ಪಂಚಾಯತ್‌ ಚುನಾವಣೆಗೆ ತಾಲೀಮು

ನ. 3ನೇ ವಾರ ಘೋಷಣೆಗೆ ಸಿದ್ಧತೆ? ; ಸಂಭಾವ್ಯ ಅಭ್ಯರ್ಥಿಗಳು ರೆಡಿ

Team Udayavani, Oct 31, 2020, 1:52 AM IST

Vote

ಸಾಂದರ್ಭಿಕ ಚಿತ್ರ

ಕುಂದಾಪುರ: ಗ್ರಾಮ ಪಂಚಾಯತ್‌ ಚುನಾವಣೆಗೆ ದಿನಗಣನೆ ನಡೆಯುತ್ತಿದ್ದು, ಯಾವಾಗ ಬೇಕಾದರೂ ಚುನಾವಣೆ ದಿನಾಂಕ ಘೋಷಣೆಯಾಗಬಹುದಾದ ಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಚಟುವಟಿಕೆಗಳು ಗ್ರಾಮಗಳಲ್ಲಿ ಬಿರುಸು ಪಡೆದುಕೊಂಡಿದೆ.

ಸಂಭಾವ್ಯ ಅಭ್ಯರ್ಥಿಗಳಂತೂ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಚಾರ, ಗ್ರಾಮ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಬಗ್ಗೆಯೇ ಪ್ರಮುಖವಾಗಿ ಪ್ರಸ್ತಾಪಿಸಿ, ಜನ ರನ್ನು ಸೆಳೆಯುವತ್ತ ಈಗಾಗಲೇ ತಾಲೀಮು ನಡೆಸತೊಡಗಿದ್ದಾರೆ. ಆದರೆ ಚುನಾವಣೆ ನಡೆಸುವ ಬಗ್ಗೆ ಪರ ವಿರೋಧದ ಪ್ರತಿಕ್ರಿಯೆಗಳು ಕಂಡುಬಂದಿದ್ದು, ಇದೇ ನೆವದಿಂದಲೇ ನ್ಯಾಯಾಲ ಯಕ್ಕೂ ಹೋಗಲಾಗಿತ್ತು. ಚುನಾವಣೆ ಸದ್ಯ ನಡೆಯುವ ಸಾಧ್ಯತೆ ಇಲ್ಲದ ಕಾರಣ ನಮ್ಮನ್ನೇ ಮುಂದುವರಿಸಿ ಎಂದು ಈ ಹಿಂದೆ ಚುನಾಯಿತರಾದವರ ಅರ್ಜಿ ಸಂವಿಧಾನದ ಆಶಯಗಳಿಗೆ ವಿರುದ್ಧ ಎಂದು ಪರಿಗಣಿಸಿ ನ್ಯಾಯಾಲಯ ಮನವಿಯನ್ನು ತಳ್ಳಿ ಹಾಕಿತ್ತು. ಒಂದು ವೇಳೆ ಚುನಾವಣೆ ನಡೆದರೂ ಮೂರನೇ ಎರಡಂಶ ಸದಸ್ಯರ ಆಯ್ಕೆಯಾಗದೇ ಇದ್ದರೆ ಅಥವಾ ಹೊಸದಾಗಿ ಪಂಚಾಯತ್‌ ರಚನೆಯಾದರೆ ಚುನಾವಣೆ ವರೆಗೆ ಆಡಳಿತಾಧಿಕಾರಿ ನೇಮಿಸಬಹುದು ಎಂಬ ನಿಯಮ ಇದೆ. ಆದರೆ ಚುನಾವಣೆಯನ್ನೇ ನಡೆಸದೇ ಆಡಳಿತಾಧಿ ಕಾರಿಯ ನೇಮಕ ಮಾಡಿದ್ದು ಸಂವಿಧಾನ ಬಾಹಿರ. ಅಷ್ಟಲ್ಲದೇ ಆಡಳಿತಾಧಿಕಾರಿ ಯೊಬ್ಬರನ್ನು ಸಮಗ್ರ ಗ್ರಾಮ ಪಂಚಾಯತ್‌ ಎಂದು ಭಾವಿಸಿ ಅಧಿಕಾರ ಚಲಾವಣೆಗೆ ಅವಕಾಶ ನೀಡಿದ್ದು ಕೂಡ ಸರಿಯಲ್ಲ ಎನ್ನುತ್ತಾರೆ ಗಾ.ಪಂ. ಹಕ್ಕೊತ್ತಾಯ ಆಂದೋಲನದ ಕಾರ್ಯಕರ್ತೆ ಕೃಪಾ ಎಂ.ಎಂ. ಅವರು.

ಪಕ್ಷಗಳ ಸಿದ್ಧತೆ
ಇತ್ತ ರಾಜಕೀಯ ಪಕ್ಷಗಳೂ ಅಭ್ಯರ್ಥಿಗಳನ್ನು ಬೆಂಬಲಿಸುವ ಬಗ್ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಚುನಾವಣೆ ರಣಕಣವನ್ನು ಮತ್ತಷ್ಟು ರಂಗೇರಿಸುವಂತೆ ಮಾಡಿದೆ. ಬೆಂಬಲಿತ ಅಭ್ಯರ್ಥಿಗಳ ಯಾದಿಯ ಬಗ್ಗೆ ಈಗಾಗಲೇ ಕಾಂಗ್ರೆಸ್‌ ಶೇ.90ರಷ್ಟು ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಚುನಾವಣೆ ದಿನಾಂಕ ಘೋಷಣೆಯಾದ ಬಳಿಕವಷ್ಟೇ ತೀರ್ಮಾನ ಮಾಡಲು ಬಿಜೆಪಿ ಚಿಂತಿಸಿದೆ ಎಂದು ಮೂಲಗಳು ಹೇಳಿವೆ.

ಯಾವಾಗ ಘೋಷಣೆ?
ಜೂನ್‌ ಅಂತ್ಯದಲ್ಲಿ ಪಂಚಾಯತ್‌ಗಳ ಅವಧಿ ಮುಕ್ತಾಯವಾಗಿದ್ದು ಆಡಳಿತಾಧಿಕಾರಿಗಳ ನೇಮಕವಾಗಿದೆ. ಆಡಳಿತಾವಧಿ ಮುಗಿದು 6 ತಿಂಗಳ ಒಳಗೆ ಚುನಾವಣೆ ನಡೆಸಬೇಕು. ಅದಕ್ಕಾಗಿ ಚುನಾವಣಾ ಆಯೋಗ ಎಲ್ಲ ಸಿದ್ಧತೆ ನಡೆಸಿದೆ. ನ್ಯಾಯಾಲಯದಲ್ಲಿ ಈ ಕುರಿತ‌ ಅರ್ಜಿಯ ವಿಚಾರಣೆ ನಡೆಯುತ್ತಿದ್ದು ಸರಕಾರ ಸಹಕಾರ ನೀಡುವುದಾಗಿ ಹೇಳಿದೆ. ಮೂಲಗಳ ಪ್ರಕಾರ ಎಲ್ಲ ಸರಿಹೋದರೆ ನವೆಂಬರ್‌ ಮೂರನೇ ವಾರದಲ್ಲಿ ಆಯೋಗ ಚುನಾವಣಾ ದಿನಾಂಕಗಳನ್ನು ಘೋಷಿಸಲು ಸಿದ್ಧತೆ ಮಾಡಿಕೊಂಡಿದೆ. ತಾಲೂಕುವಾರು ಚುನಾವಣೆ ನಡೆಸಬೇಕೆಂದು ಬಯಸಿದ್ದು ಇದಕ್ಕಾಗಿ ಆಡಳಿತ ಯಂತ್ರಕ್ಕೆ ಸೂಚನೆ ನೀಡಲಾಗಿದೆ. ಒಂದು ದಿನ ಜಿಲ್ಲೆಯ ಒಂದು ಅಥವಾ ಎರಡು ತಾಲೂಕುಗಳಲ್ಲಿ ಮಾತ್ರ ಚುನಾವಣೆ ನಡೆಸುವ ಕುರಿತು ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ. ಇದಕ್ಕಾಗಿ ಬಿಹಾರ ವಿಧಾನಸಭೆ ಚುನಾವಣೆಯ ಒಳಿತು ಕೆಡುಕುಗಳ ವಿಶ್ಲೇಷಣೆ ಕೂಡ ನಡೆಯುತ್ತಿದೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.