ಮುನಿರತ್ನ ಸಿನಿಮಾ ಡೈಲಾಗ್ ಗಳು ನಿಜ ಜೀವನದಲ್ಲೂ ಬಳಕೆ ಆಗುತ್ತವೆಂದು ಗೊತ್ತಿರಲಿಲ್ಲ: ಡಿಕೆಶಿ
Team Udayavani, Nov 1, 2020, 2:41 PM IST
ಬೆಂಗಳೂರು:’ಮುನಿರತ್ನ ಅವರ ನಿಜ ಸ್ವರೂಪ ತಡವಾಗಿ ಅರಿವಾಗಿದೆ. ಅವರ ಸಿನಿಮಾ ಡೈಲಾಗ್ ಗಳು ಕೇವಲ ಸಿನಿಮಾಗಳಿಗೆ ಮಾತ್ರ ಸೀಮಿತವಾಗಿವಲ್ಲ, ನಿಜ ಜೀವನದಲ್ಲೂ ಬಳಕೆ ಆಗುತ್ತವೆ ಎಂದು ಗೊತ್ತಿರಲಿಲ್ಲ. ಈಗ ಗೊತ್ತಾಗುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
‘ಈ ಚುನಾವಣೆ ಈ ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ. ತಾವು ಹಾಕಿದ ಮತವನ್ನು ಮಾರಿಕೊಡಿದ್ದರ ಬಗ್ಗೆ ಮತದಾರರು ಆಕ್ರೋಶಗೊಂಡಿದ್ದಾರೆ. ಯಡಿಯೂರಪ್ಪನವರು ಈ ಅಭ್ಯರ್ಥಿ ಭ್ರಷ್ಟಾಚಾರ ಮಾಡಿದ್ದಾರೆ ಅಂತಾ ಹಿಂದೆಯೇ ರಾಜ್ಯಪಾಲರಿಗೆ ದೂರು ನೀಡಿದ್ದರು. ಪ್ರಧಾನಿ ಮೋದಿ ಹಾಗೂ ಯಡಿಯೂರಪ್ಪನವರು ಇವರ ವಿರುದ್ಧ ಮಾತನಾಡಿದ್ದರು. ಈಗ ಆ ಬಗ್ಗೆ ಬಿಜೆಪಿಯವರ ಬಳಿ ಉತ್ತರವಿಲ್ಲ ಎಂದರು.
ಯಡಿಯೂರಪ್ಪನವರು ಮಂತ್ರಿ ಮಾಡುವುದಾಗಿ ಆಮಿಷ ಒಡ್ಡುತ್ತಿದ್ದಾರೆ. ಇನ್ನು ಬಿಜೆಪಿ ಪಕ್ಷದ ಪರಿಸ್ಥಿತಿ ಕೇಳುವುದೇ ಬೇಡ. ಈತ ಬಿಜೆಪಿ ಸೇರಿ ಒಂದು ವರ್ಷವಾಯ್ತು. ಈವರೆಗೂ ಮುನಿರಾಜು ಗೌಡ ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣವನ್ನು ರದ್ದು ಮಾಡಿಲ್ಲ. ಒಬ್ಬ ಬಿಜೆಪಿ ಕಾರ್ಯಕರ್ತನ ರಕ್ಷಣೆ ಮಾಡಿಲ್ಲ. ಯಡಿಯೂರಪ್ಪನವರು ಇಂಥ ಒಬ್ಬ ವ್ಯಕ್ತಿಗೆ ಅಧಿಕಾರ ಕೊಡುವುದಕ್ಕಾಗಿ ಬಿಜೆಪಿ ಕಾರ್ಯಕರ್ತರನ್ನೇ ಬಲಿ ಕೊಡಲು ಹೊರಟಿದ್ದಾರಲ್ಲಾ ಇದು ಸರಿಯೇ? ಈ ಬಗ್ಗೆ ಯಡಿಯೂರಪ್ಪನವರೇ ಉತ್ತರ ನೀಡಲಿ ಎಂದು ಡಿಕೆಶಿ ಪ್ರಶ್ನಿಸಿದರು.
ಇದನ್ನೂ ಓದಿ:ಸಿದ್ದರಾಮಯ್ಯಗೆ ಮತ್ತಷ್ಟು ಶಾಸಕರು ಪಕ್ಷ ಬಿಡುವ ಹತಾಶೆ: ಗೋವಿಂದ ಕಾರಜೋಳ
ಮುನಿರತ್ನಗೆ ಏನೋ ಹೆಚ್ಚು ಕಮ್ಮಿ ಆಗಿ ಗೊಂದಲದಲ್ಲಿದ್ದಾನೆ. ಅವರ ಪಕ್ಷದಲ್ಲೇ ಅವನಿಗೆ ಅನೇಕ ಸಮಸ್ಯೆಗಳಿವೆ. ಅವರನ್ನು ಮಂತ್ರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದ ಹಾಗೆ ಬಿಜೆಪಿ ನಾಯಕರು ಹಾಗೂ ಈ ಅಭ್ಯರ್ಥಿಯಿಂದ ಕೇಸು ಹಾಕಿಕೊಂಡಿರುವ ಕಾರ್ಯಕರ್ತರು ಬೇಸರಗೊಂಡಿದ್ದು, ಮುಂದಿನ ದಿನಗಳಲ್ಲಿ ಅವರದೇ ಆದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ದುಡ್ಡು ಹಂಚುವ ವಿಚಾರದಲ್ಲಿ ನಿನ್ನೆ ರಾತ್ರಿಯಿಂದ 20 ವಿಡಿಯೋ ಮಾಡಿದ್ದೇವೆ. ಪೊಲೀಸರಿಗೆ ಕೊಡುತ್ತೇವೆ. ಅವರು ಅವರ ಕೆಲಸ ಮಾಡಲಿ. ಮುನಿರತ್ನ ಅವರ ಬಾಯಲ್ಲಿ ಇಂತಹ ಮಾತು ಬರುತ್ತಿವೆ ಎಂದರೆ ಅದರಿಂದ ಕ್ಷೇತ್ರಕ್ಕೆ ಅಪಮಾನವಾಗುತ್ತದೆ. ಅವರು ಕ್ಷೇತ್ರದ ಮತದಾರರಿಗೆ ಅವಮಾನ ಮಾಡುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಅವರು ಉತ್ತರ ನೀಡಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
MUST WATCH
ಹೊಸ ಸೇರ್ಪಡೆ
H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು