ಯುದ್ಧ ಕಾಲದಲ್ಲಿ ಜೆಡಿಎಸ್‌ನಿಂದ ಮತ್ತೂಮ್ಮೆ ಶಸ್ತ್ರತ್ಯಾಗ


Team Udayavani, Oct 24, 2020, 1:05 PM IST

huballi-tdy-2

ಹುಬ್ಬಳ್ಳಿ: ರಣರಂಗದಲ್ಲಿ ಯುದ್ಧ ಶುರುವಾದ ಸಂದರ್ಭದಲ್ಲಿ ಶಸ್ತ್ರತ್ಯಾಗ ಮಾಡಿದ ರೀತಿಯಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್‌ ವರ್ತಿಸಿದೆ. ಮತದಾನ ಮೂರು ದಿನ ಇರುವಾಗ ಅಭ್ಯರ್ಥಿ ನಿವೃತ್ತಿಗೊಳಿಸಿ, ಪಕ್ಷೇತರ ಅಭ್ಯರ್ಥಿಗೆ ಬೆಂಬಲ ಘೋಷಿಸಿ ಗೊಂದಲ ಮೂಡಿಸಿದೆ. ಈ ನಿರ್ಣಯದ ಕುರಿತಾಗಿ ರಾಜಕೀಯವಾಗಿ ಅನೇಕ ಮಾತು-ಶಂಕೆಗಳು ಕೇಳಿ ಬರತೊಡಗಿವೆ.

ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಒಂದು ವರ್ಷದ ಮೊದಲೇ ಅಭ್ಯರ್ಥಿಯನ್ನಾಗಿ ಶಿವಶಂಕರ ಕಲ್ಲೂರ ಅವರನ್ನು ಜೆಡಿಎಸ್‌ ಘೋಷಣೆ ಮಾಡಿತ್ತು. ಕಲ್ಲೂರು ನಾಮಪತ್ರ ಸಲ್ಲಿಸಿ ಪ್ರಚಾರದಲ್ಲೂ ತೊಡಗಿದ್ದರು. ಮತದಾನ ಇನ್ನೇನು ಮೂರ್‍ನಾಲ್ಕು ದಿನ ಇದೆ ಎನ್ನುವಾಗಲೇ ವರಿಷ್ಠರು ಪಕ್ಷದ ಬೆಂಬಲ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಎಂದು ಘೋಷಿಸುವ ಮೂಲಕ, ಸ್ವತಃ ಪಕ್ಷದ ಅಭ್ಯರ್ಥಿಗೆ ಶಾಕ್‌ ನೀಡಿದ್ದಾರೆ.

ಉತ್ತರ ಕರ್ನಾಟಕದ ಬಗ್ಗೆ ತಾತ್ಸಾರ ತೋರುತ್ತ ಬಂದಿರುವ ಜೆಡಿಎಸ್‌, ಪಶ್ಚಿಮ ಪದವೀಧರ ಕ್ಷೇತ್ರದ ವಿಚಾರದಲ್ಲೂ ಅದೇ ಮನೋಭಾವನೆ ಮುಂದುವರಿಸಿದಿದೆಯೇ, ಪಕ್ಷದ ಅಧಿಕೃತ ಅಭ್ಯರ್ಥಿ ಕಣದಲ್ಲಿದ್ದರೂ ಅಭ್ಯರ್ಥಿಯ ಗಮನಕ್ಕೂ ತಾರದೆ ಏಕಾಏಕಿಯಾಗಿ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡುವಮೂಲಕ ತಪ್ಪು ಸಂದೇಶ ರವಾನೆ ಮಾಡುವ ಕೆಲಸ ಮಾಡಿದೆ ಎಂಬುದು ಕೆಲವರ ಅನಿಸಿಕೆ.

ಈ ಹಿಂದೆಯೂ ವಿಜಯಪುರ ಜಿಲ್ಲೆಯ ವಿಜುನಗೌಡಪಾಟೀಲರಿಗೆ ವಿಧಾನಪರಿಷತ್ತಿಗೆ ಅಭ್ಯರ್ಥಿಯಾಗುವುದಾಗಿ ಹೇಳಿ ಕೊನೆ ಗಳಿಗೆಯಲ್ಲಿ ಬೇರೊಬ್ಬರನ್ನು ಅಭ್ಯರ್ಥಿಯನ್ನಾಗಿಸಿದ್ದರ ಬಗ್ಗೆ ಆಕ್ರೋಶ ಸ್ಫೋಟಗೊಂಡಿತ್ತು. ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಉತ್ತರ ಕರ್ನಾಟಕದ ಕೆಲವು ಕಡೆಗಳಲ್ಲಿ ಅಭ್ಯರ್ಥಿಯಾಗಿಸುವುದಾಗಿ ಹೇಳಿ ಕೊನೆ ಗಳಿಗೆಯಲ್ಲಿ ಬೇರೆಯವರಿಗೆ ಬಿ ಫಾರಂ ನೀಡಿದ್ದ ಪ್ರಕರಣಗಳು ಇದ್ದು, ಇದೀಗ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಒಂದು ವರ್ಷದ ಮೊದಲೇ ತಾವೇ ಘೋಷಿಸಿದ್ದ ಅಭ್ಯರ್ಥಿ ಕಣದಿಂದ ಬಲವಂತವಾಗಿ ನಿವೃತ್ತಿಗೊಳ್ಳುವಂತೆ ಮಾಡಲಾಗಿದೆ.

ರಾಜಕೀಯ ಲೆಕ್ಕಾಚಾರವೇ?: ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡುವುದರ ಹಿಂದೆ ಪಕ್ಷದ ವರಿಷ್ಠರ ರಾಜಕೀಯ ಲೆಕ್ಕಾಚಾರವಿದೆ. ವಿನಾಕಾರಣ ಈ ನಿರ್ಧಾರ ತೆಗೆದುಕೊಂಡಿಲ್ಲ ಎಂಬುದು ಜೆಡಿಎಸ್‌ ಮೂಲಗಳ ಸಮಜಾಯಿಷಿ. ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಪಶ್ಚಿಮ ಪದವೀಧರ ಕ್ಷೇತ್ರದ ಮಾಹಿತಿ ಪಡೆದು, ಕಳೆದ ನಾಲ್ಕೈದು ದಿನಗಳಿಂದಲೇ ಕ್ಷೇತ್ರ ವ್ಯಾಪ್ತಿಯ ಪಕ್ಷದ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಂಡಿದ್ದಾರೆ.

ಪಕ್ಷದ ಅಭ್ಯರ್ಥಿಗೆ ನಿರೀಕ್ಷಿತ ಮಟ್ಟದಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಸಾಧ್ಯವಾಗದಿರುವುದು, ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಅತ್ಯಂತ ಕಡಿಮೆ ಮತ ಪಡೆದರೆ ಉತ್ತರದಲ್ಲಿ ಪಕ್ಷಕ್ಕೆ ನೆಲೆ ಇಲ್ಲ ಎಂಬ ಅನಿಸಿಕೆಗೆ ಇನ್ನಷ್ಟು ಪುಷ್ಟಿ ನೀಡಿದಂತಾಗುತ್ತದೆ ಎಂಬ ಲೆಕ್ಕಾಚಾರದಲ್ಲಿ ಪಕ್ಷೇತರ ಅಭ್ಯರ್ಥಿ ಬೆಂಬಲಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಕಾಂಗ್ರೆಸ್‌ ಮತಬುಟ್ಟಿಗೆ ಕೈ ಹಾಕಲಿದ್ದು, ಇದು ಬಿಜೆಪಿಗೆ ಲಾಭ ತಂದುಕೊಡಬಲ್ಲದ್ದಾಗಿದೆ ಎಂಬುದು ಕೆಲವರ ಅನಿಸಿಕೆಯಾದರೂ, ಜೆಡಿಎಸ್‌ ಮೂಲಗಳು ಇದನ್ನು ಒಪ್ಪಲು ತಯಾರಿಲ್ಲ. ಬದಲಾಗಿ ಬಸವರಾಜ ಗುರಿಕಾರಗೆ ಗೆಲುವಾಗಲಿದೆ ನೋಡುತ್ತಿರಿ ಎನ್ನುತ್ತಿವೆ. ಹೀಗಾಗಿ ಕಾರ್ಯಕರ್ತರಲ್ಲಿ ಸಣ್ಣ ಅಸಮಾಧಾನ ಉಂಟಾಗಿದೆ.

ಹೊರಟ್ಟಿ ಮೂಲಕ ಮನವರಿಕ : ಶಿವಶಂಕರ ಕಲ್ಲೂರ ಅವರಿಗೆ ವಾಸ್ತವ ಸ್ಥಿತಿ ಹಾಗೂ ಯಾವ ಕಾರಣಕ್ಕೆ ಈ ನಿರ್ಣಯ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಮುಂಚಿತವಾಗಿ ತಿಳಿಸದೆ, ನಿರ್ಣಯ ಕೈಗೊಂಡ ನಂತರದಲ್ಲಿ ಮನವೊಲಿಕೆ ಕಾರ್ಯ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ ಹೊರಟ್ಟಿ ಅವರ ಮೂಲಕ ಮನವರಿಕೆ ಕಾರ್ಯ ಮಾಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಗುರಿಕಾರಗೆ ಬಲ : ಜೆಡಿಎಸ್‌ ನಾಯಕರು ಕೈಗೊಂಡ ನಿರ್ಧಾರದಿಂದ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಬಲ ಬಂದಂತಾಗಿದೆ. ಗುರಿಕಾರ ಅವರ ಬೆಂಬಲಿಗರೆಂದರೆ ಹೆಚ್ಚಿನವರು ಶಿಕ್ಷಕರು ಹಾಗೂ ನೌಕರರು. ಚುನಾವಣೆ ಪ್ರಚಾರದಲ್ಲಿ ಅವರು ಪಾಲ್ಗೊಳ್ಳಬಹುದೇ ವಿನಃ ಮತಗಟ್ಟೆ ಏಜೆಂಟರಾಗಲು ಬರುವುದಿಲ್ಲ. ಜೆಡಿಎಸ್‌ ಬೆಂಬಲದಿಂದಾಗಿ ಎಲ್ಲ ಮತಗಟ್ಟೆಗಳಿಗೂ ಏಜೆಂಟರು ಸುಲಭವಾಗಿ ಸಿಕ್ಕಂತಾಗಿದೆ ಎಂದು ಹೇಳಲಾಗುತ್ತಿದೆ.

 

-ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.