ಬಿಜೆಪಿ ಹಿರಿಯ ಮುಖಂಡ, ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ಇನ್ನಿಲ್ಲ
2012ರಲ್ಲಿ ಬಿಜೆಪಿ ಪಕ್ಷ ತೊರೆದು ತಮ್ಮದೇ ಆದ “ಗುಜರಾತ್ ಪರಿವರ್ತನ್ ಪಾರ್ಟಿ”ಯನ್ನು ಸ್ಥಾಪಿಸಿದ್ದರು.
Team Udayavani, Oct 29, 2020, 12:44 PM IST
ಅಹಮದಾಬಾದ್:ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ (92ವರ್ಷ) ಗುರುವಾರ (ಅಕ್ಟೋಬರ್ 29, 2020) ನಿಧನರಾಗಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ಕೇಶುಭಾಯಿ ಅವರು ಬಿಜೆಪಿಯ ಹಿರಿಯ ಮುಖಂಡರಾಗಿದ್ದು, ಎರಡು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.
ಕೇಶುಭಾಯಿ ಪಟೇಲ್ ಅವರು ಗುರುವಾರ ಬೆಳಗ್ಗೆ ಉಸಿರಾಡಲು ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಅವರು ಆಸ್ಪತ್ರೆಯಲ್ಲಿ ನಿಧನಹೊಂದಿರುವುದಾಗಿ ವರದಿ ತಿಳಿಸಿದೆ.
ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಸೆಪ್ಟೆಂಬರ್ ತಿಂಗಳಿನಲ್ಲಿ ಕೇಶುಭಾಯಿ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ಕೇಶುಭಾಯಿ ಪಟೇಲ್ ಅವರು 1995 ಮತ್ತು 1998ರಿಂದ 2001ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಕೇಶುಭಾಯಿ ಅವರನ್ನು ಆರು ಬಾರಿ ಗುಜರಾತ್ ವಿಧಾನಸಭಾ ಸದಸ್ಯರಾಗಿ ಆಯ್ಕೆಗೊಂಡಿದ್ದರು.
ಇದನ್ನೂ ಓದಿ:ಬ್ಯಾಟಿಂಗ್ ಮಾಡುತ್ತಿದ್ದ ಸೂರ್ಯಕುಮಾರ್ ಯಾದವ್ ಕೆಣಕಿದ ಕೊಹ್ಲಿ: ನೆಟ್ಟಿಗರಿಂದ ಟೀಕೆ
1980ರವರೆಗೆ ಬಿಜೆಪಿಯ ಕಟ್ಟಾ ಹುರಿಯಾಳಾಗಿದ್ದ ಕೇಶುಭಾಯಿ ಪಟೇಲ್ ಅವರು 2012ರಲ್ಲಿ ಬಿಜೆಪಿ ಪಕ್ಷ ತೊರೆದು ತಮ್ಮದೇ ಆದ “ಗುಜರಾತ್ ಪರಿವರ್ತನ್ ಪಾರ್ಟಿ”ಯನ್ನು ಸ್ಥಾಪಿಸಿದ್ದರು. 2012ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಪಟೇಲ್ ಶಾಸಕರಾಗಿ ಆಯ್ಕೆಯಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ 2014ರಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
1928ರ ಜುಲೈ 24ರಂದು ಗುಜರಾತ್ ನ ವಿಸ್ವಾದರ್ ನಲ್ಲಿ ಕೇಶುಭಾಯಿ ಪಟೇಲ್ ಜನಿಸಿದ್ದರು. 1945ರಲ್ಲಿ ಪಟೇಲ್ ರಾಷ್ಟ್ರೀಯ ಸ್ವಯಂ ಸೇವಕ್ ಸಂಘಕ್ಕೆ ಸೇರ್ಪಡೆಗೊಂಡಿದ್ದರು. ತುರ್ತುಪರಿಸ್ಥಿತಿ ವೇಳೆ ಜೈಲುವಾಸ ಅನುಭವಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ