ಚೆನ್ನೈ ಭವಿಷ್ಯ ಮುಂಬೈ ಕೈಯಲ್ಲಿ: ಸೇಡಿಗೆ ಮುಂಬೈ ಕಾತರ, ಚೆನ್ನೈ ಸೋತರೆ ಬಹುತೇಕ ಔಟ್


Team Udayavani, Oct 23, 2020, 4:02 PM IST

ಚೆನ್ನೈ ಭವಿಷ್ಯ ಮುಂಬೈ ಕೈಯಲ್ಲಿ: ಸೇಡಿಗೆ ಮುಂಬೈ ಕಾತರ, ಚೆನ್ನೈ ಸೋತರೆ ಬಹುತೇಕ ಔಟ್

ಶಾರ್ಜಾ: ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯವನ್ನಾಡಿದ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ರನ್ನರ್ ಅಪ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಮರು ಪಂದ್ಯಕ್ಕೆ ಸಜ್ಜಾಗಿವೆ. ಶುಕ್ರವಾರದ 41ನೇ ಐಪಿಎಲ್‌ ಪಂದ್ಯದಲ್ಲಿ ಇವು ಮುಖಾಮುಖೀಯಾಗಲಿವೆ.

ಮೊದಲ ಪಂದ್ಯದಲ್ಲಿ ಮುಂಬೈಯನ್ನು 5 ವಿಕೆಟ್‌ ಗಳಿಂದ ಮಣಿಸಿ ಗೆಲುವಿನ ಅಭಿಯಾನ ಆರಂಭಿಸಿದ ಚೆನ್ನೈ ಅನಂತರ ಕುಸಿಯುತ್ತಲೇ ಹೋಗಿ ಅಂಕಪಟ್ಟಿಯ ಕೊನೆಯ ಸ್ಥಾನಕ್ಕೆ ಅಂಟಿಕೊಂಡಿದೆ. ಧೋನಿ ಬಳಗಕ್ಕೆ ಹಿಂದೆಂದೂ ಇಂಥ ದಯನೀಯ ಸ್ಥಿತಿ ಎದುರಾಗಿರಲಿಲ್ಲ. ಇನ್ನೊಂದೆಡೆ ಸೋಲನ್ನೇ ಗೆಲುವಿನ ಮೆಟ್ಟಿಲನ್ನಾಗಿ ಮಾಡಿಕೊಂಡ ಮುಂಬೈ ತೃತೀಯ ಸ್ಥಾನಿಯಾಗಿದ್ದು, ಪ್ಲೇ ಆಫ್ ಬಾಗಿಲಲಿ ನಿಂತಿದೆ,

ಸೋತರೆ ಕತೆ ಮುಗಿದಂತೆ!

ಸತತ ಸೋಲಿನಿಂದ ಕಂಗೆಟ್ಟಿರುವ ಚೆನ್ನೈ ಮತ್ತೆ ಮುಂಬೈಯನ್ನು ಮಣಿಸಿ ಹೋರಾಟವನ್ನು ಜಾರಿಯಲ್ಲಿರಿಸೀತೇ ಎಂಬುದು ಧೋನಿ ಅಭಿಮಾನಿಗಳ ನಿರೀಕ್ಷೆ. ಸೋತರೆ ಚೆನ್ನೈ ಕತೆ ಮುಗಿದಂತೆ. ಹೀಗಾಗಿ ಚೆನ್ನೈ ಭವಿಷ್ಯವೀಗ ಮುಂಬೈ ಕೈಯಲ್ಲಿದೆ ಎನ್ನಲಡ್ಡಿಯಿಲ್ಲ. ಚೆನ್ನೈ ತಂಡದಲ್ಲಿ ಕಣ್ಣಿಗೆ ರಾಚುವಂಥ ಅನೇಕ ಸಮಸ್ಯೆಗಳಿವೆ. ಒಂದೇ ಸಾಲಲ್ಲಿ ಹೇಳುವುದಾದರೆ, ಯಾರಲ್ಲೂ ಟಿ20 ಜೋಶ್‌ ಕಾಣಿಸುತ್ತಿಲ್ಲ. ಬ್ಯಾಟಿಂಗ್‌-ಬೌಲಿಂಗ್‌ ಎರಡೂ ಕೈಕೊಡುತ್ತಿದೆ. ಬ್ರಾವೊ ಇದ್ದರೂ ಚೆನ್ನೈ ಗೆಲ್ಲುತ್ತಿತ್ತು ಎಂದು ಹೇಳುವ ಧೈರ್ಯ ಕೂಡ ಇಲ್ಲ. ಅಷ್ಟರ ಮಟ್ಟಿಗೆ ತಂಡ ನಿತ್ರಾಣಗೊಂಡಿದೆ.

ಧೋನಿಗೆ ಹಲವು ಸವಾಲು

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಧೋನಿ ಈ ಐಪಿಎಲ್‌ನ ಕೇಂದ್ರಬಿಂದು ಆಗಿದ್ದರು. ಆದರೆ ಧೋನಿ ಪ್ರದರ್ಶನ, ಅವರ ಹೇಳಿಕೆ, ತಂಡದ ಆಯ್ಕೆ ಪ್ರಕ್ರಿಯೆಗಳ ಬಗ್ಗೆ ಮಚ್ಚುಗೆಗಿಂತ ಟೀಕೆಗಳೇ ವ್ಯಕ್ತವಾಗುತ್ತಿವೆ. ಕಳೆದ ಸೋಲಿನ ಬಳಿಕ ಮಾತನಾಡಿದ ಧೋನಿ, ತಂಡದ ಯುವ ಆಟಗಾರರಲ್ಲಿ “ಸ್ಪಾರ್ಕ್‌’ ಇಲ್ಲ ಎಂದಿದ್ದರು. ಇದಕ್ಕೆ ಅಭಿಮಾನಿಗಳು, ಮಾಜಿಗಳಿಂದ ತೀವ್ರ ಆಕ್ರೋಶ ಹೊರಹೊಮ್ಮಿತ್ತು. ಯುವಕರಿಗೆ ಅವಕಾಶನ್ನೇ ನೀಡದೆ ಈ ರೀತಿ ಹೇಳುವುದು ಸರಿಯಲ್ಲ ಎಂದಿದ್ದರು. ಹೀಗಾಗಿ ಧೋನಿ ಈ ಪಂದ್ಯವನ್ನು ಗೆದ್ದು ಟೀಕಾಕಾರರ ಬಾಯಿ ಮುಚ್ಚಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ.

ಮುಂಬೈ ಸಮರ್ಥ ಪಡೆ

ಇನ್ನೊಂದೆಡೆ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ವಿಭಾಗಗಳೆರಡರಲ್ಲೂ ಮುಂಬೈ ಬಲಿಷ್ಠವಾಗಿ ಗೋಚರಿಸುತ್ತಿದೆ. ತಂಡ ಎಷ್ಟೇ ಸಂಕಟದ ಸ್ಥಿತಿಯಲ್ಲಿದ್ದರೂ ಯಾರಾದರೂ ಸಿಡಿದು ನಿಂತು ಆಸರೆಯಾಗಬಲ್ಲರು. ಇತರ ತಂಡಗಳಂತೆ ಕೇವಲ ಒಬ್ಬಿಬ್ಬರು ಆಟಗಾರರನ್ನೇ ನಂಬಿ ಕುಳಿತುಕೊಳ್ಳುವ ಸ್ಥಿತಿ ಇಲ್ಲ. ಇದೇ ಮುಂಬೈ ತಂಡದ ವೈಶಿಷ್ಟ್ಯ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.