ನೆರೆಯಿಂದ 37 ಗ್ರಾಮಗಳಿಗೆ ಹಾನಿ

ಸಿಎಂ ವೈಮಾನಿಕ ಸಮೀಕ್ಷೆಯಿಲ್ಲ

Team Udayavani, Oct 24, 2020, 1:53 PM IST

UK-TDY-1

ಸಾಂದರ್ಭಿಕ ಚಿತ್ರ

ಕಾರವಾರ: ಉತ್ತರ ಕನ್ನಡ ಜಿಲೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಸುರಿದ ಮಳೆಯಿಂದ ಜುಲೈನಲ್ಲಿ ಗಂಗಾವಳಿ, ಶರಾವತಿ ನದಿಗಳು ಉಕ್ಕಿ ಹರಿದಿದ್ದವು. ಆಗ ಪ್ರವಾಹದಿಂದ ನದಿ ದಂಡೆ ಮೇಲಿನ 37 ಗ್ರಾಮಗಳು ತೊಂದರೆಗೆ ಒಳಗಾಗಿದ್ದವು.

1615 ಜನರನ್ನು ನೆರೆ, ಪ್ರವಾಹದಿಂದ ರಕ್ಷಿಸಲಾಗಿತ್ತು. 2019ರಲ್ಲಿ ಬಂದ ನೆರೆ ಕಾರವಾರ ತಾಲೂಕಿನ ಕಾಳಿ ನದಿ ದಂಡೆ ಗ್ರಾಮಗಳ ಮನೆಗೆ ನೀರು ನುಗ್ಗಿ ಹೆಚ್ಚು ಹಾನಿಯುಂಟು ಮಾಡಿತ್ತು. 2020ರಲ್ಲಿ ಕಾಳಿ ನದಿ ಅಣೆಕಟ್ಟುಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾಗದಂತೆ ನೋಡಿಕೊಂಡ ಪರಿಣಾಮ ಕಾಳಿ ನದಿ ದಂಡೆಯ ಹತ್ತಾರು ಗ್ರಾಮಗಳ ಜನರು ನೆರೆಯಿಂದ ತಪ್ಪಿಸಿಕೊಂಡರು. ಆದರೆ ಗಂಗಾವಳಿ, ಅಘನಾಶಿನಿ, ಶರಾವತಿ ನದಿ ದಂಡೆಯ ಜನರಿಗೆ ಮಾತ್ರ ಸಂಕಷ್ಟ ತಪ್ಪಲಿಲ್ಲ. ನೆರೆ ನೀರು ಹತ್ತು ತಾಸು ಇದ್ದರೂ, ಹಲವು ತಾಸು ಮನೆಗೆ ನುಗ್ಗಿದರೂ ಆಗುವ ಹಾನಿ ಅಪಾರವಾದುದು.

ಪ್ರಸ್ತುತ 2020ರ ಮಳೆಗಾಲದಲ್ಲಿ ಹೊನ್ನಾವರದ 877 ಕುಟುಂಬಗಳು, ಅಂಕೋಲಾ ತಾಲೂಕಿನ 558, ಕುಮಟಾದ100, ಸಿದ್ದಾಪುರದ 8, ಯಲ್ಲಾಪುರ 2 ಹಾಗೂ ಕಾರವಾರ, ಮುಂಡಗೊಡದಲ್ಲಿ ತಲಾ ಒಂದೊಂದು ಕುಟುಂಬಗಳು ನೆರೆಯಿಂದಾಗಿ ಸಂಕಷ್ಟ ಎದುರಿಸಿದವು. ಈ ಎಲ್ಲ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಸಾವಿರದಂತೆ ಒಟ್ಟು 154.7 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ.

ಸಾವನ್ನಪ್ಪಿದವರಿಗೂ ಪರಿಹಾರ: ಅಂಕೋಲಾ, ಹಳಿಯಾಳ ಹಾಗೂ ಯಲ್ಲಾಪುರ ತಾಲೂಕಿನಲ್ಲಿ ತಲಾ ಒಬ್ಬರು, ಕುಮಟಾದಲ್ಲಿ ನಾಲ್ವರು ನೆರೆಗೆ ಸಿಕ್ಕು ಸಾವನ್ನಪ್ಪಿದ್ದರು. ಮೃತಪಟ್ಟವರ ಕುಟುಂಬದವರಿಗೆ ತಲಾ 5 ಲಕ್ಷದಂತೆ ಒಟ್ಟು,7 ಕುಟುಂಬಗಳಿಗೆ 40 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. 43 ಜಾನುವಾರು ಮೃತಪಟ್ಟಿದ್ದು, ಜಾನವಾರು ಮಾಲೀಕರಿಗೆ 9.86 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ: ನೆರೆ ಬಂದ ಸಮಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ್‌ ಕುಮಟಾ, ಹೊನ್ನಾವರ ತಾಲೂಕಿಗೆ ಭೇಟಿ ನೀಡಿದ್ದರು. ಮಳೆ ಕಡಿಮೆಯಾದ ನಂತರ ಕಂದಾಯ ಸಚಿವ ಆರ್‌.ಅಶೋಕ ಒಮ್ಮೆ ಹೊನ್ನಾವರಕ್ಕೆ ಬಂದು ಪರಿಹಾರ ಕಾರ್ಯದ ಮಾಹಿತಿ ಪಡೆದಿದ್ದರು. ಮನೆ ನಿರ್ಮಿಸಲು ಇರುವ ಅರಣ್ಯ ಅತಿಕ್ರಮಣ ಭೂಮಿಯಲ್ಲಿ ಪಟ್ಟಾ ಇಲ್ಲದೇ ಮನೆ ನಿರ್ಮಾಣಕ್ಕೆ ಅನುಮತಿ ಕೊಡಿಸಲು ಪ್ರಯತ್ನಿಸುವುದಾಗಿ ಹೇಳಿದ್ದರು. ಮುಖ್ಯಮಂತ್ರಿಗಳಿಂದ ಉತ್ತರ ಕನ್ನಡದಲ್ಲಿ ವೈಮಾನಿಕ ಸಮೀಕ್ಷೆ ನಡೆದಿಲ್ಲ. ನೆರೆಯಿಂದಾಗಿ ಮನೆ ಬಿದ್ದು ಹಾನಿ: 13 ಮನೆಗಳು ವಾಸಕ್ಕೆ ಯೋಗ್ಯ ಇಲ್ಲದಂತೆ ನೆಲಸಮವಾಗಿದ್ದವು. 157 ಮನೆ ತೀವ್ರ ಹಾನಿಯಾಗಿವೆ. 969 ಮನೆ ಭಾಗಶಃ ಹಾನಿಯಾಗಿವೆ.  43 ಜಾನುವಾರು ಪ್ರಾಣ ಕಳೆದುಕೊಂಡಿವೆ. ಜೀವ ಹಾನಿಯಾದವರಿಗೆ ಪರಿಹಾರ ವಿತರಿಸಲಾಗಿದೆ. ನೆರೆ ಸಂತ್ರಸ್ತರಾದ 1547 ಜನರಿಗೆ ತಲಾ 10 ಸಾವಿರ ರೂ.ದಂತೆ 154.7 ಲಕ್ಷ ರೂ. ವಿತರಿಸಲಾಗಿದೆ.

ರಸ್ತೆ ಹಾನಿ: ಗ್ರಾಮೀಣ, ರಾಜ್ಯ ಹೆದ್ದಾರಿ ಸೇರಿ 1541 ಕಿಮೀ ರಸ್ತೆ ಹಾಳಾಗಿದೆ. 24667 ಲಕ್ಷ ರೂ. ಮೊತ್ತದ ರಸ್ತೆ ಹಾನಿಯಾಗಿದೆ. 276 ಸೇತುವೆ ಹಾಳಾಗಿವೆ.

5439 ಲಕ್ಷ ರೂ. ಸೇತುವೆಗಳಿಂದ ಹಾನಿಯಾಗಿದೆ. 1086.35 ಹೆಕ್ಟೇರ್‌ ಕೃಷಿ ಭೂಮಿ ಹಾನಿಗೆ ತುತ್ತಾಗಿದೆ. 499.35 ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಪ್ರವಾಹದಿಂದ 37 ಗ್ರಾಮಗಳು ತೊಂದರೆಗೆ ಒಳಗಾಗಿವೆ. 1615 ಜನರನ್ನು ನೆರೆ, ಪ್ರವಾಹದಿಂದ ರಕ್ಷಿಸಲಾಗಿದೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.