ಸರಳವಾಗಿ ಈದ್‌ ಮಿಲಾದ್‌ ಆಚರಣೆ


Team Udayavani, Oct 31, 2020, 3:57 PM IST

ಸರಳವಾಗಿ ಈದ್‌ ಮಿಲಾದ್‌ ಆಚರಣೆ

ಚಿಕ್ಕಬಳ್ಳಾಪುರ: ಜಗತ್ತಿನ ಕಲ್ಯಾಣಕ್ಕಾಗಿ ಅವತರಿಸಿದ ಕೊನೆಯ ಪೈಗಂಬರ್‌ ಮೊಹ್ಮದ್‌(ಸಅಸ) ಅವರ ಹುಟ್ಟು ಹಬ್ಬವನ್ನು ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ ಮುಸ್ಲಿಂ ಸಮುದಾಯದವರು ಸರಳವಾಗಿ ಆಚರಿಸಿದರು.

ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಿಸುವಸಲುವಾಗಿ ಸರ್ಕಾರ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲು ಮತ್ತು ಮೆರವಣಿಗೆ ನಡೆಸಲು ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನೀಡಿರುವ ನಿರ್ದೇಶನ ಪಾಲಿಸುವ ಮೂಲಕ ಪ್ರವಾದಿಮೊಹ್ಮದ್‌ ಪೈಗಂಬರ್‌ ಅವರ ಹುಟ್ಟುಹಬ್ಬ ಈದ್‌ ಮಿಲಾದ್‌ ಉಲ್‌ ನಬೀ(ಸಅಸ) ಶ್ರದ್ಧಾಭಕ್ತಿಯಿಂದ ಮನೆ ಮತ್ತು ಮಸೀದಿಗಳಲ್ಲಿ ಆಚರಿಸಿದರು.

ಸಂಪ್ರದಾಯದಂತೆ ಜಿಲ್ಲಾದ್ಯಂತ ನಗರ ಪ್ರದೇಶ ಗಳಲ್ಲಿ ಹಸಿರು ಬಣ್ಣದ ಧ್ವಜಗಳೊಂದಿಗೆ ಮತ್ತು ವಾಹನಗಳನ್ನು ಶೃಂಗರಿಸಿಕೊಂಡು ಮೆರವಣಿಗೆ ನಡೆಸಿ ಬಳಿಕ ಈದ್ಗಾ ಮೈದಾನದಲ್ಲಿ ಸಾಮೂಹಿಕ ವಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಈದ್‌  ಮಿಲಾದ್‌ ಹಬ್ಬವನ್ನು ಆಚರಿಸುತ್ತಿದ್ದರು. ಆದರೆ ಈ ವರ್ಷ ಕೋವಿಡ್‌ ಆತಂಕದಿಂದ ಎಲ್ಲಾ ಆಚರಣೆ ಗಳಿಗೆ ಬ್ರೇಕ್‌ ಬಿದ್ದಿದೆ. ಮೆರವಣಿಗೆ ಮತ್ತು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲು ನಿಬಂಧಿಸಿ ದ್ದರಿಂದ ಮನೆ ಮತ್ತು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಬ್ಯಾನರ್‌, ದೀಪಾಲಂಕಾರ: ಈದ್‌ ಮಿಲಾದ್‌ ಉಲ್‌ ನಬೀ ಅಂಗವಾಗಿ ಮಸೀದಿಗಳಿಗೆ ವಿದ್ಯುತ್‌ ದೀಪಾಲಂಕಾರ ಮಾಡಿ ಕಂಗೊಳಿಸಲಾಗಿದೆ. ನಗರದ ಪ್ರಮುಖ ಬೀದಿಗಳನ್ನು ಬಂಟಿಂಗ್ಸ್‌ ಮತ್ತು ಬ್ಯಾನರ್‌ಗಳಿಂದ ಶೃಂಗರಿಸಲಾಗಿದೆ. ಸಮಾಜದ ಯುವಕರು ತಮ್ಮ ತಮ್ಮ ವಾಹನಗಳಿಗೆ ಹಸಿರು ಬಣ್ಣದ ಧ್ವಜಗಳಿಂದ ಶೃಂಗಾರ ಮಾಡಿಕೊಂಡಿದ್ದಾರೆ.

ಇನ್ನೂ ಕೆಲವರು ಆಟೋ ಮತ್ತು ಕಾರುಗಳನ್ನು ಅಲಂಕರಿಸಿದ್ದಾರೆ. ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿ ಸಲು ಬರುವ ಮುಸ್ಲಿಂ ಸಮಾಜದವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ ನೀಡಿ ಮಸೀದಿಯ ಹೊರಭಾಗದಲ್ಲಿ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಿದ್ದು ವಿಶೇಷವಾಗಿತ್ತು.

ಜಿಲ್ಲೆಯ ಶಿಡ್ಲಘಟ್ಟ ನಗರದ ಆಮೀರಿಯಾ ಮಿಲಾದ್‌ ಸಮಿತಿ ಸದಸ್ಯರು ಅಮೀರ್‌ ದರ್ಗಾ ಬಳಿ ಮದೀನಾ ಮುನವರಾದ ಗುಮ್ಮಟದ ಮಾದರಿಯ ಸ್ತಬ್ದಚಿತ್ರ ಸಿದ್ಧಗೊಳಿಸಿದ್ದರು. ಯುವಕರು ಅದರ ಮುಂದೆ ನಿಂತು ಫೋಟೊ ತೆಗೆದುಕೊಳ್ಳು ತ್ತಿದ್ದು ವಿಶೇಷವಾಗಿತ್ತು. ಈ ಸಮಿತಿಯ ಸದಸ್ಯರು ಪ್ರವಾದಿ ಅವರ ಹೆಸರಿನಲ್ಲಿ ವಿಶೇಷ ಸೇವಾ ಕಾರ್ಯ ನಡೆಸಿ ಸಿಹಿ ಹಂಚಿಕೆ ಮಾಡಿದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.