ಮನೆ ಕುಸಿದು ತಂದೆ ಮತ್ತು ಮಗ ಸಾವು, ಇನ್ನಿಬ್ಬರಿಗೆ ಗಾಯ: ಸ್ಥಳಕ್ಕೆ ಶಾಸಕರ ಭೇಟಿ
Team Udayavani, Oct 23, 2020, 11:47 AM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ವೈಜಕೂರಿನಲ್ಲಿ ಮಳೆಯಿಂದ ಮನೆ ಕುಸಿದು ಬಿದ್ದು ಒಂದೇ ಕುಟುಂಬದ ಇಬ್ಬರು ಮೃತಪಟ್ಟು ಮತ್ತಿಬ್ಬರು ತೀವ್ರ ಗಾಯಗೊಂಡಿರುವ ಹೃದಯ ವಿದ್ರಾವಿಕ ಘಟನೆ ನಡೆದಿದೆ.
ಘಟನೆಯಲ್ಲಿ ತಂದೆ ರವಿ ಕುಮಾರ್ ಹಾಗೂ ಪುತ್ರ ರಾಹುಲ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೂ ಮುನಿರಾಜಮ್ಮ ಹಾಗೂ ಅವರ ಪುತ್ರಿ ರುಚಿತ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಳಿಗ್ಗೆ 6.30 ಕ್ಕೆ ಮನೆ ದಿಢೀರ್ ಕುಸಿದಿದೆ ಇದರಿಂದ ಮನೆಯಲ್ಲಿದ್ದವರು ಅವಶೇಷಗಳಡಿ ಸಿಲುಕಿ ಸಾವು ಬದುಕಿನ ನಡುವೆ ಸಿಲುಕಿ ಒದ್ದಾಡುತ್ತಿದ್ದರು ಇದನ್ನ ಕಂಡ ಗ್ರಾಮಸ್ಥರು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ.
ಇದನ್ನೂ ಓದಿ:ಅಂಚೆಯಲ್ಲೇ ಭಾಗ್ಯಲಕ್ಷ್ಮೀ, ಸುಕನ್ಯಾ ಸಮೃದ್ಧಿ ಜತೆ ವಿಲೀನಕ್ಕೆ ಸಂಪುಟ ಅಸ್ತು
ಘಟನಾ ಸ್ಥಳಕ್ಕೆ ಶಾಸಕ ಜೆಕೆ ಕೃಷ್ಣಾರೆಡ್ಡಿ, ತಹಶೀಲ್ದಾರ್ ಡಿ ಹನುಮಂತರಾಯಪ್ಪ, ಪಂಚಾಯತಿ ಪಿಡಿಒ ಭೇಟಿ ನೀಡಿ ಪರಿಶೀಲಿಸಿ ಇನ್ನು ಉಳಿದ ಹಳೆ ಮನೆಯವರಿಗೆ ಬೇರೆ ಕಡೆ ವ್ಯವಸ್ಥೆ ಮಾಡುವುದಾಗಿ ತಿಳಿಸಿ ಮೃತ ಪಟ್ಟವರಿಗೇ ತಲಾ 5 ಲಕ್ಷ ರೂಗಳ ಪರಿಹಾರ ಕೊಡಲು ಜಿಲ್ಲಾಡಳಿತಕ್ಕೆ ಮನವಿ ಮಾಡುವುದಾಗಿ ಭರವಸೆ ನೀಡಿದ ಶಾಸಕರು ತಾವು ಕೂಡ ತಲಾ 50 ಸಾವಿರ ರೂಪಾಯಿ ಕೊಡುವುದಾಗಿ ವಾಗ್ದಾನ ಮಾಡಿದ್ದಾರೆ.
ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಜಿಲ್ಲಾದ್ಯಂತ ಇತ್ತೀಚಿಗೆ ವ್ಯಾಪಕವಾಗಿ ಮಳೆಯಾಗುತ್ತಿದ್ದು ಹಳೆಯ ಮನೆಗಳು ಶಿಥಿಲ ವ್ಯವಸ್ಥೆಗೆ ತಲುಪಿದೆ ಇದರಿಂದ ಜಿಲ್ಲೆಯಲ್ಲಿ ಮನೆ ಕುಸಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ