ಹಂಪಿ ಉತ್ಸವಕ್ಕೆ ಶೀಘ್ರ ದಿನಾಂಕ ನಿಗದಿ


Team Udayavani, Nov 2, 2020, 6:02 PM IST

ಹಂಪಿ ಉತ್ಸವಕ್ಕೆ ಶೀಘ್ರ ದಿನಾಂಕ ನಿಗದಿ

ಬಳ್ಳಾರಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಹಂಪಿ ಉತ್ಸವ ಆಚರಣೆಗೆ ಸಂಬಂಧಿ ಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ದಿನಾಂಕ ನಿಗದಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ, ಅರಣ್ಯ ಸಚಿವ ಬಿ.ಎಸ್‌. ಆನಂದ್‌ಸಿಂಗ್‌ ಹೇಳಿದರು.

ನಗರದ ಮುನಿಸಿಪಲ್‌ ಕಾಲೇಜು ಮೈದಾನದಲ್ಲಿ ಭಾನುವಾರ ಕರ್ನಾಟಕರಾಜ್ಯೋತ್ಸವ ಕಾರ್ಯಕ್ರಮ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲೇ ತಿಳಿಸಿದಂತೆ ಹಂಪಿ ಉತ್ಸವವನ್ನು ಈ ತಿಂಗಳಲ್ಲಿ ಒಂದು ದಿನದ ಮಟ್ಟಿಗೆ ಸರಳವಾಗಿ ಆಚರಿಸಲಾಗುವುದು. ಸದ್ಯ ವಿಧಾನ ಪರಿಷತ್‌ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಅದಕ್ಕಾಗಿ ಅದು ಮುಗಿದ ತಕ್ಷಣ ನಡೆಸಲು ನಿರ್ಧರಿಸಲಾಗುವುದು. ಈ ಉತ್ಸವ ಆಚರಣೆ ಬಗ್ಗೆ ಸರ್ಕಾರ ನಿರ್ಲಕ್ಷ ಧೋರಣೆ ಇಲ್ಲ. ಈಗಾಗಲೇ ಬಜೆಟ್‌ನಲ್ಲಿ ಇದಕ್ಕಾಗಿ ಹಣ ಮೀಸಲಿರಿಸಲಾಗಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ದಿಷ್ಟ ದಿನಾಂಕವನ್ನು ನಿಗದಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕೋವಿಡ್‌ ಇಳಿಕೆ: ಬಳ್ಳಾರಿ ಜಿಲ್ಲೆ ಸೇರಿ ರಾಜ್ಯದಲ್ಲೂ ಕೋವಿಡ್‌ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದೆ. ಸಾಮಾಜಿಕ ಅಂತರ, ಮಾಸ್ಕ್ ಗಳನ್ನು ಎಲ್ಲರೂ ಬಳಕೆ ಮಾಡಿದರೆ ಅದರಿಂದ ಸಂಪೂರ್ಣ ನಿಯಂತ್ರಣ ಮಾಡಬಹುದು. ಚಳಿಗಾಲದಲ್ಲಿ ಕೋವಿಡ್‌ ಹೆಚ್ಚಾಗಬಹುದು ಎಂಬ ಅನುಮಾನವಿದೆ. ಅದಕ್ಕಾಗಿ ಎಲ್ಲರೂ ಜಾಗೃತರಾಗಿರಬೇಕು. ಸದ್ಯ ಕಡಿಮೆಯಾಗುತ್ತಿದೆ ಎಂದರೆ ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತಿದ್ದು, ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿದೆ ಎಂದೇ ಭಾವಿಸಬೇಕಾಗಿದೆ. ಹಾಗಾಗಿ ಜನರು ಸ್ಯಾನಿಟೈಸರ್‌, ಮಾಸ್ಕ್, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಗೆಲುವು ಖಚಿತ: ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆ ಪ್ರಶ್ನೆಯಾಗಿದೆ. ಆದರೂ ನಮ್ಮ ಪಕ್ಷದ ಅಭ್ಯರ್ಥಿಗಳೂ ಸಹ ಎರಡೂ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದೆ. ನಮ್ಮ ಸರ್ಕಾರದ ಕೆಲಸ ನೋಡಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಖಚಿತ ಎಂದರು.

ನೀತಿ ಸಂಹಿತೆ: ವಿಜಯನಗರ ಜಿಲ್ಲೆಯ ರಚನೆ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲ್ಲ. ನೀತಿ ಸಂಹಿತೆ ಇದೆ ಎಂದು ಜಾರಿಕೊಂಡ ಆನಂದ ಸಿಂಗ್‌ ಅವರು ಪಕ್ಕದಲ್ಲಿದ್ದ ಶಾಸಕಸೋಮಶೇಖರ ರೆಡ್ಡಿ ಅವರಿಗೆ ಅಣ್ಣಾನೀನೇನು ಗಾಬರಿಯಾಗಬೇಡ ಎಂದಿದ್ದು ಗಮನ ಸೆಳೆಯಿತು.

ಎರಡನೇ ಬೆಳೆಗೆ ನೀರು: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಈ ಬಾರಿ ಬೇಸಿಗೆಯ ಎರಡನೇ ಬೆಳೆಗೆ ನೀರು ಬಿಡುವ ಕುರಿತು ಚರ್ಚಿಸಲು ಸದ್ಯದಲ್ಲೇ ನೀರಾವರಿಸಲಹಾ ಸಮಿತಿ ಸಭೆ ಕರೆಯಲಾಗುವುದು ಎಂದ ಸಚಿವ ಆನಂದ್‌ಸಿಂಗ್‌, ತುಂಗಭದ್ರಾ ಜಲಾಶಯ ಇಂದಿಗೂ ಭರ್ತಿಯಾಗಿದೆ.ಜತೆಗೆ ಈ ಬಾರಿ ಪ್ರಕೃತಿಯು ರೈತರಿಗೆ ಸಹಕಾರ ನೀಡಿದ್ದು ಉತ್ತಮವಾಗಿ ಮಳೆ ಸುರಿದಿದೆ.

ಇದರಿಂದ ಎರಡನೇ ಬೆಳೆ ಬೆಳೆಯಲು ನೀರಿನ ಸಮಸ್ಯೆ ಇಲ್ಲ. ಆದರೆ ಯಾವ ಯಾವ ಕಾಲುವೆಗಳಿಗೆ ಎಷ್ಟು ಪ್ರಮಾಣದಲ್ಲಿ ನೀರು ಹಂಚಿಕೆ ಮಾಡಿ ಬೆಳೆಯನ್ನು ಉತ್ತಮವಾಗಿ ಪಡೆಯಲು ಸಾಧ್ಯ ಎಂಬುದರ ಬಗ್ಗೆ ಅಧಿ  ಕಾರಿಗಳು ಮತ್ತು ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಶಾಸಕ, ಸಂಸದರಸಭೆ ಕರೆದು ನಿರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಈ ವೇಳೆ ಶಾಸಕ ಜಿ. ಸೋಮಶೇಖರರೆಡ್ಡಿ ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.