ಕೋವಿಡ್ ಸಾವಿನ ಪ್ರಮಾಣ ತಗ್ಗಿಸಲು ಪರೀಕ್ಷೆ ಹೆಚ್ಚಿಸಿ


Team Udayavani, Oct 22, 2020, 2:52 PM IST

KOLAR-TDY-1

ಕೋಲಾರ: ಸಕ್ಕರೆ ಕಾಯಿಲೆ, ಎಚ್‌ಐವಿ, ಕ್ಷಯ, 60 ವರ್ಷ ದಾಟಿದವರು, ಹೃದಯ ಸಂಬಂಧಿ ಕಾಯಿಲೆಗಳು ಇರುವವರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ಕಾಳಜಿ ವಹಿಸುವ ಮೂಲಕ ಸಾವಿನ ಪ್ರಮಾಣ ತಗ್ಗಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾಮಹದೇವನ್‌ ತಿಳಿಸಿದರು.

ಜಿಪಂ  ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವಿಟಿ ದರದಲ್ಲಿ ಶೇ.3 ರಷ್ಟಿದ್ದು, ರಾಜ್ಯದಲ್ಲಿಯೇ ಅತಿ ಕಡಿಮೆ ಇದ್ದು, ಪ್ರಥಮ ಸ್ಥಾನದಲ್ಲಿದೆ. ಕೋವಿಡ್‌ ತಡೆಯುವಲ್ಲಿ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ರೀತಿ ಕಾರ್ಯ ನಿರ್ವಹಿಸಿ ಕೋವಿಡ್‌ ಟೆಸ್ಟಿಂಗ್‌ ಹೆಚ್ಚಿಸುವ ಮೂಲಕ ಕೋವಿಡ್‌ -19 ತಡೆಯಬೇಕು ಎಂದರು.

ನರೇಗಾಕಾಮಗಾರಿ ಕೈಗೊಳ್ಳಿ: ಕೋವಿಡ್‌ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಿ ಹೋಂ ಕ್ವಾರಂಟೈನ್‌ನಲ್ಲಿ ಇಡಬೇಕು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರಕಾಯ್ದುಕೊಂಡು ಸ್ಯಾನಿಟೈಸರ್‌ ಬಳಸಬೇಕು. ನರೇಗಾ ಯೋಜನೆಯಡಿ ಕಾರ್ಯಗಳನ್ನು ಕೈಗೊಳ್ಳಿ. ಗ್ರಾಮ ಶಿಕ್ಷಣ ಕಾರ್ಯಪಡೆ ರಚಿಸಲಾಗಿದ್ದು, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸಬೇಕು. ಇವರಿಗೆ ಮೊದಲು ಬ್ರಿಡ್ಜ್ ಕೋರ್ಸ್‌ ಮಾಡಬೇಕು ಎಂದರು.

ಕ್ಯಾಂಪ್‌ಗಳ ಮೂಲಕ ಪರೀಕ್ಷೆ: ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ 7,951 ಕೋವಿಡ್‌ ಪ್ರಕರಣ ಕಂಡುಬಂದಿದ್ದು,6,705 ಜನ ಗುಣಮುಖರಾಗಿದ್ದಾರೆ. ಕೋವಿಡ್‌ ದಿಂದ 141 ಜನ ಸಾವನ್ನಪ್ಪಿರುತ್ತಾರೆ. 1105 ಸಕ್ರಿಯ ಪ್ರಕರಣ ಗಳಿವೆ. ಇದರಲ್ಲಿ 38 ಪ್ರಕರಣಗಳಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿ ದಿನ ಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿಯೇ 900-1000 ಕೋವಿಡ್‌ ಪರೀಕ್ಷೆ ಮಾಡಿಸಲಾಗುತ್ತಿದೆ. ಕ್ಯಾಂಪ್‌ಗಳನ್ನು ಹಾಕಿ ಪರೀಕ್ಷೆನಡೆಸಲಾಗುತ್ತಿದ್ದು, ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಉತ್ತಮ ಸೌಲಭ್ಯ ಕಲ್ಪಿಸಿಕೊಡಲಾಗಿದೆ. ಜಿಲ್ಲೆಯಲ್ಲಿ 2 ಲಕ್ಷ ಎನ್‌ಸಿಡಿ ಪ್ರಕರಣಗಳಿದ್ದು ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು.

ಈಗ ಪಾಸಿಟಿವ್‌ ಕಂಡು ಬಂದ ಮನೆಗಳನ್ನು ಕಂಟೈನ್ಮೆಂಟ್‌ ವ್ಯಾಪ್ತಿ ಎಂದು ಪರಿಗಣಿಸಲಾಗುತ್ತಿದೆ. ಹೋಂಡಾ ಕಂಪನಿ ಅವರು ಸಿಎಸ್‌ಆರ್‌ ನಡಿ ಕೋವಿಡ್‌ ಇರುವವರಿಗೆ ಡಯಾಲಿಸಿಸ್‌ ಮಾಡಲು 18 ಲಕ್ಷ ರೂ. ಮೌಲ್ಯದಮೆನ್‌ನ್ನು ನೀಡುತ್ತಿದ್ದಾರೆಎಂದರು.

ಶೇ.100 ಬಿತ್ತನೆ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಶೇ.100 ಬಿತ್ತನೆಯಾಗಿದೆ. ರಸಗೊಬ್ಬರ ದಾಸ್ತಾನು ಅಗತ್ಯಕ್ಕೆ ತಕ್ಕಷ್ಟು ಇದೆ. ಬೆಳೆ ನಷ್ಟಕ್ಕೆ 98 ಲಕ್ಷ ರೂ. ಪರಿಹಾರ ಕೇಳಲಾಗಿದೆ. ಬೆಳೆ ಸಮೀಕ್ಷೆ ಶೇ. 100 ಮುಗಿದಿದೆ. ಜಿಲ್ಲೆಯ 156 ಗ್ರಾಪಂಗಳಲ್ಲಿ 148 ಗ್ರಾಪಂಗಳಿಗೆ ಈಗಾಗಲೇ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಜಾಗ ನೀಡಲಾಗಿದೆ ಎಂದರು.

ಜಿಪಂ ಸಿಇಒ ಎಂ.ಆರ್‌.ರವಿಕುಮಾರ್‌ ಮಾತನಾಡಿ, ನರೇಗಾದಲ್ಲಿ 55,41,000 ಮಾನವ ದಿನಗಳ ಗುರಿ ಇದ್ದು, 40 ಲಕ್ಷ ಮಾನವ ದಿನಗಳ ಕೆಲಸ ಮಾಡಲಾಗಿದೆ. 20 ಖಾಸಗಿ ನರ್ಸರಿಗಳನ್ನು ಗಿಡಗಳ ಪೂರೈಕೆಗೆ ಗುರುತಿಸಲಾಗಿದೆ. ಘನತ್ಯಾಜ್ಯ ವಿಲೇವಾರಿ ಘಟಕಗಳಿಗೆ ಕಸ ಸಂಗ್ರಸಲು ವಾಹನ ಖರೀದಿಗೆ ಕ್ರಮವಹಿಸಲಾಗಿದೆ ಎಂದರು. ಸಭೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಜಿಲ್ಲೆ ಗಡಿ ಭಾಗದಲ್ಲಿದ್ದು ತಮಿಳುನಾಡು, ಆಂಧಪ್ರದೇಶದಿಂದ ಜಿಲ್ಲೆಗೆ ಜನ ಬರುತ್ತಾರೆ. ಜಿಲ್ಲೆಯಲ್ಲಿ ಕೋವಿಡ್‌ ದಿಂದ ಇಲ್ಲಿಯವರೆಗೂ 141 ಜನ ಮೃತಪಟ್ಟಿದ್ದಾರೆ. ಗ್ರಾಪಂ ಮಟ್ಟದಲ್ಲಿ ಸ್ಕ್ರೀನಿಂಗ್‌ ಮಾಡಬೇಕು. ಪಂಚಾಯ್ತಿ ಗಳಿಂದ ಹೋಂ ಐಸೋಲೇಷನ್‌ನಲ್ಲಿ ಇರುವವರಿಗೆಕರೆ ಮಾಡಿ ಆರೋಗ್ಯ ವಿಚಾರಿಸಬೇಕು. ಉಮಾ ಮಹದೇವನ್‌, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.