ಸಿಬ್ಬಂದಿ-ಮತದಾರರ ಆರೋಗ್ಯ ರಕ್ಷಣೆಗೆ ಕ್ರಮ


Team Udayavani, Oct 23, 2020, 6:24 PM IST

HV-TDY-1

ಹಾವೇರಿ: ಕೋವಿಡ್‌ನ‌ಂತಹ ಸಂದಿಗ್ಧ ಸಂದರ್ಭದಲ್ಲಿ ನಡೆಯುತ್ತಿರುವ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ನಿಯೋಜಿತ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮತದಾರರ ಆರೋಗ್ಯ ರಕ್ಷಣೆಗಾಗಿ ಪ್ರತಿ ಮತಗಟ್ಟೆಗಳಲ್ಲಿ ಜಿಲ್ಲಾಡಳಿತ ಎಲ್ಲ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾ ಧಿಕಾರಿ ಹಾಗೂ ಸಹಾಯಕ ಚುನಾವಣಾಧಿ ಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಮತದಾನದ ದಿನ ಕೋವಿಡ್‌ ಮಾರ್ಗಸೂಚಿಗಳ ಕುರಿತಂತೆ ತಹಶೀಲ್ದಾರ್‌, ತಾಲೂಕು ಆರೋಗ್ಯಾಧಿಕಾರಿಗಳು, ಶಿಕ್ಷಣಾ ಧಿಕಾರಿಗಳು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಚುನಾವಣೆಗೆ ನಿಯೋಜಿತ ಅಧಿಕಾರಿಗಳು, ಸಿಬ್ಬಂದಿ ಪಾರದರ್ಶಕ ಹಾಗೂ ಸುಗಮ ಚುನಾವಣೆ ನಡೆಸಲು ಬದ್ಧರಾಗಬೇಕು. ತಮ್ಮ ಆರೋಗ್ಯದ ಮುನ್ನೆಚ್ಚರಿಕೆ ವಹಿಸಿ ಕೋವಿಡ್‌ ಗೆಲ್ಲುವುದರೊಂದಿಗೆ ಚುನಾವಣೆಯಶಸ್ವಿಗೊಳಿಸಬೇಕು. ತಾವೆಲ್ಲ ಪ್ರಾಮಾಣಿಕವಾಗಿಹಾಗೂ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಮಾತನಾಡಿ, ಚುನಾವಣಾ ಆಯೋಗದ ಕೋವಿಡ್‌ ಮಾರ್ಗಸೂಚಿಗಳ ಅನ್ವಯ ವಿವಿಧ ಹಂತದ ಸಿಬ್ಬಂದಿನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ವಿವರಿಸಿದರು. ಪ್ರತಿ ಮತಗಟ್ಟೆಗೆ ಒಂದು ಕೋವಿಡ್‌ ಕಿಟ್‌ ನೀಡಲಾಗುವುದು. ಈ ಕಿಟ್‌ನಲ್ಲಿ ಮೂರು ಸ್ಯಾನಿಟೈಸರ್‌ ಬಾಟಲ್‌, ಒಂದು ವಿಶೇಷ ಹೈಡ್ರೋಕ್ಲೋರಾಕ್ಸಿಡ್‌ ಗ್ಲೌಸ್‌, ಸಿಬ್ಬಂದಿಗೆ ಎನ್‌-95 ಮಾಸ್ಕ್ ಹಾಗೂ ಸಾಮಾನ್ಯ ಮಾಸ್ಕ್, ನೆರಳೆ ಬಣ್ಣದ ಮಾರ್ಕಿಂಗ್‌ ಪೆನ್‌ಗಳನ್ನು ನೀಡಲಾಗುವುದು. ಜಿಲ್ಲಾಡಳಿತದಿಂದ ಕೋವಿಡ್‌ ಸುರಕ್ಷತೆಗೆ ಮತಗಟ್ಟೆಗಳಲ್ಲಿ ಗರಿಷ್ಠ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮತಗಟ್ಟೆವಾರುಹೆಲ್ಪ್ ಡೆಸ್ಕ್ ಸ್ಥಾಪಿಸಲಾಗಿದೆ. ಪ್ರತಿ ಮತಗಟ್ಟೆಗಳಲ್ಲಿ ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೆಕ್ಟರ್‌ವೈಸ್‌ ವೈದ್ಯರನ್ನು ನೇಮಕ ಮಾಡಲಾಗಿದೆ.ನಿಯೋಜಿತ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು, ಬಿಎಲ್‌ಒಗಳು, ಪೊಲೀಸರಿಗೆ ಫೇಸ್‌ ಸೀಲ್ಡ್‌ ಮಾಸ್ಕ್, ಹ್ಯಾಂಡ್‌ ಗ್ಲೌಸ್‌ ಹಾಗೂ ಪಿಪಿಇ ಕಿಟ್‌ ಗಳನ್ನು ಒದಗಿಸಲಾಗುವುದು ಎಂದು ವಿವರಿಸಿದರು.

ಮತದಾನದ ಮುನ್ನಾ ದಿನ ಮತಗಟ್ಟೆಗಳಲ್ಲಿ ಕೋವಿಡ್‌ ತಡೆಗಟ್ಟಲು ಪ್ರಥಮ ಆದ್ಯತೆ ನೀಡಬೇಕು. ಮತಗಟ್ಟೆಗಳನ್ನು ಪೂರ್ಣ ಸ್ವತ್ಛಗೊಳಿಸಿ ಸ್ಯಾನಿಟೈಸೇಶನ್‌ ಮಾಡಬೇಕು. ಮತದಾರರು ಹಾಗೂ ಮತದಾನ ಸಿಬ್ಬಂದಿ ಕಡ್ಡಾಯವಾಗಿ ಕನಿಷ್ಟ ಆರು ಅಡಿ ಅಂತರ ಕಾಪಾಡಬೇಕು. ಈ ನಿಟ್ಟಿನಲ್ಲಿ ಮಾರ್ಕಿಂಗ್‌ ವ್ಯವಸ್ಥೆ ಮಾಡಬೇಕು. ಥರ್ಮಲ್‌ ಗನ್‌, ಮಾಸ್ಕ್ ಹಾಗೂ ಗ್ಲೌಸ್‌ ಧರಿಸಬೇಕು. ಆರೋಗ್ಯ ಸೇತು ಆ್ಯಫ್‌ ಡೌನ್‌ ಲೋಡ್‌ ಮಾಡಿಕೊಳ್ಳಬೇಕು. ಮತದಾನದ ದಿನವೂ ಸಹ ಸ್ಯಾನಿಟೈಸ್‌ ಮಾಡಬೇಕು ಎಂದರು.

ಮತದಾರರ ಸರತಿಯಲ್ಲಿ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ಕೊಠಡಿಯೊಳಗೆ ಮತದಾನ ಮಾಡಲು ಒಂದು ಸಮಯದಲ್ಲಿ ಇಬ್ಬರಿಗೆ ಮಾತ್ರ ಅವಕಾಶ ಮಾಡಬೇಕು. ಮತದಾರರ ದಟ್ಟಣೆ ಹೆಚ್ಚಾದರೆ ಟೋಕನ್‌ ನೀಡಬೇಕು. ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಇಲ್ಲದವರಿಗೆ ಮಾಸ್ಕ್ ವಿತರಿಸಬೇಕು. ಪ್ರತಿ ಮತದಾರರಿಗೆ ಕೊಠಡಿ ಪ್ರವೇಶ ಮುನ್ನ ಪಲ್ಸ್‌ ಆಕ್ಸಿಮೀಟರ್‌ ಮೂಲಕ ಜ್ವರ ತಪಾಸಣೆ ನಡೆಸಬೇಕು. ಜ್ವರದ ಲಕ್ಷಣ ಕಂಡು ಬಂದರೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಸಂಜೆ ನಾಲ್ಕರ ನಂತರ ಮತದಾನಕ್ಕೆ ಅವಕಾಶ ಕಲ್ಪಿಸಬೇಕು. ಮತದಾರರ ಪಟ್ಟಿಯಲ್ಲಿರುವ ಕೋವಿಡ್‌ ಶಂಕಿತ ಲಕ್ಷಣ ಉಳ್ಳವರು ಪಾಸಿಟಿವ್‌ ಹಾಗೂ ಸಂಪರ್ಕಿತರಿಗೆ ವಿಶೇಷ ಮತದಾನದ ಸಮಯವನ್ನು ನಿಗದಿಪಡಿಸಲಾಗಿದೆ. ಸಂಜೆ ನಾಲ್ಕು ಗಂಟೆಯ ನಂತರ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿಗಳು, ಪಿಪಿಇ ಕಿಟ್‌ಗಳನ್ನು ಧರಿಸಿ ಚುನಾವಣೆ ಪ್ರಕ್ರಿಯೆ ನಡೆಸಬೇಕು. ಮುಂಚಿತವಾಗಿಯೇ ಇಂತಹ ಮತದಾರರನ್ನು ಗುರುತಿಸಲಾಗುವುದು. ಪ್ರತಿ ಮತದಾರರಿಗೂ ಮತದಾನ ಮಾಡಲು ಪ್ರತ್ಯೇಕವಾದ ನೆರಳೆ ಶಾಹಿಯುಳ್ಳ ಮಾರ್ಕಿಂಗ್‌ ಪೆನ್‌ ನೀಡಬೇಕು. ಈ ಪೆನ್ನನ್ನು ಮತ್ತೂಬ್ಬರು ಬಳಸಬಾರದು ಎಂದು ತಿಳಿಸಿದರು.

ಉಪವಿಭಾಗಾಧಿಕಾರಿಗಳಾದ ಅನ್ನಪೂರ್ಣಾ ಮುದಕಮ್ಮನವರ, ಡಾ. ದಿಲೀಷ್‌ ಶಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ರಾಜೇಂದ್ರದೊಡ್ಡಮನಿ, ವಿವಿಧ ತಾಲೂಕು ತಹಶೀಲ್ದಾರ್‌ ಗಳು, ತಾಲೂಕು ಆರೋಗ್ಯಾ ಧಿಕಾರಿಗಳು ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.