ಕೋವಿಡ್: ಮುಂದಿನ 3 ತಿಂಗಳು ನಿರ್ಣಾಯಕ
Team Udayavani, Oct 24, 2020, 12:26 AM IST
ಸಾಂದರ್ಭಿ ಚಿತ್ರ
ಹೊಸದಿಲ್ಲಿ: ದೇಶದ ಕೋವಿಡ್ ವೈರಸ್ ಸ್ಥಿತಿಯನ್ನು ನಿರ್ಧರಿಸುವಲ್ಲಿ ಮುಂದಿನ 3 ತಿಂಗಳು ನಿರ್ಣಾಯಕ ವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್ ಹೇಳಿದ್ದಾರೆ. ಜತೆಗೆ, ಹಬ್ಬಗಳ ವೇಳೆ ಹಾಗೂ ಚಳಿಗಾಲದಲ್ಲಿ ದೇಶವಾಸಿ ಗಳೆಲ್ಲರೂ ಕೊರೊನಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆಯೂ ಅವರು ಸಲಹೆ ನೀಡಿದ್ದಾರೆ.
ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ 95 ಸಾವಿರದಿಂದ ಈಗ 55 ಸಾವಿರಕ್ಕಿಳಿದಿದೆ. ಸೋಂಕು ದ್ವಿಗುಣ ಗೊಳ್ಳುವಿಕೆಯ ದರವೂ 97.2 ದಿನಗಳಿಗೆ ಏರಿಕೆಯಾಗಿದೆ. ದೇಶದಲ್ಲೀಗ 7 ಲಕ್ಷಕ್ಕಿಂತಲೂ ಕಡಿಮೆ ಸಕ್ರಿಯ ಸೋಂಕಿತರಿದ್ದಾರೆ. ಮರಣ ಪ್ರಮಾಣವೂ ಶೇ.1.51ಕ್ಕಿಳಿದಿದೆ. ಇವೆಲ್ಲವೂ ನಾವು ಸರಿಯಾದ ದಿಕ್ಕಿನಲ್ಲೇ ಸಾಗುತ್ತಿದ್ದೇವೆ ಎಂಬುದರ ಸೂಚಕವಾಗಿದೆ ಎಂದಿದ್ದಾರೆ ಹರ್ಷವರ್ಧನ್.
ಪಾಸಿಟಿವಿಟಿ ದರ ಇಳಿಕೆ: ಭಾರತದಲ್ಲಿನ ಕೊರೊನಾ ಪಾಸಿಟಿವಿಟಿ ದರ ಈಗ ಶೇ.7.75ಕ್ಕಿಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಗುರುವಾರದಿಂದ ಶುಕ್ರವಾರಕ್ಕೆ 24 ಗಂಟೆಗಳಲ್ಲಿ 54,366 ಮಂದಿಗೆ ಸೋಂಕು ದೃಢಪಟ್ಟಿದ್ದು, 690 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 69.48 ಲಕ್ಷ ಮಂದಿ ಗುಣಮುಖರಾಗಿದ್ದಾರೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
MUST WATCH
ಹೊಸ ಸೇರ್ಪಡೆ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ
ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ