ಚರ್ಚೆಯಿಂದ ಖಂಡ್ರೆ ಪಲಾಯನ: ಖೂಬಾ


Team Udayavani, Nov 2, 2020, 4:29 PM IST

bidar-tdy-2

ಬೀದರ: ಭ್ರಷ್ಟಾಚಾರ ಮತ್ತು ಜಿಲ್ಲೆಯ ಅಭಿವೃದ್ಧಿ ಕುರಿತು ನ. 5ರಂದು ನಗರದ ರಂಗ ಮಂದಿರದಲ್ಲಿ ಬಹಿರಂಗ ಚರ್ಚೆಗೆ ನಾನು ಒಪ್ಪಿಕೊಂಡು, ಇದೊಂದು ಮಾದರಿ ಚರ್ಚೆಯಾಗಲಿ ಎಂಬುದು ನನ್ನಾಶಯ.

ಆದರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಈ ಚರ್ಚೆಯನ್ನು ಬೇರೆಡೆ ಕೊಂಡೊಯ್ಯಲು ಪ್ರಯತ್ನಿಸುತ್ತಿರುವುದು ವಿಷಾದನೀಯ ಎಂದು ಸಂಸದ ಭಗವಂತ ಖೂಬಾ ಹೇಳಿದ್ದಾರೆ. ಈ ಕುರಿತು ಈಶ್ವರ ಖಂಡ್ರೆಗೆ ಪತ್ರ ಬರೆದ ಸಂಸದ ಭಗವಂತ ಖೂಬಾ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಜಿಲ್ಲೆಯಲ್ಲಿ ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಇದು ವೇದಿಕೆಯಾಗಬಾರದು. ನನ್ನನ್ನು ಎರಡು ಬಾರಿ ಲಕ್ಕಿಯಿಂದ ಗೆದ್ದಿದ್ದೀರಿ ಎಂದು ಹೇಳಿದ್ದೀರಿ, ತಾವು ಓಟ್‌ ಬ್ಯಾಂಕ್‌- ತುಷ್ಟೀಕರಣದ ರಾಜಕಾರಣ ಮಾಡಿ 3 ಬಾರಿ ಗೆದ್ದಿದ್ದೀರಿ. ಇದರಲ್ಲಿ ನಿಮ್ಮ ಯಾವ ಪುರಷಾರ್ಥವಿದೆ?. ನಾನು ಈವರೆಗೆ ಭೀಮಣ್ಣಾ ಖಂಡ್ರೆಯವರ ಹೆಸರು ಎಲ್ಲಿಯೂ ತೆಗೆದುಕೊಂಡಿಲ್ಲ, ನಿಮ್ಮ ತಂದೆಯವರ ಹೆಸರು ಸ್ವತಃ ತಾವೇ ಈ ಚರ್ಚೆಯಲ್ಲಿ ಎಳೆದು ತಂದಿರುವಿರಿ ಎಂದಿದ್ದಾರೆ.

ಅಧಿಕಾರಿಗಳ ತನಿಖೆ ಆಧರಿಸಿ ಬಿಜೆಪಿ ರಾಜ್ಯಾಧ್ಯಕ್ಷರು ಭಾಲ್ಕಿ ಕ್ಷೇತ್ರದಲ್ಲಿ ಮನೆ ಹಗರಣ ಕುರಿತು ಮಾತನಾಡಿದ್ದರೆ ವಿನಃ ನನ್ನ ಪ್ರಚೋದನೆಯಿಂದಲ್ಲ. ಗಣೇಶ ಮೈದಾನದಲ್ಲಿ ಬಹಿರಂಗ ಚರ್ಚೆಗೆ ಪಂಥಾಹ್ವಾನ ನೀಡಿದ್ದೀರಿ. ನಾನು ನಗರದ ರಂಗಮಂದಿರದಲ್ಲಿ ಚರ್ಚೆಗೆ ಬರಲು ಒಪ್ಪಿಕೊಂಡಿದ್ದೇ. ಆದರೆ, ಆ ಸ್ಥಳ ತುಂಬ ಚಿಕ್ಕದು ಎಂದು ಹೇಳಿ ಖಂಡ್ರೆಯವರು ಚರ್ಚೆಯಿಂದ ಪಲಾಯನದ ವಾಮಮಾರ್ಗ ಅನುಸರಿಸುತ್ತಿದ್ದೀರಿ ಎಂದು ಹೇಳಿದ್ದಾರೆ.

ನನ್ನ ಆರೋಪಗಳಿಗೆ ಉತ್ತರಿಸುವ ಎದೆಗಾರಿಕೆ ನಿಮಗಿದ್ದರೆ ನೇರವಾಗಿ ಚರ್ಚೆಗೆ ಬನ್ನಿ. ಫಲಾನುಭವಿಗಳಿಗೆ ಉತ್ತರಿಸುವುದು ಆಶ್ರಯ ಸಮಿತಿ ಅಧ್ಯಕ್ಷರಾಗಿರುವ ನಿಮ್ಮ ಜವಾಬ್ದಾರಿ. ನಿಮ್ಮ ಚಟ ತೀರಿಸಿಕೊಳ್ಳುವುದು ಬಿಟ್ಟು, ಚರ್ಚೆ ಮಾಡೋಣ ಬನ್ನಿ. ಜನ ಸೇರಿಸುವುದರಲ್ಲಿ ಜನರು ನಮ್ಮಿಬ್ಬರ ಸಾಮರ್ಥ್ಯ ನೋಡಿದ್ದಾರೆ. ನಮ್ಮಿಬ್ಬರ ಕಾರ್ಯಕರ್ತರು ಸೇರಿದ ಮೇಲೆ ಇಬ್ಬರಿಗೂ ಜೈಕಾರ ಹಾಕುತ್ತಾರೆ, ಪರಸ್ಪರ ವಿಷಯಗಳು ಸರಿಯಾಗಿ ಚರ್ಚೆಯಾಗಲಾರವು ಎಂದಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ನಮ್ಮ ವೈಯಕ್ತಿಕ ಭ್ರಷ್ಟಾಚಾರವೂ ಕೂಡ ಚರ್ಚೆಯಾಗಬೇಕು. ತಮ್ಮ  ವಿಚಾರದಲ್ಲಿ ಕಾಂಗ್ರೆಸ್‌ ಸಭೆ ಮಾಡುವುದಾದರೆ ಅದಕ್ಕೆ ನನ್ನ ಸಹಮತಿ ಇರುವುದಿಲ್ಲ. ಸಭೆಯೂ ಒಂದು ನಿರ್ದಿಷ್ಟ ಚೌಕಟ್ಟಿನಲ್ಲಿ ನಡೆಸೋಣ, ನಿಮಗಿಷ್ಟವಿದ್ದ ಮತ್ತು ನಿಮ್ಮ ಅನುಕೂಲಕ್ಕಾಗಿ ನಾನು ನನ್ನ ಸಮಯ ವ್ಯರ್ಥ ಮಾಡುವುದಿಲ್ಲ, ನನಗೆ ಜನಸೇವೆ ಮಾಡಲು ಬಹಳಷ್ಟು ಕೆಲಸಗಳು ಇವೆ. ಸಮಯದ ಮೌಲ್ಯದ ಅರಿವು ನನಗಿದೆ.

ಬಹಿರಂಗ ಚರ್ಚೆಯನ್ನು ನಿರ್ದಿಷ್ಟ ಚೌಕಟ್ಟಿನಲ್ಲಿ ನಡೆಸಲು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಬಂಡೆಪ್ಪ ಖಾಶೆಂಪುರ್‌ ಒಪ್ಪಿಕೊಂಡಿದ್ದಾರೆ. ಆದರೆ, ಖಂಡ್ರೆಯವರಿಗೆ ಚರ್ಚೆಬೇಕಾಗಿಲ್ಲ. ಜನರನ್ನು ಸೇರಿಸಿದಾಗ, ಕಾನೂನು ಸುವ್ಯವಸ್ಥೆ ದಾರಿ ತಪ್ಪುತ್ತದೆ ಮತ್ತು ಕೋವಿಡ್‌ ನಿಯಮ ಗಮನದಲ್ಲಿಟ್ಟುಕೊಂಡು ಪೊಲೀಸ್‌ ಇಲಾಖೆ ಮತ್ತು ಜಿಲ್ಲಾಡಳಿತ ಅನುಮತಿ ನೀಡುವುದಿಲ್ಲ. ಆಗ ಸರ್ಕಾರ ಅನುಮತಿ ನೀಡಿಲ್ಲ ಎಂದು ಸರ್ಕಾರದ ಮೇಲೆ ಗೂಬೆ ಕೂರಿಸುವುದು ನಿಮ್ಮ ಕುತಂತ್ರ. ಇದು ಖಂಡ್ರೆಯವರ ಪೂರ್ವನಿಯೋಜಿತ ಯೋಚನೆಯಾಗಿದ್ದು, ಬಹಿರಂಗ ಚರ್ಚೆ ತಪ್ಪಿಸುವ ಹುನ್ನಾರ ಎಂಬುದು ಜನರ ಮಾತಾಗಿದೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.