ಮರವಂತೆ ಹೊರ ಬಂದರು: ಶೀಘ್ರ ಎರಡನೇ ಹಂತದ ಕಾಮಗಾರಿ

85 ಕೋ.ರೂ. ವೆಚ್ಚದಲ್ಲಿ ಬ್ರೇಕ್‌ವಾಟರ್‌ ವಿಸ್ತರ4ಣೆ ಕಾಮಗಾರಿ ;  ತಾಂತ್ರಿಕ ಅನುಮೋದನೆಯೊಂದೇ ಬಾಕಿ

Team Udayavani, Oct 30, 2020, 4:50 AM IST

ಮರವಂತೆ ಹೊರ ಬಂದರು: ಶೀಘ್ರ ಎರಡನೇ ಹಂತದ ಕಾಮಗಾರಿ

ಮರವಂತೆಯ ಹೊರ ಬಂದರಿನ ನೋಟ.

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಮರವಂತೆಯ ಹೊರ ಬಂದರು ಪ್ರದೇಶದಲ್ಲಿ ಎರಡನೇ ಹಂತದಲ್ಲಿ ಬ್ರೇಕ್‌ವಾಟರ್‌ ವಿಸ್ತರಣೆ ಕಾಮಗಾರಿಗೆ ಈಗಾಗಲೇ ಸರಕಾರದಿಂದ 85 ಕೋ.ರೂ. ಮಂಜೂರಾಗಿ ಆಡಳಿತಾತ್ಮಕ ಅನುಮೋದನೆಯಾಗಿದ್ದು, ತಾಂತ್ರಿಕ ಅನುಮೋದನೆಗೆ ಮಾತ್ರ ಬಾಕಿ ಇದೆ. ಆ ಬಳಿಕ ಟೆಂಡರ್‌ ಕರೆದು, ಶೀಘ್ರದಲ್ಲೇ ಕಾಮಗಾರಿ ಆರಂಭ ಗೊಳ್ಳುವ ಸಾಧ್ಯತೆಗಳಿವೆ.

ಮರವಂತೆಯ ಬ್ರೇಕ್‌ವಾಟರ್‌ ವಿಸ್ತರಣೆಗೆ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರ ಮುತುವರ್ಜಿ ಯಿಂದಾಗಿ ಕಳೆದ ಆಗಸ್ಟ್‌ನಲ್ಲಿ ರಾಜ್ಯ ಸರಕಾರ ಅನುದಾನ ಬಿಡುಗಡೆ ಮಾಡಿತ್ತು. ಕಾಮಗಾರಿ
ನೀಲ ನಕಾಶೆ ತಯಾರಿಸಲಾಗಿದ್ದು, ಅದಕ್ಕೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದ್ದು, ಇನ್ನು ಅಂದಾಜು ಪಟ್ಟಿ, ಸಲಹಾ ಸಮಿತಿ ಮತ್ತು ತಾಂತ್ರಿಕ ಸಮಿತಿಯ ಅನುಮೋದನೆಯೊಂದೇ ಬಾಕಿ ಇದೆ.

ಮೀನುಗಾರರಿಗೆ ಅನುಕೂಲ
ಮೊದಲ ಹಂತದ ಕಾಮಗಾರಿ ವೇಳೆ ಎರಡು ಭಾಗ ಗಳಲ್ಲಿಯೂ ತಡೆಗೋಡೆ ನಿರ್ಮಾಣ ಅಪೂರ್ಣವಾಗಿದೆ. ಈ ಅರೆಬರೆ ಕಾಮಗಾರಿ ಯಿಂದಾಗಿ ಮೀನುಗಾರಿಕೆಗೆ ಬಹಳಷ್ಟು ಸಮಸ್ಯೆ ಯಾಗುತ್ತಿದೆ. ದೋಣಿಗಳು ಸುಲಭವಾಗಿ ಬಂದರಿನ ಒಳ ಪ್ರವೇಶಿಸಲು ಕಷ್ಟವಾಗುತ್ತಿದೆ. ಇಲ್ಲಿ ಸುಮಾರು 300ಕ್ಕೂ ಹೆಚ್ಚು ನಾಡದೋಣಿಗಳಿದ್ದು, ಸುಮಾರು 2 ಸಾವಿರಕ್ಕೂ ಹೆಚ್ಚಿನ ಮೀನುಗಾರರು ಇಲ್ಲಿದ್ದಾರೆ. ಬೇರೆ ಕಡೆಗಳ ಮೀನುಗಾರಿಕೆ ದೋಣಿಗಳೂ ಇಲ್ಲಿಗೆ ಬರುತ್ತವೆ. ಎರಡನೇ ಹಂತದ ಕಾಮಗಾರಿಯಿಂದಾಗಿ ಇಲ್ಲಿನ ಮೀನುಗಾರರಿಗೆ ಬಹಳಷ್ಟು ಅನುಕೂಲವಾಗಲಿದೆ.

“ಯು’ ಆಕೃತಿ ಬಂದರು
ಮರವಂತೆಯ ಹೊರ ಬಂದರು ರಾಜ್ಯದ ಮೊದಲ “ಯು’ ಶೇಪ್‌ ಮಾದರಿಯ ಬಂದರಾಗಿದೆ. ಇತರ ಮೀನುಗಾರಿಕೆ ಬಂದರಿಗೂ ಇಲ್ಲಿಗೂ ಇರುವ ಪ್ರಮುಖ ವ್ಯತ್ಯಾಸವೆಂದರೆ, ಬೇರೆಲ್ಲ ಬಂದರುಗಳು ಸಹಜ ಬಂದರು ಆಗಿದ್ದರೆ, ಇದು ಕೃತಕವಾಗಿ ನಿರ್ಮಿಸಿದ ಬಂದರಾಗಿದೆ. ಅಂದರೆ ಇಲ್ಲಿನ ಮೀನುಗಾರರು ಬೇರೆ ಬಂದರನ್ನು ಅವಲಂಬಿಸುವ ಬದಲು ತಮ್ಮ ಅನುಕೂಲಕ್ಕಾಗಿ ಸ್ವತಃ ಕೃತಕವಾಗಿ ನಿರ್ಮಿಸಿಕೊಂಡ ಬಂದರು ಇದಾಗಿದೆ.

ತಡೆಗೋಡೆ
ಮರವಂತೆಯಲ್ಲಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಡಲ್ಕೊರೆತ ತಡೆಗಾಗಿ ಮೊದಲ ಹಂತದ ಕಾಮಗಾರಿಯಲ್ಲಿ ಉತ್ತರ ಭಾಗದಲ್ಲಿ 260 ಮೀ. ಹಾಗೂ ದಕ್ಷಿಣ ಭಾಗದಲ್ಲಿ 525 ಮೀ. ಒಟ್ಟು 785 ಮೀ. ಬ್ರೇಕ್‌ವಾಟರ್‌ (ಟೆಟ್ರಾಫೈಡ್‌) ನಿರ್ಮಾಣಗೊಂಡಿತ್ತು. ಈಗ ಅದರ ಮುಂದುವರಿದ ಭಾಗವಾಗಿ ಎರಡನೇ ಹಂತದ ಕಾಮಗಾರಿಯಲ್ಲಿ ಉತ್ತರ ಭಾಗದಲ್ಲಿ 560 ಮೀ. ಹಾಗೂ ದಕ್ಷಿಣ ಭಾಗದಲ್ಲಿ 65 ಮೀ. ಸೇರಿ ಒಟ್ಟು 625 ಮೀ. ತಡೆಗೋಡೆ ನಿರ್ಮಾಣಗೊಳ್ಳಲಿದೆ.

ಆಡಳಿತಾತ್ಮಕ ಅನುಮೋದನೆ
ಮರವಂತೆಯ ಎರಡನೇ ಹಂತದ ಬ್ರೇಕ್‌ವಾಟರ್‌ ವಿಸ್ತರಣೆ ಕಾಮಗಾರಿಗೆ ರಾಜ್ಯ ಸರಕಾರದಿಂದ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ಇನ್ನು ತಾಂತ್ರಿಕ ಒಪ್ಪಿಗೆ ಬಾಕಿಯಿದ್ದು, ಅದಾದ ಬಳಿಕ ಟೆಂಡರ್‌ ಪ್ರಕ್ರಿಯೆ ಆರಂಭವಾಗಲಿದೆ. -ಉದಯ ಕುಮಾರ್‌, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, ಬಂದರು ಮತ್ತು ಮೀನುಗಾರಿಕೆ ಇಲಾಖೆ

ತ್ವರಿತವಾಗಿ ಆಗಲಿ
ಮರವಂತೆಯ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಆದಷ್ಟು ಬೇಗ ಆರಂಭಗೊಂಡರೆ ಮೀನುಗಾರರಿಗೆ ಪ್ರಯೋಜನವಾಗಲಿದೆ. ಬ್ರೇಕ್‌ವಾಟರ್‌ ವಿಸ್ತರಣೆ ಜತೆಗೆ ಬಂದರಿನಲ್ಲಿ ಹೂಳೆತ್ತಬೇಕಿದೆ. ಈಗ ಮೀನುಗಾರರು ತಮ್ಮ ಸ್ವಂತ ಖರ್ಚಿನಿಂದ ಅಲ್ಲಲ್ಲಿ ಸ್ವಲ್ಪ ಹೂಳೆತ್ತಿ ದೋಣಿ ಬರುವಂತೆ ಮಾಡುತ್ತಿದ್ದಾರೆ. ಈಗಾಗಲೇ ಈ ಎಲ್ಲ ವಿಚಾರವನ್ನು ಶಾಸಕರ ಗಮನಕ್ಕೆ ತರಲಾಗಿದೆ.
-ಸಂಜೀವ ಖಾರ್ವಿ, ಮರವಂತೆ, ಮೀನುಗಾರರು

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.