ನಾಡ ಹಬ್ಬ: ಅಂಬಾರಿ ಹೊರುವ ಆನೆಗಳ ಬಗ್ಗೆ ಒಂದಿಷ್ಟು ಕುತೂಹಲದ ಮಾಹಿತಿ

ಡಾ.ರಾಜ್‌ಕುಮಾರ್‌ ಅವರು ಈ ಆನೆಯ ಮೇಲೆ ಕುಳಿತು ನಾವಾಡುವ ನುಡಿಯೇ ಕನ್ನಡ ನುಡಿ ಎನ್ನುವ ಹಾಡನ್ನು ಹಾಡಿದ್ದು

Team Udayavani, Oct 26, 2020, 10:39 AM IST

ನಾಡ ಹಬ್ಬ: ಅಂಬಾರಿ ಹೊರುವ ಆನೆಗಳ ಬಗ್ಗೆ ಒಂದಿಷ್ಟು ಕುತೂಹಲದ ಮಾಹಿತಿ

ಮೈಸೂರು: ನಾಡ ಹಬ್ಬ ಮೈಸೂರು ದಸರಾದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಕ್ಕೂ ಇತಿಹಾಸವಿದೆ. ಹಾಗೆಯೇ 750 ಕೆ.ಜಿ. ತೂಕದ ಚಿನ್ನದ ಅಂಬಾರಿ ಹೊತ್ತೂಯ್ಯುವ ಗಜ ಪಡೆಗೂ ಒಂದು ಇತಿಹಾಸವಿದೆ. ಅಂಬಾರಿ ಹೊರುವ ಆನೆಗಳ ಬಗ್ಗೆ ಒಂದಿಷ್ಟು ಕುತೂಹಲದ ಮಾಹಿತಿ ಇಲ್ಲಿದೆ.

ಅಂಬಾರಿಯನ್ನು ಮೊದಲ ಬಾರಿಗೆ ಹೊತ್ತ ಆನೆಯ ಹೆಸರು ಜಯಮಾರ್ತಾಂಡ. ಇದು ಕೃಷ್ಣದೇವರಾಯ ಒಡೆಯರ್‌ ಕಾಲದಲ್ಲಿ ಪಿರಿಯಾಪಟ್ಟಣದ ಬೆಟ್ಟದಪುರದ ಬಳಿ ಸೆರೆಸಿಕ್ಕ ಗಜ ಇದು. ಈ ಆನೆ , ಕೃಷ್ಣದೇವರಾಯ ಒಡೆಯರ್‌ ಕಾಲದಿಂದ ಪ್ರಾರಂಭವಾದ ವಿಜಯದಶಮಿಯಿಂದ ಸುಮಾರು 45 ವರ್ಷಗಳ ಕಾಲ ಚಿನ್ನದ ಅಂಬಾರಿಯನ್ನು ಹೊತ್ತು ಒಡೆಯರ ಪ್ರೀತಿಗೆ ಕಾರಣವಾಗಿತ್ತು. ಇದರ ಸವಿನೆನಪಿಗಾಗಿಯೇ ಅರಮನೆಯ ಮಹದ್ವಾರ ಒಂದಕ್ಕೆ ಜಯಮಾರ್ತಾಂಡ ಎಂದು ಹೆಸರಿಡಲಾಗಿದೆ.

ಈ ಆನೆಯ ನಂತರ ವಿಜಯಬಹದ್ದೂರ್‌, ನಂಜುಂಡ, ರಾಮಪ್ರಸಾದ್‌, ಮೋತಿಲಾಲ್‌, ಸುಂದರ್‌ ರಾಜ್‌, ಐರಾವತ ಎನ್ನುವ ಹೆಸರಿನ ಆನೆಗಳು ಜಂಬೂ ಸವಾರಿಯಲ್ಲಿ ಪಾಲ್ಗೊಂಡಿದ್ದವು. ಇವುಗಳಲ್ಲಿ ಐರಾವತ ಆನೆ ಬಹು ಬೇಡಿಕೆಯ ಆನೆಯಾಗಿ ಗಮನ ಸೆಳೆಯುತ್ತದೆ.

ಇದನ್ನೂ ಓದಿ:401ನೇ ಜಂಬೂ ಸವಾರಿ; ಅಭಿಮನ್ಯುಗೆ ಚೊಚ್ಚಲ ಅಂಬಾರಿ

ಯಾಕೆಂದರೆ ಈ ಆನೆ ಕೇವಲ ಜಂಬೂ ಸವಾರಿಯಲ್ಲಿ ಮಾತ್ರವಲ್ಲ 1937ರಲ್ಲಿ ಸಾಕ್ಷ್ಯಚಿತ್ರಗಳ ನಿರ್ದೇಶಕ ರಾಬರ್ಟ್‌ ಜೆ ಫ್ಲೆಹೆರ್ಥಿ ನಿರ್ದೇಶಿಸಿದ ದಿ ಎಲಿಫೆಂಟ್‌ ಬಾಯ್‌ ಸಿನಿಮಾಕ್ಕೂ ಬಳಸಿಕೊಳ್ಳಲಾಯಿತು. ಚಿತ್ರಕ್ಕೆ ಆನೆ ಕಾವಾಡಿಗ ಏಳು ವರ್ಷದ ಹುಡುಗ ಮೈಸೂರು ಸಾಬು ಅವರನ್ನು ನಾಯಕನನ್ನಾಗಿ ತೆರೆಗೆ ತರಲಾಯಿತು. ಇದು ವಿಶ್ವದಾದ್ಯಂತ ಪ್ರದರ್ಶನಗೊಂಡು ಜನರ ಮೆಚ್ಚುಗೆಗೆ ಪಾತ್ರವಾಗಿದ್ದು ಇತಿಹಾಸ. ಇದಾದ ನಂತರ ಗಜೇಂದ್ರ ಹಾಗೂ ಬಿಳಿಗಿರಿ ಜಂಬೂ ಸವಾರಿಯಲ್ಲಿ ಅಂಬಾರಿ ಯನ್ನು ಹೊತ್ತು ಸಾಗಿದವು. ರಾಜೇಂದ್ರ, ಈ ಆನೆಯನ್ನು ಮೈಸೂರು ದಸರಾಕ್ಕೆ ಹೋಗದಿದ್ದರೂ ನೀವೆಲ್ಲರೂ ನೋಡಿದ್ದೀರಿ.

ಕಾರಣ 1973ರಲ್ಲಿ ತೆರೆ ಕಂಡ ವಿಜಯ್‌ ನಿರ್ದೇಶನದ ಗಂಧದ ಗುಡಿ ಚಿತ್ರದಲ್ಲಿ ಡಾ.ರಾಜ್‌ಕುಮಾರ್‌ ಅವರು ಈ ಆನೆಯ ಮೇಲೆ ಕುಳಿತು ನಾವಾಡುವ ನುಡಿಯೇ ಕನ್ನಡ ನುಡಿ ಎನ್ನುವ ಹಾಡನ್ನು ಹಾಡಿದ್ದು. ಚಿತ್ರದುದ್ದಕ್ಕೂ ಇದು ಭಾಗವಹಿಸಿದೆ. ಡಾ. ರಾಜ್‌ ಕುಮಾರ್‌ ಅವರಿಗೆ ಅಚ್ಚುಮೆಚ್ಚಿನ ಆನೆ ಇದಾಗಿತ್ತು.

ಗಜೇಂದ್ರ ಮತ್ತು ಬಿಳಿಗಿರಿ ನಂತರ ಅಂಬಾರಿ ಹೊರುವ ಜವಾಬ್ದಾರಿ ದ್ರೋಣ ಹೆಸರಿನ ಆನೆಗೆ ಒಲಿಯಿತು. ಇದು 18 ವರ್ಷಗಳ ಕಾಲ ಅಂಬಾರಿ ಹೊತ್ತು ಗಮನ ಸೆಳೆಯಿತು. ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ದಿ ಸೋರ್ಡ್‌ ಆಫ್ ಟಿಪ್ಪು ಸುಲ್ತಾನ್‌ ಎನ್ನುವ ಜನಪ್ರಿಯ ಧಾರಾವಾಹಿಯಲ್ಲಿ ಟಿಪ್ಪು ಪಾತ್ರಧಾರಿಯನ್ನು ಹೊತ್ತೂಯ್ದದ್ದು ಇದೇ ಆನೆ. ಇದು ಸುಮಾರು 10.25 ಅಡಿ ಎತ್ತರ, 6,400 ಕೆ.ಜಿ ತೂಕವಿತ್ತು.

1998ರಲ್ಲಿ ವಿದ್ಯುತ್‌ ತಂತಿ ತಗುಲಿ ದುರಂತ ಸಾವು ಕಂಡಿತು. ಆನಂತರ ಅರ್ಜುನ ಒಂದು ಬಾರಿ ಮಾತ್ರ ಅಂಬಾರಿಯನ್ನು ಹೊತ್ತ. ಅತಿ ಕೋಪಿಷ್ಟ ಅರ್ಜುನ ಮಾವುತನನ್ನೇ ಕೊಂದು ಅಂಬಾರಿ ಹೊರುವ ಅವಕಾಶದಿಂದ ವಂಚಿತನಾದ. ಬಳಿಕ ಶಾಂತ ಸ್ವಭಾವದ ಬಲರಾಮನಿಗೆ ಅಂಬಾರಿ ಹೊರಿಸಲಾಯಿತು. 1987ರಲ್ಲಿ ಕಟ್ಟೆಪುರದಲ್ಲಿ ಬಲರಾಮನನ್ನು ಸೆರೆ ಹಿಡಿಯಲಾಯಿತು.

ಇದನ್ನೂ ಓದಿ:ಜಂಬೂ ಸವಾರಿಗೆ ಸಿದ್ದವಾಗುತ್ತಿದೆ ಅಭಿಮನ್ಯು ನೇತೃತ್ವದ ಗಜಪಡೆ: ಇಲ್ಲಿದೆ ಆಕರ್ಷಕ ಚಿತ್ರಗಳು

ಇದರ ಜತೆಗೆ ಇನ್ನೂ ನಾಲ್ಕು ಆನೆಗಳನ್ನು ಸೆರೆ ಹಿಡಿಯಲಾಗಿತ್ತು. ಹನ್ನೊಂದು ವರ್ಷದ ಬಲರಾಮನಿಗೆ ನಿವೃತ್ತಿ ನೀಡಲಾಯಿತು. ನಂತರ ಮತ್ತೆ ಅರ್ಜುನ ಆನೆಗೆ ಅಂಬಾರಿ ಹೊರುವ ಜವಾಬ್ದಾರಿ ನೀಡಲಾಯಿತು. ಸದ್ಯಕ್ಕೆ 60 ವರ್ಷವಾಗಿರುವ ಅರ್ಜುನ 2012ರಿಂದ 2019ರವರೆಗೆ ಯಶಸ್ವಿಯಾಗಿ ಅಂಬಾರಿ ಹೊತ್ತು ನಿವೃತ್ತಿ ಪಡೆದಿದ್ದಾನೆ.

ಅಭಿಮನ್ಯು ಹೆಗಲಿಗೆ ಅಂಬಾರಿ
ಅರ್ಜುನ ಆನೆಯ ನಿವೃತ್ತಿ ನಂತರ ಈ ಬಾರಿ ಇದೇ ಮೊದಲ ಬಾರಿಗೆ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ಯಲ್ಲಿ ಸ್ಪೆಷಲಿಸ್ಟ್‌ ಎಂದೆ ಕರೆಸಿಕೊಳ್ಳುವ 45 ವರ್ಷದ ಅಭಿಮನ್ಯು ಆನೆಗೆ ಅಂಬಾರಿ ಹೊರುವ ಜವಾಬ್ದಾರಿ ನೀಡಲಾಗಿದೆ. ಈವರೆಗೆ ಎಲ್ಲಾ ರೀತಿಯ ತಾಲೀಮಿನಲ್ಲೂ ಯಶಸ್ವಿಯಾಗಿ ಭರವಸೆ ಮೂಡಿಸಿದ್ದಾನೆ.

ಟಾಪ್ ನ್ಯೂಸ್

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.