ಮತದಾನದ ನಂತರ ಆರ್‌.ಆರ್‌.ನಗರದಲ್ಲಿ ‌ರ‍್ಯಾಂಡಮ್‌ ಟೆಸ್ಟ್ ?

ನಿರಂತರ ಸಭೆ, ರ‍್ಯಾಲಿ; ಸೋಂಕು ಹರಡಿರುವ ಸಾಧ್ಯತೆ

Team Udayavani, Nov 2, 2020, 12:02 PM IST

bng-tdy-2

ಬೆಂಗಳೂರು: ಉಪ ಚುನಾವಣೆ ಸಂದರ್ಭದಲ್ಲಿ ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ಸೋಂಕು ಹರಡಿರುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಮತದಾನದ ನಂತರ

” ರ್‍ಯಾಂಡಮ್‌ ಪರೀಕ್ಷೆ’ ನಡೆಸಲು ಪಾಲಿಕೆ ಉದ್ದೇಶಿಸಿದೆ. ಹಲವು ವಾರಗಳಿಂದ ಆರ್‌.ಆರ್‌.ನಗರದಲ್ಲಿ ವಿವಿಧ ಪಕ್ಷಗಳಿಂದ ನಿರಂತರವಾಗಿ ಸಭೆಗಳು, ಪ್ರಚಾರ ರ್ಯಾಲಿಗಳು ನಡೆಯುತ್ತಿವೆ. ಅವುಗಳಲ್ಲಿ ಸಿಎಂ, ಸಚಿವರು ಸೇರಿ ರಾಜಕೀಯ ನಾಯಕರು, ಸಿನಿಮಾ ತಾರೆಯರು ಸಕ್ರಿಯವಾಗಿ ಭಾಗವಹಿಸಿದ್ದಾರೆ. ಸಾವಿರಾರು ಜನ ಒಂದೆಡೆ ಸೇರಿದ್ದಾರೆ. ಬಹುತೇಕ ಕಡೆ ಸಾಮಾಜಿಕ ಅಂತರ ಮಾಯವಾಗಿದ್ದು, ಮುಖಗವಸು ಹಾಕಿದ್ದು ಕೂಡ ತುಂಬಾ ಕಡಿಮೆ. ಈ ಹಿನ್ನೆಲೆಯಲ್ಲಿ ಸೋಂಕು ಹರಡಿರುವ ಸಾಧ್ಯತೆ ಹೆಚ್ಚಿವೆ ಎಂದು ಅಂದಾಜಿಸಲಾಗಿದೆ.

ನ.3ರಂದು ಆ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಇದಾಗಿ 2-3ದಿನಗಳ ಅಂತರದಲ್ಲಿ ಹೆಚ್ಚು ಸಭೆ-ಸಮಾರಂಭ ನಡೆದ ಸ್ಥಳಗಳನ್ನು ಗುರುತಿಸಿ, ಅಂತಹ ಕಡೆಗಳಲ್ಲಿ ರ್‍ಯಾಂಡಮ್‌ ಪರೀಕ್ಷೆ ನಡೆಸಲು ಚಿಂತನೆ ನಡೆದಿದೆ. ಇದಕ್ಕೂ ಮುನ್ನ ಉದ್ದೇಶಿತ ವಿಧಾನಸಭಾ ಕ್ಷೇತ್ರದಲ್ಲಿ ಪರೀಕ್ಷೆಗಳ ಪ್ರಮಾಣ ಹೆಚ್ಚಿಸಿ, ಫ‌ಲಿತಾಂಶ ಪರಿಶೀಲಿಸಲಾಗು ವುದು ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಜೇಂದ್ರ “ಉದಯವಾಣಿ’ಗೆ ಸ್ಪಷ್ಟಪಡಿಸಿದರು.

ರ್‍ಯಾಂಡಮ್‌ ಪರೀಕ್ಷೆ ಈಗಲೇ ನಡೆಸಬಹುದು. ಆದರೆ, ಅದು ಮತದಾನದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳೂ ಇವೆ. ಹೀಗಾಗಿ ಈ ಪ್ರಕ್ರಿಯೆ ಮುಗಿದ ನಂತರ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ. ಈ ಕ್ಷೇತ್ರದಲ್ಲಿ ಒಟ್ಟಾರೆ ಒಂಬತ್ತು ವಾರ್ಡ್‌ಗಳಿದ್ದು, ಕಳೆದ 10 ದಿನಗಳಲ್ಲಿ ಇಡೀ ನಗರದಲ್ಲಿ ದಾಖಲಾಗುವ ಸೋಂಕು ಪ್ರಕರಣಗಳ ಪೈಕಿ ಶೇ.10ರಷ್ಟು ಆರ್‌.ಆರ್‌.ನಗರದಲ್ಲಿ ಪತ್ತೆ ಆಗುತ್ತಿವೆ. ನಿತ್ಯ ಸರಾಸರಿ 7-8 ಸಾವಿರ ಜನರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ.

ಮತದಾನದ ನಂತರ ಈ ಸಂಖ್ಯೆಯನ್ನು 8-10 ಸಾವಿರಕ್ಕೆ ಹೆಚ್ಚಿಸುವ ಗುರಿ ಇದೆ. ಇದಕ್ಕಾಗಿ ಪರೀಕ್ಷಾ ಕೇಂದ್ರ ಹೆಚ್ಚಿಸಲಾಗುವುದು. ಸದ್ಯ ಪ್ರತಿ ವಾರ್ಡ್ ನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಾಗೂ ಮೊಬೈಲ್‌ ಪರೀಕ್ಷಾ ಕೇಂದ್ರ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಏಕೆ ರ್‍ಯಾಂಡಮ್‌ ಪರೀಕ್ಷೆ?: ಹತ್ತಾರು ಸಭೆಗಳಲ್ಲಿ ಸಾವಿರಾರು ಜನ ಭಾಗವಹಿಸಿದ್ದಾರೆ. ಸೋಂಕಿಗೆ ಕಡಿವಾಣ ಹಾಕಲು ರ್‍ಯಾಂಡಮ್‌ ಪರೀಕ್ಷೆ ನಡೆಸುವ ಅಗತ್ಯವಿದೆ. ಪಾಸಿಟಿವ್‌ ಪ್ರಕರಣ ಹೆಚ್ಚು ಕಂಡು ಬಂದರೆ, ಆರಂಭದಲ್ಲೇ ಅಂತಹವರನ್ನು ಕ್ವಾರಂಟೈನ್‌ ಮಾಡಬಹುದು. ಇದರಿಂದ ಸೋಂಕಿನ ಸರಪಳಿ ಕಡಿತಗೊಳ್ಳುತ್ತದೆ. ಆ ಮೂಲಕ ನಿಯಂತ್ರಣವೂ ಆಗಲಿದೆ ಎಂದು ವಿಶೇಷ ಆಯುಕ್ತ (ಆಡಳಿತ) ಜೆ. ಮಂಜುನಾಥ್‌ ತಿಳಿಸುತ್ತಾರೆ.

ಮತಗಟ್ಟೆ ಆಸುಪಾಸು ಪರೀಕ್ಷೆ? :  ಒಂದೇ ಕಡೆ ಹೆಚ್ಚು ಮತಗಟ್ಟೆ ಇರುವ ಪ್ರದೇಶಗಳ ಆಸುಪಾಸು ಕೋವಿಡ್‌-19 ಪರೀಕ್ಷಾ ಕೇಂದ್ರ ತೆರೆಯುವ ಚಿಂತನೆಯೂ ಇದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. ಆರ್‌.ಆರ್‌.ನಗರ

ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 678 ಬೂತ್‌ ತೆರೆಯಲಾಗುತ್ತಿದೆ. ಈ ಪೈಕಿ 8 -10 ಮತಗಟ್ಟೆ ಒಂದೇ ಕಡೆ ಇದ್ದರೆ, ಅಲ್ಲಿಂದ ನೂರು ಮೀಟರ್‌ ಪರೀಕ್ಷಾ ಕೇಂದ್ರ ತೆರೆಯಬಹುದು. ಮತ ಚಲಾಯಿಸಲು ಬಂದವರು, ಹಾಗೇ ಪರೀಕ್ಷೆಗೊಳಗಾಗಿ ಹಿಂತಿರುಗಬಹುದು ಎಂಬ ಲೆಕ್ಕಾಚಾರವೂ ಇದೆ. ಆದರೆ, ಈ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎನ್ನಲಾಗಿದೆ.

ಶಿರಾದಲ್ಲೂ ರ್‍ಯಾಂಡಮ್‌ ಪರೀಕ್ಷೆ? :  ತುಮಕೂರಿನ ಶಿರಾದಲ್ಲೂ ಉಪಚುನಾವಣೆ ನಡೆಯುತ್ತಿದ್ದು, ನಿರಂತರವಾಗಿ ಸಭೆ, ರ್ಯಾಲಿಗಳು ನಡೆದಿವೆ. ಹೀಗಾಗಿ ಅಲ್ಲಿಯೂ ಸೋಂಕು ಹರಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಮುಗಿದ ನಂತರ ರ್‍ಯಾಂಡಮ್‌ ಪರೀಕ್ಷೆ ನಡೆಸಬೇಕು ಎಂಬ ಒತ್ತಾಯವೂ ತಜ್ಞರಿಂದ ಕೇಳಿಬರುತ್ತಿದೆ.

ಪಾದರಾಯನಪುರ ಪ್ರಯೋಗ ಯಶಸ್ವಿ :  ನಗರದ ಪಾದರಾಯನಪುರದಲ್ಲಿ ಈ ಹಿಂದೆ ರ್‍ಯಾಂಡಮ್‌ ಪರೀಕ್ಷೆ ಪ್ರಯೋಗ ಯಶಸ್ವಿಯಾಗಿದೆ. ಆರಂಭದಲ್ಲಿ ಅಲ್ಲಿ ಸೋಂಕು ಪ್ರಕರಣ ಹೆಚ್ಚಾಗಿ ಕಂಡುಬಂದವು. ತದನಂತರ ಕೈಗೊಂಡ ಕ್ರಮಗಳಿಂದ ನಿಯಂತ್ರಣಕ್ಕೂ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.

 

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.