ಮೂವರು ಕೈ ಸದಸ್ಯರ ವಿರುದ್ಧ ಜಾತಿ ನಿಂದನೆ ದೂರು


Team Udayavani, Oct 31, 2020, 1:25 PM IST

hv-tdy-2

ಹಾವೇರಿ: ಸ್ಥಳೀಯ ನಗರಸಭೆ ಅಧಿ ಕಾರದ ಗದ್ದುಗೆ ಏರಲು ಕೈ-ಕಮಲದ ನಡುವೆ ತೀವ್ರಕಸರತ್ತು ನಡೆದಿರುವ ಬೆನ್ನಲ್ಲೇ ಕಾಂಗ್ರೆಸ್ಸಿನಮೂವರು ಸದಸ್ಯರ ಮೇಲೆ ಜಾತಿ ನಿಂದನೆ ಆರೋಪದಡಿ ದೂರು ದಾಖಲಾಗಿದ್ದು, ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಕುತೂಹಲ ಹೆಚ್ಚಿಸಿದೆ.

ಗುರುವಾರ ರಾತ್ರಿ ಮೂವರು ಕಾಂಗ್ರೆಸ್‌ ಸದಸ್ಯರ ಮೇಲೆ ದಲಿತ ದೌರ್ಜನ್ಯ, ಜಾತಿ ನಿಂದನೆ ಕೇಸ್‌ ದಾಖಲಾಗಿದೆ. ನಾಗೇಂದ್ರನಮಟ್ಟಿಯನಿವೇಶನವೊಂದಕ್ಕೆ ಸಂಬಂ ಧಿಸಿದಂತೆಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ಕೊಲೆ ಪ್ರಯತ್ನ ನಡೆಸಿದ್ದಾರೆ ಎಂದು ಶಾಂತಮ್ಮಡಂಬರಳ್ಳಿ ಎಂಬವರು ನಗರಸಭೆ ಸದಸ್ಯರಾದ ಐ.ಯು.ಪಠಾಣ, ಮಂಜುನಾಥ ಬಿಷ್ಟಣ್ಣನವರಹಾಗೂ ಪೀರಸಾಬ್‌ ಚೋಪದಾರ ಇತರರವಿರುದ್ಧ ನೀಡಿದ ದೂರಿನ ಮೇರೆಗೆ ಶಹರಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆದ್ದರಿಂದ ಈ ಸದಸ್ಯರು ಚುನಾವಣೆಯಲ್ಲಿ ಮತ ಚಲಾಯಿಸಲು ನಗರಸಭೆಗೆ ಆಗಮಿಸುತ್ತಾರೋ ಇಲ್ಲವೋ ಎಂಬುದು ಕುತೂಹಲ ಮೂಡಿಸಿದೆ.

ಒಂದು ವೇಳೆ ಈ ಮೂವರು ಸದಸ್ಯರು ಗೈರಾದರೆ ಕಾಂಗ್ರೆಸ್‌ಗೆ ಕಷ್ಟಕರವಾಗಲಿದೆ. ಆಗ ಸಭೆಯ ಕೋರಂ 30 ಆಗಲಿದ್ದು, ಮ್ಯಾಜಿಕ್‌ ಸಂಖ್ಯೆ 16ಕ್ಕೆ ಇಳಿಯಲಿದೆ. ಆಗ ಸ್ಥಳೀಯ ಬಿಜೆಪಿ ಶಾಸಕರು, ಬಿಜೆಪಿ ಸಂಸದರು ಹಾಗೂ ಪಕ್ಷೇತರರ ಬೆಂಬಲ ಪಡೆದು ಬಿಜೆಪಿ ಮ್ಯಾಜಿಕ್‌ ನಂಬರ್‌ ತಲುಪಿ ಗದ್ದುಗೆ ಹಿಡಿಯಲು ಮುಂದಾಗುವ ಚಿಂತನೆ ನಡೆಸಿದ್ದಾರೆ. ಇದರಿಂದ ಎಚ್ಚೆತ್ತಿರುವ ಕಾಂಗ್ರೆಸ್‌ ನಾಯಕರು ಮತ್ತೂಬ್ಬ ಪಕ್ಷೇತರ ಅಭ್ಯರ್ಥಿಗೆ ಗಾಳ ಹಾಕಿದ್ದಾರೆ ಎನ್ನಲಾಗಿದೆ.

ದೂರು ದಾಖಲಾಗಿರುವ ಪ್ರಕರಣದ ಕುರಿತು ಮೇಲಧಿ ಕಾರಿಗಳು ತನಿಖೆ ನಡೆಸಿದ್ದು, ಮೂವರು ಸದಸ್ಯರು ಸಭೆಗಹಾಜರಾಗಲು ಸಮಸ್ಯೆಯಾಗುವುದಿಲ್ಲ ಎಂದು  ಹೇಳಲಾಗುತ್ತಿದೆ. ರಾಜಕೀಯ ಒತ್ತಡದಲ್ಲಿ ಸದಸ್ಯರು ಸಭೆಗೆ ಹಾಜರಾಗಲು ಬಂದಾಗಪೊಲೀಸರು ಅವರನ್ನು ಬಂಧಿ ಸಿದರೆ ಕಾಂಗ್ರೆಸ್‌ ಗೆ ಕಷ್ಟವಾಗಲಿದೆ. ಒಟ್ಟಿನಲ್ಲಿ ನಗರಸಭೆ ಗದ್ದುಗೆ ಗುದ್ದಾಟ ತಾರಕಕ್ಕೇರಿದೆ. ಪಕ್ಷೇತರರು ಕೈಗೊಳ್ಳುವತೀರ್ಮಾನ ಹಾಗೂ ಪ್ರಕರಣದ ಹಿನ್ನೆಲೆಯಲ್ಲಿಪೊಲೀಸರು ಕೈಗೊಳ್ಳುವ ಕಾನೂನು ಕ್ರಮದ ಮೇಲೆ ನಗರಸಭೆ ಗದ್ದುಗೆ ಫಲಿತಾಂಶ ಅವಲಂಬಿಸಿದೆ.

ದಲಿತ ಮಹಿಳೆ ಮೇಲೆ ದೌರ್ಜನ್ಯ ನಡೆಸಿದ ಆರೋಪದಲ್ಲಿ ಗುರುವಾರ ರಾತ್ರಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆಗೆ ತನಿಖಾಧಿಕಾರಿಯನ್ನು ನೇಮಿಸಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. – ಕೆ.ಜಿ.ದೇವರಾಜು, ಎಸ್ಪಿ, ಹಾವೇರಿ

ನಮ್ಮ ಪಕ್ಷ‌ದ ಮೂವರು ಸದಸ್ಯರಮೇಲೆ ರಾಜಕೀಯ ಪ್ರೇರಿತ ದೂರು ದಾಖಲಾಗಿದ್ದು, ಅದಕ್ಕಾಗಿ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. – ಎಂ.ಎಂ.ಹಿರೇಮಠ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು

ಪಕ್ಷೇತರರಲ್ಲಿ ಐವರು ಸದಸ್ಯರು ಬಿಜೆಪಿ ಬೆಂಬಲಿಸಲಿದ್ದಾರೆ. ಆದ್ದರಿಂದ ನಗರಸಭೆ ಅಧ್ಯಕ್ಷ‌, ಉಪಾಧ್ಯಕ್ಷ‌ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಕಾಂಗ್ರೆಸ್‌ ಸದಸ್ಯರ ಮೇಲೆ ಕೇಸ್‌ ದಾಖಲಾಗಿದ್ದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. – ನೆಹರು ಓಲೇಕಾರ, ಶಾಸಕ

ಟಾಪ್ ನ್ಯೂಸ್

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.