ಅಭಿವೃದ್ಧಿಯತ್ತ ಗಮನ ಹರಿಸಿ


Team Udayavani, Nov 3, 2020, 6:05 AM IST

ಅಭಿವೃದ್ಧಿಯತ್ತ ಗಮನ ಹರಿಸಿ

ಉಪ ಚುನಾವಣೆ ನೀತಿ ಸಂಹಿತೆ ನ.12ರ ವರೆಗೂ ಇದೆಯಾದರೂ ತುರ್ತು ಕಾರ್ಯಗಳು, ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿಷಯದಲ್ಲಿ ತೀರ್ಮಾನ ಕೈಗೊಳ್ಳಬಹುದಾಗಿದೆ.

ರಾಜ್ಯದಲ್ಲಿ ಪ್ರವಾಹ ಹಾಗೂ ಕೊರೊನಾ ನಿರ್ವಹಣೆ ನಡುವೆಯೇ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ, ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆ ಎದುರಾಗಿ ಅಭಿವೃದ್ಧಿ ಕಾರ್ಯಗಳು ಬಹುತೇಕ ಸ್ಥಗಿತಗೊಂಡಂತಾಗಿತ್ತು.

ಇದೀಗ ಉಪ ಚುನಾವಣೆ ಮತದಾನದ ಅನಂತರ ರಾಜ್ಯ ಸರಕಾರ ಮತ್ತೆ ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸಬೇಕಿದೆ. ಉಪ ಚುನಾವಣೆ ನೀತಿ ಸಂಹಿತೆ ನ.12ರವರೆಗೂ ಇದೆಯಾದರೂ ತುರ್ತು ಕಾರ್ಯಗಳು, ಪ್ರವಾಹ ಸಂತ್ರಸ್ತರಿಗೆ ಪರಿಹಾರ ವಿಷಯದಲ್ಲಿ ತೀರ್ಮಾನ ಕೈಗೊಳ್ಳಬಹುದಾಗಿದೆ.

ವಿಧಾನಪರಿಷತ್‌ ಚುನಾವಣೆ ಹಾಗೂ ಉಪ ಚುನಾವಣೆ ಹಿನ್ನೆಲೆಯಲ್ಲಿ ಪ್ರಮುಖವಾಗಿ ಬಹುತೇಕ ಸಚಿವರು ಪ್ರಚಾರ ಕಾರ್ಯಗಳಲ್ಲಿ ನಿರತರಾಗಿದ್ದರು. ಜತೆಗೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಕಾರವೂ ಯಾವುದೇ ಹೊಸ ಯೋಜನೆ ಅಥವಾ ಘೋಷಣೆ ಗಳನ್ನು ಮಾಡುವಂತಿರಲಿಲ್ಲ.

ಪಕ್ಷದಿಂದ ಸಚಿವರನ್ನು ಚುನಾವಣ ಪ್ರಚಾರ ಕಾರ್ಯಕ್ಕೆ ನಿಯೋಜಿಸಿದ್ದರೆ ಸರಕಾರದಿಂದ ಅಧಿಕಾರಿ ಸಿಬಂದಿಯನ್ನು ಚುನಾವಣ ಕಾರ್ಯಕ್ಕೆ ನಿಯೋಜಿ ಸಲಾಗಿತ್ತು. ಹೀಗಾಗಿ, ಆಡಳಿತಯಂತ್ರ ಒಂದು ರೀತಿಯಲ್ಲಿ ಸ್ಥಗಿತವಾದಂತೆಯೇ ಆಗಿತ್ತು.

ಈ ಕಾರಣಕ್ಕಾಗಿಯೇ, ಇಂಥ ಸಂಕಷ್ಟದ ಸಮಯದಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಿಗುತ್ತಿಲ್ಲ. ಸಚಿವರು ಉಪ ಚುನಾವಣೆಯತ್ತ ಗಮನ ಹರಿಸಿದ್ದು ಸಂಕಷ್ಟಕ್ಕೆ ಸಿಲುಕಿರುವವರ ನೋವು ಕೇಳುವರಿಲ್ಲ ಎಂದು ವಿಪಕ್ಷ ನಾಯಕರು ಆರೋಪ ಮಾಡಿದ್ದರು.

ಇದರ ನಡುವೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹಿರಿಯ ಅಧಿಕಾ ರಿಗಳ ಸಭೆ ನಡೆಸಿ ಪ್ರವಾಹ ಪೀಡಿತ ಸಂತ್ರಸ್ತರ ಪರಿಹಾರ ಹಾಗೂ ತುರ್ತು ಕಾಮಗಾರಿಗಳಿಗೆ ಉಪ ಚುನಾವಣೆ ಅಡ್ಡಿಯಾಗದಂತೆ ನೋಡಿಕೊಳ್ಳಿ ಎಂಬ ಸೂಚನೆ ನೀಡಿದ್ದರು.

ಇದೀಗ ಎರಡೂ ಕ್ಷೇತ್ರಗಳಲ್ಲಿ ಮತದಾನದ ನಂತರ ಉಪ ಚುನಾವಣೆ ಪ್ರಕ್ರಿಯೆ ಬಹುತೇಕ ಮುಗಿಯಲಿದೆ. ಇನ್ನಾದರೂ ಆಡಳಿತ ಯಂತ್ರ ಚುರುಕುಗೊಳಿಸಲು ಸರಕಾರ ಮುಂದಾ ಗಬೇಕು. ಪ್ರವಾಹ ಪರಿಹಾರ ಕಾರ್ಯದ ಕಡೆ ಹೆಚ್ಚು ಗಮನ ಹರಿಸಬೇಕು.

ಜತೆಗೆ, ಬಜೆಟ್‌ ಕಾರ್ಯಕ್ರಮಗಳ ಅನುಷ್ಠಾನಕ್ಕೂ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವುದು ಸಮಾಧಾನದ ವಿಷಯ. ಆದರೆ, ಹಬ್ಬದ ಸಂದರ್ಭಗಳಲ್ಲಿ ಮಾರುಕಟ್ಟೆ, ಶಾಪಿಂಗ್‌ ಮಾಲ್‌ಗ‌ಳಲ್ಲಿ ಜನದಟ್ಟಣೆ ಹೆಚ್ಚಾಗುತ್ತಿರುವುದು ಆತಂಕಕಾರಿ ಎಂದು ಕೇಂದ್ರ ಸರಕಾರವೂ ಎಚ್ಚರಿಕೆ ನೀಡಿದೆ. ಕೊರೊನಾ ಎರಡನೇ ಅಲೆ ಭೀತಿಯೂ ಇದೆ.

ಆರಂಭದಲ್ಲಿ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಸಾಂಕ್ರಾಮಿಕ ಈಗ ಗ್ರಾಮೀಣ ಪ್ರದೇಶಗಳಿಗೂ ಹೆಚ್ಚಾಗಿ ಹರಡಿಬಿಟ್ಟಿದೆ. ಹೀಗಾಗಿ ಕೊರೊನಾ ನಿಯಂತ್ರಣದ ಬಗ್ಗೆಯೂ ಸರಕಾರ ಹೆಚ್ಚು ಗಮನಹರಿಸಿ ನಿಯಂತ್ರಣ ಹಾಗೂ ಚಿಕಿತ್ಸಾ ಕ್ರಮಗಳಿಗೆ ಒತ್ತು ನೀಡಬೇಕಾಗಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.