ಯಶವಂತಪುರಕ್ಕೆ ಈಜಿಪ್ಟ್ ಈರುಳ್ಳಿ


Team Udayavani, Oct 22, 2020, 11:45 AM IST

BNG-TDY-2

ಬೆಂಗಳೂರು: ಅತಿವೃಷ್ಟಿಯ ಹಿನ್ನೆಲೆಯಲ್ಲಿ ಈರುಳ್ಳಿ ಬೆಲೆ ಗನನಕ್ಕೇರಿದ್ದು, ಆ ಹಿನ್ನೆಲೆಯಲ್ಲಿ ಯಶವಂಪುರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಈಗ ಈಜಿಪ್ಟ್ ಈರುಳ್ಳಿ ಲಗ್ಗೆಯಿಟ್ಟಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಉತ್ಕೃಷ್ಟ ದರ್ಜೆಯ ಈರುಳ್ಳಿ ಬೆಲೆ ನೂರು ರೂ.ದಾಟಿದೆ. ದಸರಾ ನಡುವೆ ಗ್ರಾಹಕರು ಈರುಳ್ಳಿ ಖರೀದಿಸಿ ಕೈಸುಟ್ಟುಕೊಳ್ಳುವಂತಾಗಿದೆ. ಈ ಎಲ್ಲಾ ಕಾರಣದಿಂದ ಯಶವಂತಪುರ ಕೃಷಿ ಮಾರುಕಟ್ಟೆಗೆ ಬುಧವಾರ 5 ಲೋಡ್‌ ಈಜಿಪ್ಟ್ ಈರುಳ್ಳಿ ಪೂರೈಕೆ ಆಗಿದೆ. ಕೆ.ಜಿಗೆ 70 ರೂ.ಗೆ ಮಾರಾಟವಾಗುತ್ತಿದೆ.

ಯಶವಂತಪುರ ಮಾರುಕಟ್ಟೆಯ ಆಲೂಗಡ್ಡೆ, ಈರುಳ್ಳಿ ವರ್ತಕರ ಸಂಘದ ಕಾರ್ಯದರ್ಶಿ ಉದಯ್‌ ಶಂಕರ್‌ಪ್ರತಿ ಕ್ರಿಯಿಸಿ, ಪ್ರತಿ ವರ್ಷ ಈ ಸೀಸನ್‌ನಲ್ಲಿ 75 ರಿಂದ 80 ಲಾರಿಗಳ ಮೂಲಕ ಈರುಳ್ಳಿ ಪೂರೈಕೆ ಆಗುತ್ತಿತ್ತು. ಆದರೆ ಅತಿವೃಷ್ಟಿಯ ಹಿನ್ನೆಲೆ ಹೇರಳವಾಗಿ ಈರುಳ್ಳಿ ಉತ್ಪನ್ನ ದೊರಕುತ್ತಿಲ್ಲ . ಹೀಗಾಗಿಯೇ ಬುಧವಾರ ಯಶವಂತಪುರ ಮಾರುಕಟ್ಟೆಗೆ ಕೇವಲ 39 ಸಾವಿರ ಈರುಳ್ಳಿ ಮೂಟೆ ಬಂದಿದೆ ಎಂದರು. ಚಿತ್ರದುರ್ಗ, ದಾವಣಗೆರೆ,ಹುಬ್ಬಳ್ಳಿ -ಧಾರಾವಾಡ ಸೇರಿದಂತೆ ಉತ್ತರ ಕರ್ನಾಟಕ ಭಾಗದಿಂದ ಈರುಳ್ಳಿ ಯಶಂತಪುರ ಮಾರುಕಟ್ಟೆಗೆ ರವಾನೆ ಆಗುತ್ತಿತ್ತು. ಆದರೆ ಮಳೆ ಸೇರಿದಂತೆ ಮತ್ತಿತರ ಕಾರಣದಿಂದಾಗಿ ಬಂದಿಲ್ಲ. ಹೀಗಾಗಿ ಮುಂಬೈ ಮೂಲದಿಂದ ಖರೀದಿಸಲಾಗಿದೆ ಎಂದರು.

ಉತ್ತಮ ಗುಣಮಟ್ಟದ ಈರುಳ್ಳಿ ಮೊಟೆ(50ಕೆ.ಜಿ)ಗೆ3,650 ರಿಂದ 3,700 ರೂ.ವರೆಗೂ ಮಾರಾಟವಾಗುತ್ತಿದೆ. ಹಾಗೆಯೇ ಕರ್ನಾಟಕ ಭಾಗದಿಂದ ಬರುತ್ತಿರುವ ಈರುಳ್ಳಿ 3,150 ರಿಂದ 3,500 ರೂ.ವರೆಗೆ ಖರೀದಿಯಾಗುತ್ತಿದೆ.

ಹಾಪ್‌ಕಾಮ್ಸ್‌ ನಲ್ಲಿ 1 ಕೆ.ಜಿಗೆ 109 ರೂ.: ಹಾಪ್‌ಕಾಮ್ಸ್‌ನಲ್ಲಿ ಈರುಳ್ಳಿ ಬೆಲೆ ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ. 109 ರೂ.ಗೆ ಒಂದುಕೆ.ಜಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ. ಹಾಗೆಯೇ ಈರುಳ್ಳಿ ಹೂವು 47ರೂ.ಗಳಿಗೆ ಖರೀದಿ ಆಗುತ್ತಿದೆ. ಈಗಾಗಲೇ ರಾಜ್ಯದಲ್ಲಿ 75 ಸಾವಿರ ಹೆಕ್ಟೇರ್‌ ಪ್ರದೇಶದಷ್ಟು ಈರುಳ್ಳಿ ಬೆಳೆ ಅತಿವೃಷ್ಟಿಯಿಂದ ಹಾನಿಗೊಳಲಾಗಿದೆ. ಹೀಗಾಗಿ, ಹಲವು ದಿನಗಳಕಾಲ ಬಾಳಿಕೆ ಬರುವಂಥ ಮುಂಬೈ ಮೂಲದ ಈರುಳ್ಳಿ ಖರೀದಿ ಮಾಡಲಾಗುತ್ತಿದೆ ಎಂದು ಹಾಪ್‌ಕಾಮ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಬಿ.ಎನ್‌.ಪ್ರಸಾದ್‌ ತಿಳಿಸಿದ್ದಾರೆ.

ಅತಿವೃಷ್ಟಿಯ ಹಿನ್ನೆಲೆಯಲ್ಲಿ ಗುಣಮಟ್ಟದ ಈರುಳ್ಳಿ ಮಾರುಕಟ್ಟೆಗೆ ಬರುತ್ತಿಲ್ಲ. ಹೀಗಾಗಿ ಗಾತ್ರದಲ್ಲಿ ದೊಡ್ಡದಿರುವ ಉತ್ಕೃಷ್ಟ ದರ್ಜೆಯ ಮುಂಬೈ ಮೂಲದ ಈರುಳ್ಳಿಗೆ ಮತ್ತಷ್ಟು ಬೇಡಿಕೆ ಬಂದಿದೆ. ರವಿಶಂಕರ್‌, ಯಶವಂತಪುರ ಮಾರುಕಟ್ಟೆ ಈರುಳ್ಳಿ-ಆಲೂಗಡ್ಡೆ ವರ್ತಕರು

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.