿ ಕಚೇರಿಗೆ ಬಂದಿದ್ದು ಎಸಿ ಆಗಿರುವ ಕೆ. ರಾಜು ಅವರು ತನಿಖೆ ಮಾಡಿ ವರದಿ ಸಲ್ಲಿಸುವಂತೆ ತಹಶೀಲ್ದಾರ್‌ ಅವರಿಗೆ ರವಾನಿಸಿದ್ದರು. 8-10 ಮಾತ್ರ ಆಕ್ಷೇಪಣೆಗಳು ಬಂದಿದ್ದು ಇತರ ಅರ್ಜಿಗಳಿಗೆ ಸಮಸ್ಯೆಯಿರಲಿಲ್ಲ. ಖುದ್ದು ಕಂದಾಯ ಸಚಿವ ಆರ್‌. ಅಶೋಕ್‌ ಅವರು ಕೂಡ ಅಧಿಕಾರಿಗಳ ಬಳಿ ಈ ಸಮಸ್ಯೆ ಬಗೆಹರಿಸಿ ಕೊಡುವುದಾಗಿ ಭರವಸೆ ನೀಡಿದ್ದರು.

ಇಂದು ಸಭೆ
94ಡಿ ಸೌಲಭ್ಯವನ್ನು ಕರಾವಳಿ ಜಿಲ್ಲೆಗೆ ಒದಗಿಸಿಕೊಡಲು ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ಮಾಡಬೇಕಾಗುತ್ತದೆ. 10 ಮನೆಗಳಿಗಿಂತ ಹೆಚ್ಚು ಇರುವ ತಾಂಡಾದಂತಹ ಪ್ರದೇಶ ಈ ಭಾಗದಲ್ಲಿ ಇಲ್ಲ. ಈ ನಿಟ್ಟಿನಲ್ಲಿ ಅ.21ರಂದು ಅಧಿಕಾರಿಗಳ ಸಭೆ ನಡೆಸುತ್ತೇನೆ. ಸಮಸ್ಯೆ ಪರಿಹಾರಕ್ಕೆ ಯತ್ನಿಸುತ್ತೇನೆ. – ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ, ಮೀನುಗಾರಿಕ ಸಚಿವರು

ಟಾಪ್ ನ್ಯೂಸ್

supreem

48 ಗಂಟೆ ಒಳಗೆ ಮತ ದತ್ತಾಂಶ ಬಿಡುಗಡೆ: ಮೇ 17ಕ್ಕೆ ವಿಚಾರಣೆ

Road Mishap ಮಿನಿ ಬಸ್‌ ಅಪಘಾತ; ಹಲವರಿಗೆ ಗಾಯ

Road Mishap ಮಿನಿ ಬಸ್‌ ಅಪಘಾತ; ಹಲವರಿಗೆ ಗಾಯ

Udupi ಬಾಲಕಿಗೆ ಲೈಂಗಿಕ ಕಿರುಕುಳ: 3 ವರ್ಷಗಳ ಕಠಿನ ಶಿಕ್ಷೆ

Udupi ಬಾಲಕಿಗೆ ಲೈಂಗಿಕ ಕಿರುಕುಳ: 3 ವರ್ಷಗಳ ಕಠಿನ ಶಿಕ್ಷೆ

1-qwewewq

Election; 4ನೇ ಹಂತಕ್ಕೆ 63% ಮತ, ಕೆಲವು ಕಡೆ ಹಿಂಸಾಚಾರ

Subramanya: ಕಟ್ಟಡದ ಮಹಡಿಯಲ್ಲಿ ಗಾಂಜಾ ಗಿಡ ?

Subramanya: ಕಟ್ಟಡದ ಮಹಡಿಯಲ್ಲಿ ಗಾಂಜಾ ಗಿಡ ?

Kokkada: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಪಶು ವೈದ್ಯಾಧಿಕಾರಿಯಿಂದ ಹಲ್ಲೆ, ಸಾವು?

Kokkada: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಪಶು ವೈದ್ಯಾಧಿಕಾರಿಯಿಂದ ಹಲ್ಲೆ, ಸಾವು?

June 1ಕ್ಕೇ ಕೇರಳಕ್ಕೆ ಮುಂಗಾರು ಮಳೆ: ಐಎಂಡಿ

June 1ಕ್ಕೇ ಕೇರಳಕ್ಕೆ ಮುಂಗಾರು ಮಳೆ: ಐಎಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Coconut Water ಹೆಚ್ಚಿದ ಬಿಸಿಲ ಬೇಗೆ: ಎಳನೀರಿಗೆ 60 ರೂ.!

Coconut Water ಹೆಚ್ಚಿದ ಬಿಸಿಲ ಬೇಗೆ: ಎಳನೀರಿಗೆ 60 ರೂ.!

ಈ ದೇವಸ್ಥಾನದಲ್ಲಿ ನಡೆಯುತ್ತದೆ ನೂರಾರು ಪ್ರೇತ ಮದುವೆ!

ಈ ದೇವಸ್ಥಾನದಲ್ಲಿ ನಡೆಯುತ್ತದೆ ನೂರಾರು ಪ್ರೇತ ಮದುವೆ!

Byndoor : ಕಾರ್ಯಕರ್ತರಿಂದ ಕ್ಷೇತ್ರದೆಲ್ಲೆಡೆ ಸಮಾಜಮುಖಿ ಕಾರ್ಯ

Byndoor : ಕಾರ್ಯಕರ್ತರಿಂದ ಕ್ಷೇತ್ರದೆಲ್ಲೆಡೆ ಸಮಾಜಮುಖಿ ಕಾರ್ಯ

Kota ಪಾಂಡೇಶ್ವರ: ದೇಗುಲದಲ್ಲಿ ಕಳವು

Kota ಪಾಂಡೇಶ್ವರ: ದೇಗುಲದಲ್ಲಿ ಕಳವು

SSLC Result ಬಡತನದಲ್ಲೇ ಅರಳಿದ ಬಹುಮುಖಿ ಪ್ರತಿಭೆ; ಕಷ್ಟ ಕಾರ್ಪಣ್ಯಗಳ ನಡುವೆ ಧನ್ಯ ಸಾಧನೆ

SSLC Result ಬಡತನದಲ್ಲೇ ಅರಳಿದ ಬಹುಮುಖಿ ಪ್ರತಿಭೆ; ಕಷ್ಟ ಕಾರ್ಪಣ್ಯಗಳ ನಡುವೆ ಧನ್ಯ ಸಾಧನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

supreem

48 ಗಂಟೆ ಒಳಗೆ ಮತ ದತ್ತಾಂಶ ಬಿಡುಗಡೆ: ಮೇ 17ಕ್ಕೆ ವಿಚಾರಣೆ

Road Mishap ಮಿನಿ ಬಸ್‌ ಅಪಘಾತ; ಹಲವರಿಗೆ ಗಾಯ

Road Mishap ಮಿನಿ ಬಸ್‌ ಅಪಘಾತ; ಹಲವರಿಗೆ ಗಾಯ

Udupi ಬಾಲಕಿಗೆ ಲೈಂಗಿಕ ಕಿರುಕುಳ: 3 ವರ್ಷಗಳ ಕಠಿನ ಶಿಕ್ಷೆ

Udupi ಬಾಲಕಿಗೆ ಲೈಂಗಿಕ ಕಿರುಕುಳ: 3 ವರ್ಷಗಳ ಕಠಿನ ಶಿಕ್ಷೆ

1-qwewewq

Election; 4ನೇ ಹಂತಕ್ಕೆ 63% ಮತ, ಕೆಲವು ಕಡೆ ಹಿಂಸಾಚಾರ

Subramanya: ಕಟ್ಟಡದ ಮಹಡಿಯಲ್ಲಿ ಗಾಂಜಾ ಗಿಡ ?

Subramanya: ಕಟ್ಟಡದ ಮಹಡಿಯಲ್ಲಿ ಗಾಂಜಾ ಗಿಡ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.