ಸಂಚಾರ ನಿಯಂತ್ರಣಕ್ಕೆ ಪುರಸಭೆ ಗಾರ್ಡ್‌

ಟಿಎಂಸಿ ಗಾರ್ಡ್‌ ಪರಿಕಲ್ಪನೆಗೆ ಸಿಪಿಐ-ಸಿಒ ಚಾಲನೆ

Team Udayavani, Oct 28, 2020, 4:24 PM IST

ಸಂಚಾರ ನಿಯಂತ್ರಣಕ್ಕೆ ಪುರಸಭೆ ಗಾರ್ಡ್‌

ಮುದ್ದೇಬಿಹಾಳ: ಪಟ್ಟಣದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌, ಬೀದಿ ಬದಿ ವ್ಯಾಪಾರಿಗಳ ಬೇಕಾಬಿಟ್ಟಿವ್ಯಾಪಾರ ನಿಯಂತ್ರಿಸಲು ಹಾಗೂ ಮಾರುಕಟ್ಟೆಯಲ್ಲಿ ಸುವ್ಯವಸ್ಥೆ ಜಾರಿಗೊಳಿಸಲು ಇಲ್ಲಿನ ಪುರಸಭೆಯು ಪುರಸಭೆ ಗಾರ್ಡ್‌ (ಟಿಎಂಸಿ ಗಾರ್ಡ್‌) ಪರಿಕಲ್ಪನೆ ಜಾರಿಗೊಳಿಸಿದೆ. ಸಿಪಿಐ ಆನಂದ ವಾಗಮೋಡೆಅವರು ಪುರಸಭೆ ಮುಖ್ಯಾ ಧಿಕಾರಿ ಗೋಪಾಲ ಕಾಸೆ ಅವರ ಈ ವಿನೂತನ ಪರಿಕಲ್ಪನೆಗೆ ಮಂಗಳವಾರ ಚಾಲನೆ ನೀಡಿದ್ದಾರೆ.

ಈ ಗಾರ್ಡ್‌ಗಳು ಬುಧವಾರದಿಂದ ರಸ್ತೆಗಿಳಿದು ಪೊಲೀಸರ ಮಾದರಿಯಲ್ಲಿ ಸುವ್ಯವಸ್ಥೆಗೆ ಶ್ರಮಿಸಲಿದ್ದಾರೆ. ಇದಕ್ಕಾಗಿ ಪುರಸಭೆ ಸಿಬ್ಬಂದಿಗಳ ಪೈಕಿ ಲೋಕೇಶ ಮುರಾಳ, ಗದ್ದೆಪ್ಪ ಇಂದವಾರ, ವೀರೇಶ ಹಿರೇಮಠ, ಬಸವರಾಜ ಚಲವಾದಿ, ವಿಶ್ವನಾಥ ಚಲವಾದಿ, ರಾಮಚಂದ್ರ ಬಡಿಗೇರ ಅವರನ್ನು ಆಯ್ಕೆ ಮಾಡಲಾಗಿದೆ. ಇವರಿಗೆ ಸೈನಿಕರು, ಭದ್ರತಾ ಸಿಬ್ಬಂದಿ ಬಳಸುವ ಸಮವಸ್ತ್ರದ  ಧಿರಿಸನ್ನುಒದಗಿಸಲಾಗಿದೆ. ಬೆಳಗಿನ ಶಿಫ್ಟ್‌ಗೆ 3, ಸಂಜೆ ಶಿಫ್ಟ್‌ಗೆ 3 ಜನರಂತೆ ಲಾಠಿ ಹಿಡಿದು ಕೆಲಸ ಮಾಡಲಿದ್ದಾರೆ. ಪಟ್ಟಣದ ಬಸವೇಶ್ವರ ವೃತ್ತದಿಂದ ಬಸ್‌ ನಿಲ್ದಾಣ, ಮಾರ್ಕೆಟ್‌ ರಸ್ತೆಯಲ್ಲಿ ಸಾಕಷ್ಟು ಟ್ರಾಫಿಕ್‌ಇರುತ್ತದೆ.

ಅನೇಕ ಬಾರಿ ಈ ಟ್ರಾಫಿಕ್‌ನಿಂದ ಸಮಸ್ಯೆ ತಲೆದೋರಿ ಜನ ಪುರಸಭೆ, ಪೊಲೀಸರನ್ನು ದೂರುವಂತಾಗಿತ್ತು. ಪೊಲೀಸರು ಅವಕಾಶ ಸಿಕ್ಕಾಗಲೆಲ್ಲ ಟ್ರಾಫಿಕ್‌ ನಿಯಂತ್ರಿಸುತ್ತಿದ್ದರೂ ಪರಿಣಾಮಕಾರಿಯಾಗಿರಲಿಲ್ಲ. ಇದನ್ನು ಮನಗಂಡು ಟಿಎಂಸಿ ಗಾರ್ಡ್‌ ಯೋಜನೆ ಜಾರಿಗೆ ತರಲಾಗಿದೆ. ಪೂರ್ಣ ಸಮವಸ್ತ್ರದಲ್ಲಿರುವ ಇವರು ಪೊಲೀಸರಂತೆ ಟ್ರಾಫಿಕ್‌ ನಿಯಂತ್ರಿಸುವ ಕೆಲಸ ಮಾಡಲಿದ್ದಾರೆ. ಸಾರ್ವಜನಿಕರು ಇವರಿಗೆ ಸಹಕರಿಸಬೇಕು ಎಂದು ಸಿಪಿಐ ಆನಂದ ವಾಗಮೋಡೆ ಹೇಳಿದರು.

ಈ ಪರಿಕಲ್ಪನೆ ಕುರಿತು ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಗೋಪಾಲ ಕಾಸೆ, ಟ್ರಾಫಿಕ್‌ ನಿಯಂತ್ರಣದ ಜೊತೆಗೆ ಬಸವೇಶ್ವರ ವೃತ್ತ, ಕಾಯಿಪಲ್ಯೆ ಮಾರುಕಟ್ಟೆ ಸೇರಿ ಹಲವೆಡೆ ಬೇಕಾಬಿಟ್ಟಿ ವ್ಯಾಪಾರ ನಡೆದು ಜನಸಂಚಾರಕ್ಕೆ ತೊಂದರೆ ಆಗಿತ್ತು. ಇದನ್ನು ನಿಯಂತ್ರಿಸಲು, ಬೀದಿ ಬದಿ ಅಂಗಡಿಗಳನ್ನು ಜನರಿಗೆ ತೊಂದರೆ ಆಗದಂತೆ ಹಚ್ಚಲು, ಪೌರ ಕಾರ್ಮಿಕರ ಸ್ವತ್ಛತಾ ವೈಖರಿ ಗಮನಿಸಲು, ಪಟ್ಟಣದಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆದರೆ ಸಹಕರಿಸಲು ಈ ಗಾರ್ಡ್‌ಗಳನ್ನು ಬಳಸಿಕೊಳ್ಳಲಾಗುತ್ತದೆ. ಇವರಿಗೆ ಬೆಂಗಳೂರಿನ ಪೊಲೀಸ್‌ ಸಮವಸ್ತ್ರದ ಅಂಗಡಿಯಿಂದ ಎರಡುಜೊತೆ ಸಮವಸ್ತ್ರ, ಬೂಟು, ಸಾಕ್ಸ್‌, ಬೆಲ್ಟ್, ಕ್ಯಾಪ್‌, ಲಾಠಿ ಒದಗಿಸಲಾಗಿದೆ. ಐಡಿ ಕಾರ್ಡ್‌ ಕೂಡ ಕೊಡಲಾಗಿದೆ. ಇದೊಂದು ವಿನೂತನ ವ್ಯವಸ್ಥೆಆಗಿದ್ದು ಯಶಸ್ಸು ನೋಡಿಕೊಂಡು ಗಾರ್ಡ್‌ಗಳ ಸಂಖ್ಯೆ ಹೆಚ್ಚಿಸಲಾಗುತ್ತದೆ. ಸಾರ್ವಜನಿಕರು, ವ್ಯಾಪಾರಸ್ಥರು ಸಹಕರಿಸಬೇಕು ಎಂದರು.

ಪುರಸಭೆ ಕಂದಾಯ ಅಧಿಕಾರಿ ಎಂ.ಬಿ. ಮಾಡಗಿ, ಮುಖ್ಯ ಸಿಬ್ಬಂದಿ ರಮೇಶ ಮಾಡಬಾಳ, ಆರೋಗ್ಯಾಧಿ ಕಾರಿಗಳಾದ ಮಹಾಂತೇಶ ಕಟ್ಟಿಮನಿ, ನಾಕ್ಕೋಡಿ ಸೇರಿ ಪುರಸಭೆ ಎಲ್ಲ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.