ಗಾಯಕ್ವಾಡ್ ಮನಮೋಹಕ ಅರ್ಧಶತಕ: ಚೆನ್ನೈ ಎದುರು ಮುಗ್ಗರಿಸಿದ ಆರ್ ಸಿಬಿ


Team Udayavani, Oct 25, 2020, 6:41 PM IST

RCB

ದುಬೈ: ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ನೀಡಿದ 145 ರನ್ ಗಳ  ಸಾಧಾರಣ ಮೊತ್ತವನ್ನು ಬೆನ್ನತ್ತಿದ್ದ ಚೆನ್ನೈ ಸೂಪರ್ ಕಿಂಗ್ಸ್ 2 ವಿಕೆಟ್ ನಷ್ಟಕ್ಕೆ  150 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿದೆ.

ರುತುರಾಜ್ ಗಾಯಕ್ವಾಡ್ ಮನಮೋಹಕ ಅರ್ಧಶತಕ ಮತ್ತು ಮಧ್ಯಮ ಕ್ರಮಾಂಕದ ಸಮಯೋಚಿತ ಆಟದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ಆರ್ ಸಿಬಿ ಎದುರು ಭರ್ಜರಿ ಜಯಸಾಧಿಸಿದೆ.

ಚೆನ್ನೈ ಪರ ಕಣಕ್ಕಿಳಿದ ರುತುರಾಜ್ ಗಾಯಕ್ ವಾಡ್ ಮತ್ತು ಫಾಫ್ ಡು ಪ್ಲೆಸಿಸ್ ತಂಡಕ್ಕೆ  ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್ ಗೆ 46 ರನ್ ಗಳ ಜೊತೆಯಾಟ ನಡೆಸಿತು. ಡುಪ್ಲೆಸಿಸ್ 2 ಸಿಕ್ಸ್ ಹಾಗೂ 2 ಪೋರ್ ಮೂಲಕ 13 ಎಸೆತಗಳಲ್ಲಿ 25 ರನ್ ಗಳಿಸಿದ್ದ ವೇಳೆ ಕ್ರಿಸ್ ಮೋರಿಸ್ ಎಸೆತದಲ್ಲಿ ಸಿರಾಜ್ ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ನಂತರ ಗಾಯಕ್ವಾಡ್ ಜೊತೆಯಾದ ಅಂಬಟಿ ರಾಯುಡು, ಬೆಂಗಳೂರು ಬೌಲರ್ಸ್ ಗಳ ಬೆವರಿಳಿಸಿದರು. ಬೌಂಡರಿ ಸಿಕ್ಸರ್ ಗಳ ಸುರಿಮಳೆಗೈದ ಈ ಜೋಡಿ ತಂಡದ ಮೊತ್ತವನ್ನು 113ರ ಗಡಿ ತಲುಪಿಸಿದರು. ಈ ವೇಳೆ ದಾಳಿಗಿಳಿದ ಚಹಲ್, 2 ಸಿಕ್ಸರ್ ಮೂಲಕ 39 ರನ್ ಗಳಿಸಿದ್ದ, ರಾಯಡುವನ್ನು ಔಟ್ ಮಾಡುವ ಮೂಲಕ ತಂಡಕ್ಕೆ ಅಲ್ಪ ಭರವಸೆ ನೀಡಿದರು. ‘

ಮತ್ತೊಂದೆಡೆ ಗಾಯಕ್ವಾಡ್  ಏಕಾಂಗಿಯಾಗಿ ಹೋರಾಡಿ ಐಪಿಎಲ್ 13ನೇ ಆವೃತ್ತಿಯ ಮೊದಲ ಅರ್ಧಶತಕ ಸಿಡಿಸಿದರು. 51 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 4 ಬೌಂಡರಿಗಳ ನೆರವಿನಿಂದ 65 ರನ್ ಗಳಿಸಿದ ಗಾಯಕ್ವಾಡ್ ನಾಟೌಟ್ ಆಗಿ ಉಳಿದರು. ಕೊನೆಯಲ್ಲಿ ನಾಯಕ ಧೋನಿ ಕೂಡ ಪಂದ್ಯವನ್ನು ಗೆಲ್ಲಿಸುವಲ್ಲಿ ಮಹತ್ವದ ಪಾತ್ರವಹಿಸಿದರು. 21 ಎಸೆತಗಳಲ್ಲಿ 3 ಬೌಂಡರಿ ಸಹಿತ 19 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಅಂತಿಮವಾಗಿ ಚೆನ್ನೈ 18. 4ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 150 ರನ್ ಗಳಿಸುವ ಮೂಲಕ ಜಯಭೇರಿ ಬಾರಿಸಿತು. ಬೆಂಗಳೂರು ಪರ ಕ್ರಿಸ್ ಮೋರಿಸ್ ಹಾಗೂ ಯಜುವೇಂದ್ರ ಚಹಾಲ್ ತಲಾ 1 ವಿಕೆಟ್ ಪಡೆದರು.

ಇದಕ್ಕೂ ಮೊದಲು ನಾಯಕ ಕೊಹ್ಲಿ ಭರ್ಜರಿ ಅರ್ಧಶತಕ ಹಾಗೂ ಎಬಿಡಿ ಗಳಿಸಿದ 39 ರನ್ ಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ  146 ರನ್ ಗಳ ಅಲ್ಪ ಮೊತ್ತವನ್ನು ಪೇರಿಸಿತ್ತು. ಆರ್ ಸಿಬಿಯನ್ನು ತನ್ನ ಮಾರಕ ಬೌಲಿಂಗ್ ಮೂಲಕ ಕಟ್ಟಿಹಾಕಿದ ಮೋನು ಕುಮಾರ್ 3 ವಿಕೆಟ್ ಗಳಿಸಿದರೆ, ಸ್ಯಾಮ್ ಕರನ್ 2 ವಿಕೆಟ್ ಪಡೆದು ಮಿಂಚಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.