ಬೀಳಗಿ ಪಪಂಗೆ ಸಿದ್ಲಿಂಗೇಶ ಅಧ್ಯಕ್ಷ
Team Udayavani, Oct 24, 2020, 1:14 PM IST
ಬೀಳಗಿ: ಸ್ಥಳೀಯ ಪಟ್ಟಣ ಪಂಚಾಯತ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿಯ ಸಿದ್ಲಿಂಗೇಶ ಗುರುಬಸಪ್ಪ ನಾಗರಾಳ ಅಧ್ಯಕ್ಷರಾಗಿ ಹಾಗೂ ಕಾಮಪ್ಪ ಹನುಮಂತ ದಂಧರಗಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಆ ಮೂಲಕ ದಶಕಗಳ ನಂತರ ಮತ್ತೆ ಪಪಂ ಆಡಳಿತ ಬಿಜೆಪಿ ತೆಕ್ಕೆಗೆ ಬಂದಿದೆ.
ಬಿಜೆಪಿ 12, ಕಾಂಗ್ರೆಸ್ 5 ಹಾಗೂ ಪಕ್ಷೇತರ ಓರ್ವ ಸದಸ್ಯ ಸೇರಿ ಪಪಂನಲ್ಲಿ ಒಟ್ಟು 18 ಸದಸ್ಯ ಬಲವಿದೆ. ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ಬ ವರ್ಗ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗ ಮೀಸಲಾತಿ ಪ್ರಕಟವಾಗಿತ್ತು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆಯಾದ ಕಾರಣ, ಅಧ್ಯಕ್ಷರಾಗಿ ಸಿದ್ಲಿಂಗೇಶ ನಾಗರಾಳ ಮತ್ತು ಉಪಾಧ್ಯಕ್ಷರಾಗಿ ಕಾಮಪ್ಪ ದಂಧರಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಧಿಕಾರಿ ತಹಶೀಲ್ದಾರ್ ಭೀಮಪ್ಪ ಅಜೂರ ಅಧಿಕೃತ ಘೋಷಣೆ ಮಾಡಿದರು. ಸರಳ ಬಹಮತದ ಹಾದಿಯಲ್ಲಿರುವ ಬಿಜೆಪಿಯ ಎಲ್ಲ ಸದಸ್ಯರು ಹಾಗೂ ಓರ್ವ ಪಕ್ಷೇತರ ಸದಸ್ಯ ಅಜೀಜ ಬಾಯಿಸರಕಾರ ಹಾಗೂ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಮುರುಗೇಶ ನಿರಾಣಿ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು.
ಕಾಂಗ್ರೆಸ್ ಪಕ್ಷದ ಎಲ್ಲ ಐದು ಜನ ಸದಸ್ಯರು ಗೈರಾಗಿದ್ದರು. ಜಾಣ್ಮೆ ಮೆರೆದ ಬಿಜೆಪಿ ಮುಖಂಡರು: ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಮೇಲ್ನೋಟಕ್ಕೆ ತುರುಸಿನ ಕಣವಾಗಿ ಪರಿಣಮಿಸದಿದ್ದರೂ ಕೂಡ, ಬಿಜೆಪಿ ಆಂತರಿಕ ವಲಯದಲ್ಲಿ ಅಧ್ಯಕ್ಷ ಗಾದಿಗೆ ಹಲವರು ತೀವ್ರ ಪೈಪೋಟಿ ನೀಡಿದ್ದರು. ತಮ್ಮ ಸಮುದಾಯದ ಜನ ಮತ್ತು ಪಕ್ಷದ ಹಿರಿಯರಿಂದ ಶಾಸಕ ಮುರುಗೇಶ ನಿರಾಣಿ ಮೇಲೆ ಹಲವು ಆಕಾಂಕ್ಷಿಗಳು ಒತ್ತಡ ಹೇರುತ್ತಲೇ ಇದ್ದರು. ಎಲ್ಲ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುವುದರ ಜತೆಗೆ ಸಿದ್ಲಿಂಗೇಶ ನಾಗರಾಳ ಅವರನ್ನು ಅಧ್ಯಕ್ಷ ಗಾದಿಯಲ್ಲಿ ಕೂಡ್ರಿಸುವ ಅನಿವಾರ್ಯತೆಯ ಹಲವು ಮಾನದಂಡಗಳನ್ನು ಪಕ್ಷದ ಹಿರಿಯರ ಮತ್ತು ಪಪಂ ಸದಸ್ಯರ ಮುಂದಿಟ್ಟು ಎಲ್ಲರ ಒಳಬೇಗುದಿಯನ್ನು ಶಮನಗೊಳಿಸುವಲ್ಲಿ ಶಾಸಕ ಮುರುಗೇಶ ನಿರಾಣಿ ಹಾಗೂ ಪಕ್ಷದ ಮುಖಂಡರು ಜಾಣ್ಮೆ ಮೆರೆದಿದ್ದಾರೆ.
ವಿಜಯೋತ್ಸವ: ನೂತನ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಗುಲಾಲು ಎರಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಿಜಪ ತಾಲೂಕು ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಬಸವರಾಜ ಮೋದಿ, ಕೋಮಾರ ದೇಸಾಯಿ, ಮಲ್ಲಪ್ಪ ಶಂಭೋಜಿ, ಸಂಗಪ್ಪ ಕಟಗೇರಿ, ಬಸವರಾಜ ಬಿರಾದಾರ, ವಿಠuಲ ಬಾಗೇವಾಡಿ, ವಿಜಯಲಕ್ಷ್ಮೀ ಪಾಟೀಲ, ದಾಕ್ಷಾಯಿಣಿ ಜಂಬಗಿ, ವಿಠ್ಠಲ ಗಡ್ಡದವರ, ನಿಂಗಪ್ಪ ದಂಧರಗಿ, ರವಿ ಮದ್ರಾಸ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ
Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ
Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ
ಆನ್ಲೈನ್ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!
Online ವಂಚಕರಿದ್ದಾರೆ ಹುಷಾರ್..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ