ಸಂಪೂರ್ಣ ಹದಗೆಟ್ಟ ಹೆಬ್ರಿ ಕಾಲೇಜು ರಸ್ತೆ

ವರ್ಷ ಕಳೆದರೂ ದುರಸ್ತಿಯಾಗಿಲ್ಲ ; ಸಾರ್ವಜನಿಕರ ಆಕ್ರೋಶ

Team Udayavani, Nov 3, 2020, 4:48 AM IST

Hebri

ಹೊಂಡ ಗುಂಡಿಗಳಿಂದ ಕೂಡಿರುವ ಹೆಬ್ರಿ ಕಾಲೇಜು ರಸ್ತೆ.

ಹೆಬ್ರಿ: ಉಡುಪಿಗೆ ಸಂಪರ್ಕಿಸುವ ಹೆಬ್ರಿ ಕಾಲೇಜು ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳ ನಡುವೆ ರಸ್ತೆ ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜಿ.ಪಂ. ರಸ್ತೆ ಇದಾಗಿದ್ದು ಕಳೆದ ಒಂದೂವರೆ ವರ್ಷಗಳಿಂದ ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮಾರ್ಗದಲ್ಲಿ ದಿನನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು, ಹೊಂಡಗಳ ನಡುವೆ ಚಲಿಸುವಾಗ ನಿಯಂತ್ರಣ ತಪ್ಪಿ ಹಲವಾರು ಬಾರಿ ಅನಾಹುತಗಳು ಸಂಭವಿಸಿವೆ. ಅಲ್ಲದೆ ಸಮೀಪದಲ್ಲಿ ಸರಕಾರಿ ಆಸ್ಪತ್ರೆ ಇದ್ದು ದಿನನಿತ್ಯ ರೋಗಿಗಳು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಈ ಹಿಂದೆ ಸಂಪೂರ್ಣ ಹದಗೆಟ್ಟ ರಸ್ತೆಗೆ ಸ್ವಲ್ಪ ಭಾಗದವರೆಗೆ ಮಾತ್ರ ಅಸಮರ್ಪಕ ಕಾಂಕ್ರೀಟ್‌ ಕಾಮಗಾರಿ ಮಾಡಿದ್ದು ಅದು ಕೂಡ ಸಂಪೂರ್ಣ ಹಾನಿಗೊಂಡಿದೆ ಎಂದು ಇಲ್ಲಿನ ಸ್ಥಳೀಯರು ಹೇಳುತ್ತಾರೆ. ಇನ್ನಾದರೂ ಸಂಬಂಧಪಟ್ಟ ಇಲಾಖೆ ಕೂಡಲೇ ಸಮಸ್ಯೆ ಬಗೆಹರಿಸಿ. ಇಲ್ಲದಿದ್ದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಸಮೀಪದಲ್ಲಿಯೇ ಹೆಬ್ರಿ ತಾಲೂಕು ಕಚೇರಿ ನಿರ್ಮಾಣ
ಕಾಲೇಜು ರಸ್ತೆ ಸಮೀಪದಲ್ಲಿಯೇ ಹೆಬ್ರಿ ತಾಲೂಕು ಕಚೇರಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಬ್ರಹ್ಮಾವರ ಮಾರ್ಗ, ಕುಚ್ಚಾರು ಮಾರ್ಗದಿಂದ ಬಂದವರು ಮೂರು ರಸ್ತೆಯಲ್ಲಿ ಇಳಿದು ಇದೇ ಕಾಲೇಜು ಮಾರ್ಗದಲ್ಲಿ ಮುಂದೆ ತಾಲೂಕು ಕಚೇರಿಗೆ ಬರಬೇಕಾಗುತ್ತದೆ. ರಸ್ತೆ ತುಂಬ ಕಿರಿದಾಗಿರುವುದರಿಂದ ಇದನ್ನು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಿದಲ್ಲಿ ಜನರಿಗೆ ಅನುಕೂಲವಾಗಲಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಸಮಸ್ಯೆ ಬಗ್ಗೆ ವರದಿ ಪ್ರಕಟ
ಕಳೆದ ಮಳೆಗಾಲದಲ್ಲಿ ಈ ರಸ್ತೆ ದುರಸ್ತಿಯ ಬಗ್ಗೆ ಉದಯವಾಣಿ ಸಮರ್ಪಕ ವರದಿ ಪ್ರಕಟಿಸಿತ್ತು. ಆ ಸಂದರ್ಭ ಸಂಬಂಧಪಟ್ಟ ಜನಪ್ರತಿನಿಧಿಗಳು, ಪ್ರಕೃತಿ ವಿಕೋಪ ನಿಧಿ ಅಡಿಯಲ್ಲಿ ಈ ಮಾರ್ಗಕ್ಕೆ 5 ಲಕ್ಷ ರೂ. ಅನುದಾನ ಮಂಜೂರಾಗಿದೆ. ಅಲ್ಲದೆ ಬೇರೆ ಅನುದಾನದ ಪ್ರಯತ್ನದೊಂದಿಗೆ ಮಳೆಗಾಲ ಮುಗಿದ ಅನಂತರ ಶೀಘ್ರ ರಸ್ತೆ ಕಾಮಗಾರಿ ಆರಂಭವಾಗುವುದು ಎಂದು ಕಳೆದ ಮಳೆಗಾಲದಲ್ಲಿ ಪ್ರತಿಕ್ರಿಯೆ ನೀಡಿದ್ದರು. ಆದರೆ ಯಾವುದೇ ಕಾಮಗಾರಿ ಆರಂಭವಾಗದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಅನುದಾನ ಬಿಡುಗಡೆಯಾಗಿದೆ
ಪಿಡಬ್ಲ್ಯುಡಿ ಬಜೆಟ್‌ ವರ್ಕ್‌ ಅಡಿಯಲ್ಲಿ 25 ಲಕ್ಷ ರೂ.ಅನುದಾನ ಬಿಡುಗಡೆಯಾಗಿದೆ. ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಸಮೀಪವಿರುವ ರಸ್ತೆಯಿಂದ ಪ್ರಥಮ ದರ್ಜೆ ಕಾಲೇಜಿನ ತನಕ 5.5 ಅಡಿ ಅಗಲದಲ್ಲಿ ಡಾಮರು ಕಾಮಗಾರಿ ನವೆಂಬರ್‌ ತಿಂಗಳ ಮೊದಲ ವಾರದಲ್ಲಿ ಆರಂಭಗೊಳ್ಳಲಿದ್ದು, ಡಿ. 25ರ ಒಳಗೆ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ.
-ಲಾಯ್ಡ ಸಂದೀಪ್‌ ಡಿ’ಸಿಲ್ವ,  ಕಿರಿಯ ಅಭಿಯಂತರರು, ಲೋಕೋಪಯೋಗಿ ಇಲಾಖೆ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.