2+2 ಮಾತುಕತೆ ; ಬಿಕ್ಕಟ್ಟಿನ ನಡುವೆ ಬಲವರ್ಧನೆ


Team Udayavani, Oct 27, 2020, 6:04 AM IST

usa-india

ಗಡಿ ಭಾಗದಲ್ಲಿ ಚೀನ ಮತ್ತು ಭಾರತದ ನಡುವೆ ಬಿಕ್ಕಟ್ಟು ಮುಂದುವರಿದಿರುವ ವೇಳೆಯಲ್ಲೇ ಭಾರತ-ಅಮೆರಿಕ ನಡುವಿನ 2+2 ಮಾತುಕತೆಗೆ ಹೊಸದಿಲ್ಲಿಯಲ್ಲಿ ವೇದಿಕೆ ಸಿದ್ಧವಾಗಿದ್ದು, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕಲ್‌ ಪಾಂಪ್ಯು ಹಾಗೂ ರಕ್ಷಣ ಕಾರ್ಯದರ್ಶಿ ಮಾರ್ಕ್‌ ಎಸ್ಪರ್‌ ಆಗಮಿಸಿದ್ದಾರೆ. ಭಾರತವನ್ನು ರಕ್ಷಣ ಸಚಿವ ರಾಜನಾಥ್‌ ಸಿಂಗ್‌, ವಿದೇಶಾಂಗ ಸಚಿವ ಜೈಶಂಕರ್‌ ಪ್ರತಿನಿಧಿಸಲಿದ್ದಾರೆ.

ಬೆಳೆಯುತ್ತಿರುವ ಚೀನ ಉಪಟಳವನ್ನು ಹತ್ತಿಕ್ಕುವ ದೃಷ್ಟಿಯಿಂದ ಇತ್ತೀಚೆಗಷ್ಟೇ ಜಪಾನ್‌ನಲ್ಲಿ ನಡೆದ ಕ್ವಾಡ್‌ ಸಭೆಯಲ್ಲಿ ಭಾರತ, ಅಮೆರಿಕ, ಜಪಾನ್‌ ಹಾಗೂ ಆಸ್ಟ್ರೇಲಿಯಾ ಮಹತ್ವದ ಒಪ್ಪಂದ ಮಾಡಿಕೊಂಡಿದ್ದವು. ಇದಾದ ಕೆಲವೇ ದಿನಗಳಲ್ಲೇ 2+2 ಸಭೆ ನಡೆಯುತ್ತಿದ್ದು, ಚೀನದ ಈ ಬೆಳವಣಿಗೆಯನ್ನು ಎಚ್ಚರಿಕೆಯಿಂದ ಗಮನಿಸಲಿದೆ ಎನ್ನುವುದರಲ್ಲಿ ಸಂಶಯವಿಲ್ಲ.

ಕಳೆದ ಮೂರು ವರ್ಷಗಳಲ್ಲಿ ಭಾರತ-ಅಮೆರಿಕದ ಸಚಿವರ ನಡುವೆ ಇದು ಮೂರನೇ 2+2 ಸಭೆಯಾಗಿದ್ದು, 2018 ರಲ್ಲಿ ದಿಲ್ಲಿಯಲ್ಲಿ ಮೊದಲ ಹಾಗೂ 2019ರಲ್ಲಿ ಅಮೆರಿಕದಲ್ಲಿ ಎರಡನೇ ಮಾತುಕತೆ ನಡೆದಿತ್ತು. ಈಗ 2+2 ಮಾತುಕತೆಯಲ್ಲಿ ಎರಡೂ ರಾಷ್ಟ್ರಗಳ ನಡುವೆ ಭದ್ರತಾ ಸಹಕಾರ ಬಲವರ್ಧನೆಯ ನಿಟ್ಟಿನಲ್ಲಿ ಮಹತ್ತರ ಚರ್ಚೆ ನಡೆಯಲಿವೆ.

ನವೆಂಬರ್‌ 3 ರಂದು ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಅಲ್ಲಿನ ಭಾರತೀಯ ಮೂಲದ ಮತದಾರರನ್ನು ಸೆಳೆಯುವ ದೃಷ್ಟಿಯಲ್ಲಿಯೂ ಅಮೆರಿಕಕ್ಕೆ ಈ ಮಾತುಕತೆ ಮಹತ್ತರದ್ದಾಗಿದೆ. ಈ ಕಾರಣದಿಂದಲೇ ಅಮೆರಿಕ ದೊಂದಿಗೆ ಗಮನಾರ್ಹ ಒಪ್ಪಂದಗಳನ್ನು ಭಾರತ ನಿರೀಕ್ಷಿಸುತ್ತಿದೆ. ರಕ್ಷಣ ಪರಿಣತರ ಪ್ರಕಾರ ಚೀನದ ವಿಸ್ತರಣಾವಾದಿ ಆಕಾಂಕ್ಷೆಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಕಾರ್ಯ ತಂತ್ರ ರಚನೆ ಹಾಗೂ ಕೋವಿಡ್‌-19ಗೆ ಪರಿಹಾರ ಕಂಡುಕೊಳ್ಳುವುದರ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆಗಳಾಗಬಹುದು.

ಇನ್ನು, ಅಮೆರಿಕ ಹಾಗೂ ಭಾರತ ಜಗತ್ತಿನ ಅತಿದೊಡ್ಡ ಕೋವಿಡ್‌-19 ಹಾಟ್‌ಸ್ಪಾಟ್‌ಗಳಾಗಿ ಬದಲಾಗಿರುವುದರಿಂದಾಗಿ, ಈ ಸಾಂಕ್ರಾಮಿಕದ ವಿರುದ್ಧ ಹೋರಾಡುವ ಸವಾಲೂ ಇವುಗಳೆದುರು ಇದೆ. ಈ ಕಾರಣಕ್ಕಾಗಿಯೇ ಕೋವಿಡ್‌ ವಿರುದ್ಧದ ಲಸಿಕೆಯ ಅಭಿವೃದ್ಧಿಯಲ್ಲಿ ಭಾರತ ಹಾಗೂ ಅಮೆರಿಕದ ಸಂಶೋಧನಾ ಉದ್ಯಮಗಳ ನಡುವೆ ಈಗಾಗಲೇ ಮಹತ್ತರ ಒಪ್ಪಂದಗಳಾಗಿವೆ. ವಿಶ್ವದ ಅತಿದೊಡ್ಡ ಲಸಿಕೆ ಉತ್ಪಾದನಾ ಕಂಪೆನಿಗಳಲ್ಲಿ ಒಂದಾಗಿರುವ ಪುಣೆಯ ಸೀರಂ ಇನ್ಸ್‌ಟಿಟ್ಯೂಟ್‌ ಆಫ್ ಇಂಡಿಯಾದ ಜತೆಗೆ ಅಮೆರಿಕದ 6 ಕಂಪೆನಿಗಳು ಸಂಶೋಧನೆ-ಅಭಿವೃದ್ಧಿ-ವಿನಿಮಯ ಒಪ್ಪಂದಗಳನ್ನು ಮಾಡಿಕೊಂಡಿವೆ. ಲಸಿಕೆ ಅಭಿವೃದ್ಧಿಯಷ್ಟೇ ಮುಖ್ಯವಾದದ್ದು, ಲಸಿಕೆಯ ಡೋಸ್‌ಗಳನ್ನು ಅಪಾರ ಪ್ರಮಾಣದಲ್ಲಿ ಉತ್ಪಾದಿಸುವ ಸಾಮರ್ಥ್ಯ.

ಈ ಸಾಮರ್ಥ್ಯ ಭಾರತಕ್ಕೆ ಇದೆ. ಸತ್ಯವೇನೆಂದರೆ, ಇಂದು ಜಗತ್ತಿನ 70 ಪ್ರತಿಶತ ವಿವಿಧ ಲಸಿಕೆಗಳ ಉತ್ಪಾದನೆ ಯನ್ನು ಭಾರತವೇ ಮಾಡುತ್ತಿದೆ. ಅತೀ ಕಡಿಮೆ ಅವಧಿಯಲ್ಲೇ ಅತಿಹೆಚ್ಚು ಪ್ರಮಾಣದಲ್ಲಿ ಡೋಸ್‌ಗಳನ್ನು ಉತ್ಪಾದಿಸುವ ಸಾಮರ್ಥ್ಯವಿರುವುದು ಚೀನ ಹಾಗೂ ಭಾರತಕ್ಕೆ. ಕೋವಿಡ್‌ ವಿಚಾರದಲ್ಲಿ ಚೀನವನ್ನು ಕಟಕಟೆಯಲ್ಲಿ ನಿಲ್ಲಿಸುತ್ತಾ ಬಂದಿರುವ ಅಮೆರಿಕ ಈ ವಿಚಾರದಲ್ಲಿ ಭಾರತದತ್ತ ಮುಖ ಮಾಡಬಹುದು ಎನ್ನುವ ಪರಿಣತರ ನಿರೀಕ್ಷೆ ಸಹಜವೇ ಆಗಿದೆ. ಒಟ್ಟಲ್ಲಿ ಕೋವಿಡ್‌-19 ಹಾಗೂ ಗಡಿ ಬಿಕ್ಕಟ್ಟಿನ ಸಮಸ್ಯೆ ಎದುರಿಸುತ್ತಿರುವ ಭಾರತಕ್ಕೆ 2+2 ಮಾತುಕತೆಯ ಯಶಸ್ಸು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಿರೀಕ್ಷಿತ ಫ‌ಲಿತಾಂಶ ದೊರೆಯುವಂತಾಗಲಿ.

ಟಾಪ್ ನ್ಯೂಸ್

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.