ಮಕ್ಕಳ ಲಸಿಕೆಯಲ್ಲಿ ಗುರಿ ಮೀರಿದ ಸಾಧನೆ

ಲಾಕ್‌ಡೌನ್‌ನಲ್ಲೂ ತಪ್ಪದ ಕಾರ್ಯ,ಪ್ರತಿ ಮನೆಗೆ ತೆರಳಿ ಲಸಿಕೆ ಹಾಕಿಸಿದ ಆರೋಗ್ಯ ಇಲಾಖೆ

Team Udayavani, Nov 3, 2020, 7:15 PM IST

dg-tdy-1

ದಾವಣಗೆರೆ: ಶಿಶುವಿಗೆ ಲಸಿಕೆ ಹಾಕುತ್ತಿರುವುದು (ಸಾಂದರ್ಭಿಕ ಚಿತ್ರ) ಹಾಗೂ ಮಕ್ಕಳ ಲಸಿಕೆ ಕಾರ್ಯ ಅನುಷ್ಠಾನಕ್ಕಾಗಿ ಸ್ಕೋಚ್‌ ಸಂಸ್ಥೆ ರಾಜ್ಯ ಆರೋಗ್ಯ ಇಲಾಖೆಗೆ ನೀಡಿದ ಬೆಳ್ಳಿ ಪ್ರಶಂಸಾ ಪುರಸ್ಕಾರ

ದಾವಣಗೆರೆ: ಕೋವಿಡ್ ಕಾರಣದಿಂದ ವಿಧಿಸಿದ ಲಾಕ್‌ಡೌನ್‌ನಂಥ ಕಠಿಣ ಪರಿಸ್ಥಿತಿಯಲ್ಲಿಯೂ ಜಿಲ್ಲಾ ಆರೋಗ್ಯ ಇಲಾಖೆ ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯದಲ್ಲಿ ಗುರಿ ಮೀರಿ ಸಾಧನೆ ಮಾಡಿ ಗಮನ ಸೆಳೆದಿದೆ.

ಲಾಕ್‌ಡೌನ್‌ ವೇಳೆ ಮನೆಯಿಂದ ಹೊರ ಬರಲು ಆಗದೆ ವಿಶ್ವದ ಲಕ್ಷಾಂತರ ಮಕ್ಕಳುನಿಗದಿತ ಚುಚ್ಚುಮದ್ದಿನ ಲಸಿಕೆಗಳಿಂದ ವಂಚಿತರಾಗಿದ್ದರು. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಆತಂಕ ವ್ಯಕ್ತಪಡಿಸಿತ್ತು. ಆದರೆ ಜಿಲ್ಲಾ ಆರೋಗ್ಯ ಇಲಾಖೆ ಮಾತ್ರ ಒಂದು ದಿನದಿಂದಹಿಡಿದು 16 ವರ್ಷದೊಳಗಿನ ಮಕ್ಕಳಿಗೆ ಅತಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆಗಳನ್ನು ಹಾಕುವ ಮೂಲಕ ಮಕ್ಕಳ ಆರೋಗ್ಯ ರಕ್ಷಣೆ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿದೆ.

ಆರೋಗ್ಯ ಇಲಾಖೆ ಏಪ್ರಿಲ್‌ನಿಂದ ಸೆಪ್ಟೆಂಬರ್‌ ವರೆಗೆ ಒಟ್ಟು 13,181 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿತ್ತು. ಲಾಕ್‌ಡೌನ್‌ ಇದ್ದಾಗಲೂ ಇಲಾಖೆಯ ಅಧಿಕಾರಿಗಳು ಮುತುವರ್ಜಿವಹಿಸಿ ಜಿಲ್ಲೆಯ 13,322 ಮಕ್ಕಳಿಗೆ ಲಸಿಕೆ ಹಾಕಿದ್ದು ಸಾಧನೆ ಶೇ. 101 ಆಗಿದೆ. ಆರೋಗ್ಯ ಕಾರ್ಯಕರ್ತರು, ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಹೋಗಿ ಲಸಿಕೆ ಹಾಕಿರುವುದು ವಿಶೇಷ. ಐದು ವರ್ಷ, 10 ವರ್ಷ ಹಾಗೂ 16 ವರ್ಷದ ಮಕ್ಕಳಿಗಂತೂ ಎಲ್ಲಿಯೂ ಲಸಿಕೆ ಹಾಕುವ ಕಾರ್ಯ ಸಮರ್ಪಕವಾಗಿ ನಡೆದಿಲ್ಲ.ಆದರೆ ಜಿಲ್ಲಾ ಆರೋಗ್ಯ ಇಲಾಖೆ ಮಾತ್ರ ಈ ವಯಸ್ಸಿನ 2800 ಮಕ್ಕಳಿಗೆ ಲಾಕ್‌ಡೌನ್‌ ಅವಧಿಯಲ್ಲಿ ಲಸಿಕೆ ಹಾಕಿ ದಾಖಲೆ ಬರೆದಿದೆ.

ತಾಲೂಕುವಾರು ವಿವರ: ಚನ್ನಗಿರಿ ತಾಲೂಕಿನಲ್ಲಿ 2531 ಮಕ್ಕಳಿಗೆ, ದಾವಣಗೆರೆ ತಾಲೂಕಿನಲ್ಲಿ 5096 ಮಕ್ಕಳಿಗೆ, ಹರಿಹರ ತಾಲೂಕಿನಲ್ಲಿ 2174 ಮಕ್ಕಳಿಗೆ, ಹೊನ್ನಾಳಿ ತಾಲೂಕಿನಲ್ಲಿ 2099 ಮಕ್ಕಳಿಗೆ, ಜಗಳೂರು ತಾಲೂಕಿನಲ್ಲಿ1422 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಹೊನ್ನಾಳಿ ತಾಲೂಕಿನಲ್ಲಿ ಅತಿ ಹೆಚ್ಚು ಅಂದರೆ ಶೇ. 123 (1701 ಗುರಿ) ಗುರಿ ಸಾಧಿಸಲಾಗಿದೆ. ಉಳಿದಂತೆ ಚನ್ನಗಿರಿ ತಾಲೂಕಿನಲ್ಲಿ ಶೇ. 104 (2442 ಗುರಿ), ದಾವಣಗೆರೆ ತಾಲೂಕಿನಲ್ಲಿ ಶೇ.91 (5575 ಗುರಿ), ಹರಿಹರ ತಾಲೂಕಿನಲ್ಲಿ ಶೇ. 108 (2019ಗುರಿ), ಜಗಳೂರು ತಾಲೂಕಿನಲ್ಲಿ ಶೇ. 99 (1443ಗುರಿ) ಗುರಿ ಸಾಧಿಸಲಾಗಿದೆ. ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಮಕ್ಕಳಿಗೆ ವಿವಿಧ 13 ಲಸಿಕೆಗಳನ್ನು ಹಾಕಿದ ಮಕ್ಕಳ ಸಂಖ್ಯೆ ಹಾಗೂ ಸಾಧನೆಯ ಶೇಕಡಾ ವಿವರ ಇಂತಿದೆ. ಟಿಟಿ ಎಎನ್‌ಸಿ-13,617 (ಶೇ.93), ಬಿಸಿಜಿ-9871 (ಶೇ. 75), ಪೆಂಟಾ 1-11,428 (ಶೇ. 87), ಓಪಿವಿ (ಬರ್ತ್‌ ಡೋಸ್‌)-9535 (ಶೇ. 72), ಒಪಿವಿ 1-9535 (ಶೇ. 72), ಹೆಪಟೈಟಿಸ್‌ ಬಿ (ಬರ್ತ್‌ ಡೋಸ್‌)-8671 (ಶೇ. 66), ಐಪಿವಿ 1-11256 (ಶೇ. 85), ಐಪಿವಿ 2-10616 (ಶೇ. 81) ಎಂಆರ್‌ 1-13322 (ಶೇ. 101), ಪೋಲಿಯೋ ಬೂಸ್ಟರ್‌-10,351 (ಶೇ. 79) ಡಿಟಿ 5 ಇಯರ್‌-11,370 (ಶೇ. 86), ಟಿಟಿ 10 ಇಯರ್‌-12,661 (ಶೇ. 96), ಟಿಟಿ 16 ಇಯರ್‌-10,075 (ಶೇ.76). ಒಟ್ಟಾರೆ ಕೊರೊನಾ ಲಾಕ್‌ಡೌನ್‌ಅವಧಿಯಲ್ಲಿಯೂ ಮನೆ ಮನೆಗೆ ಹೋಗಿ ಮಕ್ಕಳಿಗೆ ಅಗತ್ಯ ಲಸಿಕೆ ಹಾಕುವ ಮೂಲಕ ಜಿಲ್ಲಾ ಆರೋಗ್ಯ ಇಲಾಖೆ ತೋರಿದ ಕಾಳಜಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

ಕೋವಿಡ್‌-19 ಲಾಕ್‌ಡೌನ್‌ ಹಾಗೂ ಅನ್‌ಲಾಕ್‌ ಸಂದರ್ಭದಲ್ಲಿಯೂ ಮಕ್ಕಳಿಗೆ ಹಲವು ವಿಧದ ಲಸಿಕೆ ಹಾಕುವ ಮೂಲಕ ದಾವಣಗೆರೆ ಜಿಲ್ಲೆಯಲ್ಲಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಉತ್ತಮವಾಗಿ ಜಾರಿಗೊಳಿಸಲಾಗಿದೆ. ಲಾಕ್‌ಡೌನ್‌ ಅವಧಿಯಲ್ಲಿ ರಾಜ್ಯದಲ್ಲಿ ಮುತುವರ್ಜಿ ವಹಿಸಿ ಮಕ್ಕಳಿಗೆ ಲಸಿಕೆ ಹಾಕಿರುವುದರಿಂದಸ್ಕೋಚ್‌ ಸಂಸ್ಥೆ ರಾಜ್ಯ ಆರೋಗ್ಯ ಇಲಾಖೆಗೆ ಬೆಳ್ಳಿ ಪ್ರಶಸ್ತಿ ನೀಡಿ ಪ್ರಶಂಸೆ ವ್ಯಕ್ತಪಡಿಸಿದೆ. -ಡಾ| ಮೀನಾಕ್ಷಿ , ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.