ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ರಜನಿಕಾಂತ್? ಏನಿದು ಸೋರಿಕೆಯಾದ ಪತ್ರದ ಗುಟ್ಟು
ಸೂಕ್ತ ಸಮಯದಲ್ಲಿ ನನ್ನ ರಾಜಕೀಯದ ನಿಲುವಿನ ಬಗ್ಗೆ ಘೋಷಿಸುತ್ತೇನೆ
Team Udayavani, Oct 29, 2020, 4:51 PM IST
ಚೆನ್ನೈ:ತಮಿಳುನಾಡಿನಲ್ಲಿ ರಜಿನಿ ಮಕ್ಕಳ್ ಮಂಡ್ರಂ ಹೆಸರಿನ ರಾಜಕೀಯ ಸಂಘಟನೆ ಸ್ಥಾಪಿಸಿ ಭರ್ಜರಿ ಜನಪ್ರಿಯತೆ ಗಳಿಸಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಇದೀಗ ದಿಢೀರನೆ ತನ್ನ ಚುನಾವಣಾ ರಾಜಕೀಯ ಸೇರ್ಪಡೆ ಕುರಿತು ಮರು ವಿಮರ್ಶೆ ಮಾಡುವುದಾಗಿ ಸುಳಿವು ನೀಡಿದ್ದು, ಸೂಕ್ತ ಸಮಯದಲ್ಲಿ ತನ್ನ ನಿರ್ಧಾರವನ್ನು ಘೋಷಿಸುವುದಾಗಿ ತಿಳಿಸಿದ್ದಾರೆ.
ತನ್ನ ರಾಜಕೀಯ ಭವಿಷ್ಯದ ಬಗ್ಗೆ ತಾನೇ ಖುದ್ದಾಗಿ ಬರೆದಿದ್ದಾರೆನ್ನಲಾದ ಪತ್ರವೊಂದು ಬಹಿರಂಗಗೊಂಡ ನಂತರ ರಜನಿ ರಾಜಕೀಯದ ಕುರಿತು ಹಲವಾರು ಊಹಾಪೋಹಗಳು ಹರಿದಾಡತೊಡಗಿತ್ತು.
ರಜನಿಕಾಂತ್ ನೀಡಿರುವ ಪ್ರಕಟಣೆ ಪ್ರಕಾರ, ಬಹಿರಂಗಗೊಂಡ ಪತ್ರ ನನ್ನದಲ್ಲ, ಆದರೆ ನನ್ನ ಆರೋಗ್ಯ ಮತ್ತು ವೈದ್ಯರ ಸಲಹೆಯ ಮಾಹಿತಿ ನಿಜವಾದದ್ದು ಎಂದು ತಿಳಿಸಿದ್ದಾರೆ. ನಾನು “ರಜಿನಿ ಮಕ್ಕಳ್ ಮಂಡ್ರಂ ಜತೆ ಚರ್ಚಿಸಿದ ನಂತರ ಸೂಕ್ತ ಸಮಯದಲ್ಲಿ ನನ್ನ ರಾಜಕೀಯದ ನಿಲುವಿನ ಬಗ್ಗೆ ಘೋಷಿಸುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಡಿಆರ್ಎಸ್ಗೆ ಮನವಿ ಬೇಡ: ಅಂಪೈರ್ರಿಂದಲೇ ಸಲಹೆ, ಅನಿಲ್ ಚೌಧರಿ ವಿವಾದ!
ಕಳೆದ ಎರಡು ವರ್ಷಗಳ ಕಾಲ ರಜನಿಕಾಂತ್ ಅವರು ಹಲವಾರು ರಾಜಕೀಯ ವಿಷಯಗಳ ಬಗ್ಗೆ ಮಾತನಾಡಿದ್ದರು. ಆದರೆ ರಾಜಕೀಯ ಅಖಾಡಕ್ಕೆ ಇಳಿಯಲು ವಿಳಂಬ ಮಾಡಿದ್ದರು. ಸಿನಿಮಾರಂಗದ ಮಿತ್ರ ಕಮಲ್ ಹಾಸನ್ ಅವರು ಕೂಡಾ ಹೊಸ ಪಕ್ಷವನ್ನು ಸ್ಥಾಪಿಸಿದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ಇದೀಗ ಕೋವಿಡ್ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡರೆ ತನ್ನ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ರಜನಿಕಾಂತ್ ಪ್ರತಿಕ್ರಿಯೆಯಾಗಿದೆ. ರಜನಿಕಾಂತ್ ಆಪ್ತ ಮೂಲಗಳ ಪ್ರಕಾರ, ರಜಿನಿ ಮಕ್ಕಳ್ ಮಂಡ್ರಂ ಅಧ್ಯಕ್ಷರ ಜತೆ ಮಾತುಕತೆ ನಡೆಸಿ ಡಿಸೆಂಬರ್ ಕೊನೆಯ ವಾರ ಅಥವಾ ಜನವರಿ ಮೊದಲ ವಾರದಲ್ಲಿ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಘೋಷಿಸಲಿದ್ದಾರೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ