ಕನಿಷ್ಠ 30 ಗ್ರಾಪಂ ವಶಕ್ಕೆ ಪಡೆಯಿರಿ: ಗಣೇಶ್ಪ್ರಸಾದ್
Team Udayavani, Oct 31, 2020, 3:14 PM IST
ಗುಂಡ್ಲುಪೇಟೆ: ಕಾಂಗ್ರೆಸ್ ಕಾರ್ಯ ಕರ್ತರು ಮತ್ತು ಮುಖಂಡರು ಒಗ್ಗಟ್ಟಿನಿಂದ ಬಿಜೆಪಿ ಸರ್ಕಾರದ ವೈಫಲ್ಯಗಳು ಹಾಗೂ ಕಾಂಗ್ರೆಸ್ ಸಾಧನೆಗಳನ್ನು ಜನತೆಗೆ ಮನವರಿಕೆ ಮಾಡುವ ಮೂಲಕ ಗ್ರಾಪಂ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಪಡೆಯಬೇಕು ಎಂದು ಯುವ ಕಾಂಗ್ರೆಸ್ ಮುಖಂಡ ಎಚ್.ಎಂ. ಗಣೇಶ್ಪ್ರಸಾದ್ ಸಲಹೆ ನೀಡಿದರು.
ತಾಲೂಕಿನ ಹಾಲಹಳ್ಳಿಯಲ್ಲಿ ಬೇಗೂರು ಬ್ಲಾಕ್ ಕಾಂಗ್ರೆಸ್ನಿಂದ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ತಂದೆ ಮಾಜಿ ಸಚಿವ ದಿ.ಮಹದೇವಪ್ರಸಾದ್ ಸಮಾಜದ ಎಲ್ಲಾ ವರ್ಗದ ಜನರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಸತತ ಗೆಲುವು ಸಾಧಿಸಿದ್ದರು.ಕನಿಷ್ಠ 30 ಗ್ರಾಮ ಪಂಚಾಯಿತಿಗಳನ್ನು ಗೆಲ್ಲುವ ಮೂಲಕ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತಾಗಬೇಕು ಎಂದರು.
ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯ: ಶಾಸಕ ಸಿ.ಎಸ್.ನಿರಂಜನಕುಮಾರ್ ತಾಲೂಕಿನ ಅಭಿವೃದ್ಧಿಗೆ ಯಾವುದೇ ಅನುದಾನ ತಂದಿಲ್ಲ. ಹಿಂದೆ ದಿ.ಮಹದೇವಪ್ರಸಾದ್ ಹಾಗೂ ಡಾ.ಗೀತಾ ಅವರು ತಂದಿರುವ ಅನುದಾನದಲ್ಲಿ ಅಲ್ಲಲ್ಲಿ ಸಣ್ಣಪುಟ್ಟ ಕೆಲಸಗಳಿಗೆ ಭೂಮಿಪೂಜೆ ಮಾಡುತ್ತಿದ್ದಾರೆ. ಈ ಬಗ್ಗೆ ಕ್ಷೇತ್ರದ ಜನತೆಗೆ ಸತ್ಯದ ಅರಿವಾಗಿದ್ದು, ಆಡಳಿತ ವಿರೋಧಿ ಅಲೆ ಎದ್ದಿದೆ. ಸರ್ಕಾರಿ ಕಚೇರಿಗಳು ಬಿಜೆಪಿ ಕಚೇರಿಯಾಗುತ್ತಿದೆ.ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರ ದಾಖಲಿಸುತ್ತಿದ್ದಾರೆ ಎಂದು ದೂರಿದರು.
ಸಭೆಯಲ್ಲಿ ಮಾಜಿ ಸಂಸದ ಎ.ಸಿದ್ದರಾಜು, ಚಾಮುಲ್ ಅಧ್ಯಕ್ಷ ಎಚ್.ಎಸ್. ನಂಜುಂಡಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ. ಮುನಿರಾಜು, ಜಿಪಂ ಮಾಜಿ ಸದಸ್ಯ ಶಿವಸ್ವಾಮಿ, ತಾಪಂ ಮಾಜಿ ಅಧ್ಯಕ್ಷ ರಾದ ಪುಟ್ಟಣ್ಣ, ಬಸವರಾಜು, ಗಂಗಾಧರಪ್ಪ, ಮುಖಂಡರಾದ ರಮೇಶ್ ಬೇಗೂರು, ಕೆ. ಮಹದೇವ ಶೆಟ್ಟಿ, ಸೂರಿ, ರವಿ, ಭಾಸ್ಕರ್, ನಾರಾಯಣ್ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು