ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ಹೊಂದಿದ್ದ ಕಲಬುರ್ಗಿಯ ವ್ಯಕ್ತಿ ಬಂಧನ
Team Udayavani, Nov 2, 2020, 8:00 AM IST
ವಿಜಯಪುರ: ಕಾನೂನು ಬಾಹಿರವಾಗಿ ದೇಶಿ ನಿರ್ಮಿತ ಪಿಸ್ತೂಲ್ ಹೊಂದಿದ್ದ ಆರೋಪದಲ್ಲಿ ಜಿಲ್ಲೆಯ ಅಪರಾಧ ವಿಭಾಗದ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಕಲಬುರ್ಗಿ ನಗರದ ಬಿದ್ದಾಪುರ ಕಾಲೋನಿ ನಿವಾಸಿ ಅಂಬ್ರೀಶ ಸುಭಾಶ ರಾಠೋಡ ಎಂದು ಗುರುತಿಸಲಾಗಿದೆ.
ವಿಜಯಪುರ ಬಳಿಯ ಖತಿಜಾಪುರ ಗ್ರಾಮದಲ್ಲಿ ನೆಲೆಸಿರುವ ಅಂಬ್ರೀಶ ಅಕ್ರಮವಾಗಿ ದೇಶಿ ನಿರ್ಮಿತ ಪಿಸ್ತೂಲ್ ಹೊಂದಿದ್ದ. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಪರಾಧ ವಿಭಾಗದ ಪೊಲೀಸರು, 28 ಸಾವಿರ ರೂ. ಮೌಲ್ಯದ ಪಿಸ್ತೂಲ್ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಸುಭಾಸ ಪೊಲೀಸರ ವಿಚಾರಣೆ ವೇಳೆ ತಾನು ಇಂಡಿ ತಾಲೂಕ ನಂದ್ರಾಳ ಗ್ರಾಮದ ಇಜಾಜ ಬಂದೇನವಾಜ ಪಟೇಲ್ ಎಂಬ ವ್ಯಕ್ತಿಯಿಂದ ಅಕ್ರಮ ಪಿಸ್ತೂಲ್ ಖರೀದಿಸಿದ್ದಾಗಿ ಹೇಳಿದ್ದಾನೆ. ಇಜಾಜ್ ಪಟೇಲ್ ಪ್ರಕರಣವೊಂದರಲ್ಲಿ ಬಂಧಿತನಾಗಿ ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾನೆ.
ಅಪರಾಧ ವಿಭಾಗದ ಅಧಿಕಾರಿ ಸುರೇಶ ಬೆಂಡೆಗುಂಬಳ ಇವರ ನೇತೃತ್ವದ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಎಸ್ಪಿ ಅನುಪಮ್ ಅಗರವಾಲ ತಿಳಿಸಿದ್ದಾರೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ