ಹಿಂಗಾರು ಪ್ರವೇಶ; ಕರಾವಳಿಯಲ್ಲಿ ಮಂಜಿನ ವಾತಾವರಣ
Team Udayavani, Oct 28, 2020, 11:47 PM IST
ಕಾಪು ಪರಿಸರದಲ್ಲಿ ಬುಧವಾರ ಬೆಳಗ್ಗೆ ಕಂಡು ಬಂದ ದೃಶ್ಯ
ಮಂಗಳೂರು/ಕಾಪು: ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ ದಕ್ಷಿಣ ಭಾರತಕ್ಕೆ ಇದೀಗ ಹಿಂಗಾರು ಪ್ರವೇಶ ಪಡೆದಿದೆ.
ವಾಡಿಕೆಯಂತೆ ಸಾಮಾನ್ಯವಾಗಿ ಅಕ್ಟೋಬರ್ ಎರಡನೇ ವಾರದಲ್ಲಿ ಹಿಂಗಾರು ಮಾರುತ ಅಪ್ಪಳಿಸುತ್ತದೆ. ಕಳೆದ 5 ವರ್ಷಗಳಿಗೆ ಹೋಲಿಸಿದರೆ 2016ರಲ್ಲಿ ಅ. 28 ರಂದು, 2017ರಲ್ಲಿ ಅ. 11ರಂದು, 2018ರಲ್ಲಿ ಅ. 21ರಂದು, 2019ರಲ್ಲಿ ಅ. 16ರಂದು ಹಿಂಗಾರು ಪ್ರವೇಶಿಸಿತ್ತು. ನಾಲ್ಕು ವರ್ಷದ ಬಳಿಕ ಈ ಬಾರಿ ಅ. 28ರಂದು ಹಿಂಗಾರು ಕಾಲಿಟ್ಟಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿಂಗಾರು ಮೇಲೆ ಪರಿಣಾಮ ಬೀರಿತ್ತು. ಇದೇ ಕಾರಣಕ್ಕೆ ತುಸು ತಡವಾಗಿ ಹಿಂಗಾರು ಅಪ್ಪಳಿಸಿದೆ.
ಕರಾವಳಿಯ ವಿವಿಧೆಡೆ ಮಂಗಳವಾರ ರಾತ್ರಿ ಮಂಜು ಮುಸುಕಿದ ವಾತಾವರಣ ಕಂಡು ಬಂದಿದೆ. ಬುಧವಾರ ಮುಂಜಾನೆ ವರೆಗೂ ಇದೇ ಸ್ಥಿತಿ ಇತ್ತು. ಬೆಳಗ್ಗೆ ಹೊರಬರುತ್ತಿದ್ದಂತೆಯೇ ಗಾಢವಾದ ಮಂಜು ಕವಿದ ವಾತಾವರಣ ಕಂಡು ಕರಾವಳಿಯ ಜನರು ಪುಳಕಿತರಾದರು.
ಕರಾವಳಿ ಪ್ರದೇಶಗಳು ಮಾತ್ರವಲ್ಲದೇ ಬಯಲು ಪ್ರದೇಶಗಳಲ್ಲೂ ಮಂಜು ಮುಸುಕಿದ ವಾತಾರಣ ಇದ್ದು ಇದು ಮಳೆಯ ಮುನ್ಸೂಚನೆಯೋ ಅಥವಾ ಮಳೆ ದೂರವಾಗಿ ಚಳಿಗಾಲ ಆರಂಭವಾಗುವುದರ ಮುನ್ಸೂಚನೆಯೋ ಎಂಬ ಆತಂಕ ಜನರನ್ನು ಕಾಡತೊಡಗಿದೆ.
ಸುಳ್ಯದ ವಿವಿಧೆಡೆ ಮಳೆ
ಸುಳ್ಯ: ತಾಲೂಕಿನ ವಿವಿಧೆಡೆ ಮಂಗಳವಾರ ರಾತ್ರಿ ಗುಡುಗು ಸಹಿತ ಸ್ವಾತಿ ಮಳೆ ಸುರಿದಿದೆ. ಮಡಪ್ಪಾಡಿಯಲ್ಲಿ ಗರಿಷ್ಠ 33 ಮಿ.ಮೀ. ಮಳೆಯಾಗಿದೆ.
ವಾಡಿಕೆಯಂತೆ ಮಳೆ
ಹವಾಮಾನ ಇಲಾಖೆ ಅಧಿಕಾರಿಗಳು ಹೇಳುವಂತೆ ರಾಜ್ಯದಲ್ಲಿ ಈ ಬಾರಿ ವಾಡಿಕೆಯಂತೆ ಹಿಂಗಾರು ಮಳೆ ಸುರಿಯುವ ಸಾಧ್ಯತೆ ಇದೆ. ಹಿಂಗಾರು ಸಮಯದಲ್ಲಿ ಅಂದರೆ ಅಕ್ಟೋಬರ್ 1 ರಿಂದ ಡಿಸೆಂಬರ್ ಅಂತ್ಯದವರೆಗೆ ಕಳೆದ ವರ್ಷ ರಾಜ್ಯದಲ್ಲಿಯೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.157ರಷ್ಟು ಮಳೆ ಪ್ರಮಾಣ ಹೆಚ್ಚಳವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.74 ಮತ್ತು ಉಡುಪಿ ಜಿಲ್ಲೆಯಲ್ಲಿ ಶೇ. 136ರಷ್ಟು ಮಳೆ ಪ್ರಮಾಣ ಹೆಚ್ಚಳವಾಗಿತ್ತು. ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಕರಾವಳಿ ಭಾಗದಲ್ಲಿ ಇಷ್ಟೊಂದು ಪ್ರಮಾಣದ ಮಳೆ ಸುರಿದಿದ್ದು, ಕಳೆದ ವರ್ಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ