ಗೋವಾದಲ್ಲಿ ಗಗನಕ್ಕೇರಿದ ಈರುಳ್ಳಿ ದರ! ಪಡಿತರದ ಜೊತೆ ಈರುಳ್ಳಿ ನೀಡಲು ಸರಕಾರದ ಚಿಂತನೆ
Team Udayavani, Oct 29, 2020, 3:05 PM IST
ಪಣಜಿ: ಗೋವಾದಲ್ಲಿ ಈರುಳ್ಳಿ ದರ ಗಗನಕ್ಕೇರಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪಡಿತರ ಅಂಗಡಿಗಳಲ್ಲಿ ರೇಷನ್ ಜೊತೆಗೆ ಪ್ರತಿ ತಿಂಗಳು 32 ರೂ ಪ್ರತಿ ಕಿಲೊ ದರದಲ್ಲಿ 3 ಕೆಜಿ ಈರುಳ್ಳಿ ನೀಡಲು ನಿರ್ಣಯ ತೆಗೆದುಕೊಂಡಿದೆ. ಇದರಿಂದಾಗಿ ರಾಜ್ಯದಲ್ಲಿ ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ 100 ರೂ ದರದಲ್ಲಿ ಲಭಿಸುತ್ತಿದ್ದ ಈರುಳ್ಳಿ ರಾಜ್ಯದ ಪಡಿತರ ಗ್ರಾಹಕರಿಗೆ ಪ್ರತಿ ಕೆಜಿಗೆ 32 ರೂ.ಗಳಲ್ಲಿ ಲಭಿಸುವಂತಾಗಿದೆ.
ಮುಖ್ಯಮಂತ್ರಿ ಪ್ರಮೋದ ಸಾವಂತ್ ಬುಧವಾರ ಮಂತ್ರಿಮಂಡಳ ಬೈಠಕ್ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಿದರು. ಮಂತ್ರಿಮಂಡಳವು ಈರುಳ್ಳಿಯನ್ನು ರಾಜ್ಯದಲ್ಲಿ ಪಡಿತರ ಗ್ರಾಹಕರಿಗೆ ಕಡಿಮೆ ದರದಲ್ಲಿ ಲಭಿಸುವಂತೆ ಮಾಡಲು ನಿರ್ಣಯ ತೆಗೆದುಕೊಂಡಿದೆ.
ಇದಕ್ಕಾಗಿ ನಾಗರಿಕ ಸರಬರಾಜು ಇಲಾಖೆ 1015 ಮೆಟ್ರಿಕ್ ಟನ್ ಈರುಳ್ಳಿಯನ್ನು ರಾಷ್ಟ್ರೀಯ ಕೃಷಿ ಸಹಕಾರಿ ಮಾರ್ಕೇಟಿಂಗ್ ಫೆಡರೇಶನ್ನಲ್ಲಿ ಖರೀದಿ ಮಾಡಲಿದೆ. ಪ್ರತಿ ಮೆಟ್ರಿಕ್ ಟನ್ ಈರುಳ್ಳಿಗೆ 26,000 ರೂ ದರದಂತೆ ಖರೀದಿ ಮಾಡಲಾಗುತ್ತಿದ್ದು, ಇದಕ್ಕೆ 2000 ರೂ ಪ್ರತಿ ಮೆಟ್ರಿಕ್ ಟನ್ ಸಾಗಾಟ ಖರ್ಚು ಬರಲಿದೆ. 28000 ರೂ ಪ್ರತಿ ಮೆಟ್ರಿಕ್ ಟನ್ ದರದಲ್ಲಿ ಈರುಳ್ಳಿ ಖರೀದಿಸಿ 32 ರೂ. ದರದಲ್ಲಿ ರಾಜ್ಯದಲ್ಲಿ ಪಡಿತರ ಗ್ರಾಹಕರಿಗೆ ನೀಡಲಾಗುವುದು ಎಂದು ಸಿಎಂ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
ಇದನ್ನೂ ಓದಿ :ಕಾಂಗ್ರೆಸ್ ನಲ್ಲಿದ್ದರೆ ಸಂಭಾವಿತ, ಪಾರ್ಟಿ ಬಿಟ್ರೆ ಕ್ರಿಮಿನಲ್ ಆಗ್ತಾರಾ? ಸಿ.ಟಿ.ರವಿ ಕಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ