ಅಮ್ಮೇರಹಳ್ಳಿ ಕೆರೆ ಕಟ್ಟೆ ಬಿರುಕು ದೂರು: ಜಿಲ್ಲಾಧಿಕಾರಿ ಭೇಟಿ
Team Udayavani, Oct 29, 2020, 11:33 AM IST
ಕೋಲಾರ: ನಗರ ಹೊರವಲಯದ ಅಮ್ಮೇರಹಳ್ಳಿ ಕೆರೆ ಕಟ್ಟೆ ಸುಮಾರು ಕಡೆ ಬಿರುಕು ಬಿಟ್ಟಿದ್ದು, ನೀರು ವ್ಯರ್ಥವಾಗುವ ಸಾಧ್ಯತೆ ಇರುವ ಬಗ್ಗೆ ದೂರು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಡೀಸಿ ಸಿ.ಸತ್ಯಭಾಮ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬುಧವಾರ ಬೆಳಗ್ಗೆ ಅಣೆಕಟ್ಟಿನ ಒಂದು ಭಾಗದಲ್ಲಿ ನೀರು ಕೋಡಿ ಹರಿದಿದ್ದು ಸಂಜೆ ಅಥವಾ ರಾತ್ರಿ ವೇಳೆಗೆ ಪೂರ್ತಿಯಾಗಿ ಹರಿಯುವ ಸಾಧ್ಯತೆಗಳಿದೆ. ಹೀಗಾಗಿ ಕೆ.ಸಿ. ವ್ಯಾಲಿ ನೀರು ತುಂಬಿ ಕೋಡಿ ಹರಿಯುತ್ತಿರುವ ವೇಳೆ ಅಮ್ಮೇರಹಳ್ಳಿ ಕೆರೆ ಕಟ್ಟೆ ಸುಮಾರು ಕಡೆ ಬಿರುಕು ಬಿಟ್ಟಿದ್ದು, ಜಿಲ್ಲಾಡಳಿತ ಶೀಘ್ರವಾಗಿ ಸರಿಪಡಿಸಿ, ನೀರು ಸರಾಗವಾಗಿ ಮುಂದಿನ ಕೆರೆಗಳಿಗೆ ಹರಿಯುವ ಕೆಲಸ ಮಾಡಲಿ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂ ಶಕ್ತಿ ಚಲಪತಿ ಸೇರಿದಂತೆ ಅನೇಕರು ಒತ್ತಾಯಿಸಿದ್ದರು. ಈ ಆರೋಪ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಕೆರೆ ಬಳಿಗೆ ಆಗಮಿಸಿದ ಸಿ.ಸತ್ಯಭಾಮ, ಸ್ವತ್ಛತಾ ಕಾರ್ಯ ಸೇರಿದಂತೆ ನೀರು ಸೋರಿಕೆ ಆಗದಿರುವ ಬಗ್ಗೆ ಖಚಿತಪಡಿಸಿಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಳೆಯಿಂದಾಗಿ ಕೆಲವೆಡೆ ಬಿರುಕು ಬಿಟ್ಟಿದ್ದು, ಕೆರೆ ಕಟ್ಟೆ ಬಳಿ ನೀರು ಸೋರಿಕೆಯಾಗುತ್ತಿದ್ದ ಸ್ಥಳದಲ್ಲಿ ಈಗಾಗಲೇ ನಗರಸಭೆಯಿಂದ ದುರಸ್ತಿಪಡಿಸಲಾಗಿದೆ. ಸಾರ್ವಜನಿಕರು ಆತಂಕ ಪಡಬೇಕಿಲ್ಲ.
ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಬಾಗಿನ ಅರ್ಪಣೆ ಆಯೋಜಿಸುವಂತೆ ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು. ನಗರಸಭೆ ಪೌರಾಯುಕ್ತ ಶ್ರೀಕಾಂತ್, ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಸುರೇಶ್ಕುಮಾರ್, ಕೆ.ಸಿ.ವ್ಯಾಲಿ ಅಧಿಕಾರಿ ಕೃಷ್ಣ, ನಗರಸಭೆ ಸಿಬ್ಬಂದಿ ಇದ್ದರು.
ಇದನ್ನೂ ಓದಿ :ವ್ಯಕ್ತಿಯೊಬ್ಬನನ್ನು ಕೊಲೆಗೈದು ಕಾರು ಸಮೇತ ಸುಟ್ಟು ಹಾಕಿದ ದುಷ್ಕರ್ಮಿಗಳು
***
ಶ್ರೀನಿವಾಸಪುರ: 9 ಸೋಂಕು ದೃಢ
ಶ್ರೀನಿವಾಸಪುರ: ತಾಲೂಕಿನ ಗ್ರಾಮಾಂತರ ಹಾಗೂ ಪಟ್ಟಣದಲ್ಲಿ ಬುಧವಾರ 9 ಸೋಂಕು ಪ್ರಕರಣ ದೃಢಪಟ್ಟಿವೆ ಎಂದು
ತಾಲೂಕು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಗ್ರಾಮಾಂತರ ಕೂಸಂದ್ರದ ಇಬ್ಬರು ಮಹಿಳೆಯರಿಗೆ, ಬೂರಗಮಾಕಲಹಳ್ಳಿಯ ಇಬ್ಬರು ಮಹಿಳೆಯರು, ಓರ್ವ ಪುರುಷ , ಕೇತಗಾನಹಳ್ಳಿಯ ಪುರುಷ, ಸಿ.ಹೊಸೂರು ಗ್ರಾಮದ ಓರ್ವ ಪುರುಷ, ಯದರೂರಿನ ಮಹಿಳೆ, ಪಟ್ಟಣದ ಮೋತಿಲಾಲ್ ರಸ್ತೆ ಮಹಿಳೆಯೋರ್ವರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಇದುವರೆಗೂ ತಾಲೂಕಿನಲ್ಲಿ 685 ಸೋಂಕು ಪ್ರಕರಣ ದಾಖಲಾಗಿವೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ