ನರೇಗಾ ಕಾರ್ಮಿಕರಿಗೆ ಸಿಕ್ಕಿಲ್ಲ ಕೂಲಿ ಹಣ


Team Udayavani, Oct 25, 2020, 3:39 PM IST

bg-tdy-1

ಬೆಳಗಾವಿ: ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡು ಉದ್ಯೋಗ ಖಾತ್ರಿಯಲ್ಲಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಕಳೆದ ಆರು ತಿಂಗಳಿಂದ ವೇತನ ನೀಡದೇ ಅನ್ಯಾಯ ಮಾಡಿರುವ ಸುಳೇಭಾವಿ ಗ್ರಾಪಂ ವಿರುದ್ಧ ಕಾರ್ಮಿಕರು ಕೆಲಸ ನಿಲ್ಲಿಸಿ ಶನಿವಾರ ಆಕ್ರೋಶ ವ್ಯಕ್ತಪಡಿಸಿದರು.

ಸುಳೇಭಾವಿ ಗ್ರಾಪಂನಲ್ಲಿ ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಪಿಡಿಒ ಶ್ರೀದೇವಿ ಹಿರೇಮಠ ಹಾಗೂ ನರೇಗಾ ಅಧಿಕಾರಿಗಳಿಗೆ ಹಿಡಿಶಾಪ ಹಾಕಿ ಕೂಲಿ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.

ನೇಕಾರಿಕೆ ಉದ್ಯೋಗ ಮಾಡುತ್ತಿದ್ದ ಅನೇಕ ನೇಕಾರರು ಲಾಕ್‌ಡೌನ್‌ದಿಂದಾಗಿ ಕೆಲಸ ಕಳೆದುಕೊಂಡು ನರೇಗಾ ಕೂಲಿ ಕೆಲಸಕ್ಕೆ ಅರ್ಜಿ ಹಾಕಿ ದುಡಿಯುತ್ತಿದ್ದಾರೆ. ಕಳೆದ ಆರೇಳು ತಿಂಗಳಿಂದ ದಿನಾಲೂ ಪಂಚಾಯಿತಿ ನಿಗದಿ ಪಡಿಸಿದ ಕೆಲಸ ಮಾಡುತ್ತಿದ್ದಾರೆ. ಆದರೆ ಪಿಡಿಒ ಹಿರೇಮಠ ಅವರ ಬೇಜವಾಬ್ದಾರಿ ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಕೂಲಿ ವೇತನ ಸಿಕ್ಕಿಲ್ಲ. ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಆರೋಪಿಸಿದರು.

ನೇಕಾರಿಕೆ ಉದ್ಯೋಗ ಸಂಪೂರ್ಣ ಕುಸಿದು ಬಿದ್ದಿದ್ದರಿಂದ ಕೂಲಿ ಕೆಲಸ ಮಾಡಿಯಾದರೂ ಬದುಕು ಸಾಗಿಸಬೇಕೆಂಬ ಕಾರ್ಮಿಕರ ಆಸೆಗೆ ಸುಳೇಭಾವಿ ಪಂಚಾಯಿತಿಯ ಅಧಿಕಾರಿಗಳು ತಣ್ಣೀರು ಎರಚಿದ್ದಾರೆ. ದುಡಿದ ಆರು ತಿಂಗಳ ವೇತನ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಉದ್ಯೋಗ ಖಾತ್ರಿ ಕೆಲಸ ಬಂದ್‌ ಮಾಡುವುದಾಗಿ ಎಚ್ಚರಿಕೆ ನೀಡಿದರು.

ನರೇಗಾ ಕೂಲಿ ಕಾರ್ಮಿಕರಾದ ನಾಗಪ್ಪ ಹುಡೇದ, ಬಾಳಕೃಷ್ಣ ನಿಂಗನಗೌಡ, ಲಕ್ಷ್ಮಣ ಅಮಾತಿ, ಭೀಮಶಿ ಕೌತಗಾರ, ಟೋಪಣ್ಣ ಪಂಕು, ಗೀತಾ ಮೂಕನವರ, ಸೇವಂತಾ ಭೈರಪ್ಪನವರ, ಸಕ್ಕುಬಾಯಿ ಧರ್ಮೋಜಿ ಇನ್ನಿತರರಿದ್ದರು.

 ಇಸ್ಲಾಂಪುರ ಗ್ರಾಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ :

ಯಮಕನಮರಡಿ: ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಪಂನಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಕಾರ್ಮಿಕರಿಗೆ ಮೋಸ ಮಾಡಿ ಹಣ ಲಪಟಾಯಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂಗೆ ಶನಿವಾರ ಕೂಲಿ ಕಾರ್ಮಿಕ ಮಹಿಳೆಯರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕಟಾಬಳಿ, ಬೀರನಹೊಳಿ, ಜಾರಕಿಹೊಳಿ, ಹಳೆವಂಟಮೂರಿ, ಕಾಮಕಟ್ಟಿ, ಕಲ್ಲಟ್ಟಿ ಗ್ರಾಮದ ನೂರಾರು ಕೂಲಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕೆಂದು ಗ್ರಾಪಂ ವಿರುದ್ಧ ಘೋಷಣೆ ಕೂಗಲಾಯಿತು. ಲಕ್ಷ್ಮೀ ಬಸರಗಿ, ಯಲ್ಲವ್ವಾ ಕಾಟೆ, ಮಹಾದೇವಿ ಕೋಪ್ರಿ, ಸತ್ಯಪ್ಪಾ ಬಾಲದಿಂಡಿ ಮಾತನಾಡಿ, ಇಸ್ಲಾಂಪುರ ಗ್ರಾಪಂ ವ್ಯಾಪ್ತಿಯ ಸುತ್ತಮುತ್ತಲಿನ ಹಳ್ಳಿಯ ಜನರು ಪ್ರತಿದಿನ

ಒಟ್ಟಾಗಿ ಕೂಲಿ ಕೆಲಸ ಮಾಡುತ್ತೇವೆ. ಆದರೆ ಕೂಲಿ ವೇತನ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಪ್ರಶ್ನಿಸಿದರೆ ಬಾಯಿಗೆ ಬಂದಂತೆ ಬಯ್ಯುತ್ತಾರೆ. ಕೆಲ ಜನರು ಕೂಲಿ ಮಾಡದೆ ಹಣ ಪಡೆಯುತ್ತಿದ್ದಾರೆ. ನಿಜವಾಗಿ ದುಡಿಯುವರಿಗೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿದರು.

ಪಿಡಿಒ ಹಾಗೂ ಗಣಕಯಂತ್ರ ಸಿಬ್ಬಂದಿ ಮಧ್ಯಾಹ್ನ ಆದರೂ ಪಂಚಾಯತಿ ಕಡೆ ಸುಳಿಯಲಿಲ್ಲ. ಮಹಿಳೆಯರು ಬಿಸಿಲಿನಲ್ಲೇ ಪಂಚಾಯತಿ ಆವರಣದಲ್ಲಿ ಧರಣಿ ಕುಳಿತರು. ಪಿಡಿಒ ಮತ್ತು ಗಣಕಯಂತ್ರ ಸಿಬ್ಬಂದಿಯನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು. ಯಾವ ಒಬ್ಬ ಅಧಿಕಾರಿಯು ಸ್ಥಳಕ್ಕೆ ಸುಳಿಯದ್ದರಿಂದ ಬಡಕೂಲಿ ಕಾರ್ಮಿಕರು ಮನೆಯತ್ತ ಮುಖ ಮಾಡಿದರು. ಗ್ರಾಮದ ಮುಖಂಡ ಮಲ್ಲಪ್ಪಾ ಖೋತಗಿ ಮೊದಲಾದವರು ಪ್ರತಿಭಟನೆಯಲ್ಲಿದ್ದರು.

 

ಇಸ್ಲಾಂಪುರ ಗ್ರಾಪಂ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯ ಕುರಿತು ಈಗಾಗಲೇ ಹುಕ್ಕೇರಿ ತಾಪಂ ಇಒ ಹಾಗೂ ಬೆಳಗಾವಿ ಜಿಪಂ ಸಿಇಒಗೆ ಮನವಿ ನೀಡಿದ್ದೇವೆ. ಯಾವುದೇ ಪ್ರಯೋಜನ ಆಗಿಲ್ಲ. ಇಲ್ಲಿ ಇದ್ದ ಪಿಡಿಒ ಹಾಗೂ ಗಣಕಯಂತ್ರ ಸಿಬ್ಬಂದಿ ಕಾಣೆಯಾಗಿದ್ದಾರೆ. ಬಡಕೂಲಿ ಕಾರ್ಮಿಕರಿಗೆ ಅನ್ಯಾಯವಾಗಿದೆ. ಕೂಡಲೇ ಅಧಿಕಾರಿಗಳು ಬಡವರ ಗೊಳು ಕೇಳಬೇಕು. ಕವಿತಾ ಮುರುಕಟ್ಟೆ, ನರೇಗಾ ಕೂಲಿ ಕಾರ್ಮಿಕರ ಮುಖ್ಯಸ್ಥೆ

 

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.