ವಿಜಯಪುರ: ಭೀಮಾ ತೀರದ ಹೆಸರಿನಲ್ಲಿ ಸುಲಿಗೆ ನಡೆಸಿದ ಮೂವರ ಬಂಧನ


Team Udayavani, Oct 24, 2020, 2:38 PM IST

ವಿಜಯಪುರ: ಭೀಮಾ ತೀರದ ಹೆಸರಿನಲ್ಲಿ ಸುಲಿಗೆ ನಡೆಸಿದ ಮೂವರ ಬಂಧನ

ವಿಜಯಪುರ: ಹತ್ಯೆಯಾಗಿರುವ ಭೀಮಾ ತೀರದ ಧರ್ಮರಾಜ ಚಡಚಣ ಹೆಸರಿನಲ್ಲಿ ಔಷಧಿ ಸಸ್ಯ ಉದ್ಯಮಿಯಿಂದ 1.37 ಲಕ್ಷ ರೂ. ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಸುಲಿಗೆಕೋರ ಆರೋಪಿಗಳನ್ನು ಕನ್ನೂರು ಗ್ರಾಮದ ಮುರಿಗೆಪ್ಪ ಉರುಫ್ ಅಪ್ಪು ನಾಗಪ್ಪ ಬೆಳ್ಳುಂಡಗಿ, ಬಸವರಾಜ ಸಿದ್ಧಲಿಂಗಪ್ಪ ಬೆಳ್ಳುಂಡಗಿ, ಮಕಣಾಪುರ ಗ್ರಾಮದ ದೇವೇಂದ್ರ ಮಹಾದೇವ ಒಡೆಯರ ಎಂದು ಗುರುತಿಸಲಾಗಿದೆ ಎಂದು ಎಸ್ಪಿ ಅನುಪಮ್ ಅಗರವಾಲ್ ವಿವರ ನೀಡಿದ್ದಾರೆ.

ಔಷಧಿ ಸಸ್ಯ ಉದ್ಯಮಿಯಾಗಿರುವ ನಗರದ ಗಚ್ಚಿಕಟ್ಟಿ ನಿವಾಸಿ ದೇವೇಂದ್ರ ಅಪ್ಪಾಸಾಹೇಬ ಒಡೆಯರ ಎಂಬವರಿಗೆ ಆ.15 ರಂದು ಕರೆ ಮಾಡಿ ಸಸಿಗಳನ್ನು ಖರೀದಿ ಮಾಡುವುದಿದೆ ಎಂದು ಆರೋಪಿಗಳು ಮೊಬೈಲ್ ಕರೆ ಮಾಡಿದ್ದಾರೆ. ಔಷಧಿ ಸಸ್ಯಗಳ ಖರೀದಿ ಕುರಿತು ಮಾತನಾಡಲು ಶಿರನಾಳ-ಬಬಲಾದ ಮಧ್ಯದ ಸ್ಥಳಕ್ಕೆ ಬರುವಂತೆ ಕರೆಸಿಕೊಂಡು ತಗಾದೆ ಆರಂಭಿಸಿದ್ದಾರೆ.

ನಾವು ಧರ್ಮರಾಜ ಚಡಚಣ ಕಡೆಯವರಿದ್ದು, ನೀನು ಮಹಿಳೆಯರಿಗೆ ಮೋಸ ಮಾಡಿದ್ದೀಯಾ ಹಾಗೂ ನಿನ್ನ ಕಛೇರಿಯಲ್ಲಿರುವ ಮಹಿಳೆಯನ್ನು ಇರಿಸಿಕೊಂಡಿದ್ದಿ. ನಿನ್ನನ್ನು ಹತ್ಯೆ ಮಾಡಿ ಹೊಳೆಗೆ ಎಸೆಯುತ್ತೇವೆ, ಹತ್ಯೆಯಿಂಧ ತಪ್ಪಿಸಿಕೊಳ್ಳಲು 1.20 ಲಕ್ಷ ರೂ. ಕೊಡುವಂತೆ ಬೆದರಿಕೆ ಹಾಕಿ ಹಣ ತರಿಸಿಕೊಂಡು, ಆತನ ಬಳಿ ಇದ್ದ ಮೊಬೈಲ್ ಕೂಡ ಕಿತ್ತುಕೊಂಡಿದ್ದರು.

ಇದನ್ನೂ ಓದಿ:ಭಾರತದಲ್ಲಿ ಟ್ರಂಪ್ ಕಾರ್ಯಕ್ರಮ ಮಾಡದಿದ್ದರೆ ಕೋವಿಡ್ ಹರಡುತ್ತಿರಲಿಲ್ಲ: ರಾಮಲಿಂಗಾ ರೆಡ್ಡಿ

ಘಟನೆಯ ಕುರಿತು ಮೋಸಕ್ಕೆ ಸಿಕ್ಕಿ ಸುಲಿಗೆಗೆ ಗುರಿಯಾಗದ ದೇವೇಂದ್ರ ಒಡೆಯರ, ವಿಜಯಪುರ ಗ್ರಾಮೀಣ ಠಾಣೆ ಪೊಲೀಸರಿಗೆ ದೂರು ನೀಡಿದ್ದ. ಎಸ್ ಪಿ ಅನುಮಮ ಅಗರವಾಲ್, ಎಎಸ್ ಪಿ ರಾಮ ಅರಸಿದ್ಧಿ ಮಾರ್ಗದರ್ಶನದಲ್ಲಿ ತನಿಖೆಗೆ ಇಳಿದ ವಿಜಯಪುರ ಗ್ರಾಮೀಣ ಸಿಪಿಐ ಮಹಾಂತೇಶ ದಾಮಣ್ಣವರ ನೇತೃತ್ವದ ಪೊಲೀಸರ ತಂಡ ಚಾಣಾಕ್ಷತನದಿಂದ ಆರೋಪಿಗಳನ್ನು ಬಂಧಿಸಿ, ಜೈಲಿಗೆ ಕಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ಬಂಧಿಸುವಲ್ಲಿ ನೆರವಾದ ತನಿಖಾ ತಂಡದಲ್ಲಿದ್ದ ಎಸ್ ಐಗಳಾದ ಆನಂದ ಠಕ್ಕಣ್ಣವರ, ಆರ್.ಎ.ದಿನ್ನಿ, ಸಿಬ್ಬಂದಿಗಳಾದ ಎಂ.ಎಸ್.ಮುಜಾವರ, ಗುರು ಹಡಪದ, ಎಲ್.ಎಸ್.ಹಿರೇಗೌಡರ, ಆರ್.ಜಿ.ಅಂಜುಟಗಿ, ಪರಶುರಾಮ ವಲೀಕಾರ, ರವಿ ನಾಟೀಕರ, ಐ.ವೈ.ದಳವಾಯಿ, ಎಸ್.ಎಚ್.ಡೊಣಗಿ, ಎಸ್.ಆರ್.ಪೂಜಾರಿ ಇತರರಿಗೆ ಎಸ್ ಪಿ ಬಹುಮಾನ ಘೋಷಿಸಿದ್ದಾರೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.