ಬಡವರಿಗೆ ಕೇಂದ್ರದ ಯೋಜನೆ ಸಿಗದಂತಾಗಿದೆ. ಮಮತಾ ಜನ ವಿರೋಧಿ: ಅಮಿತ್ ಶಾ ಕಿಡಿ
ಪಶ್ಚಿಮಬಂಗಾಳದ ಜನತೆಯ ಕಣ್ಣುಗಳಲ್ಲಿ ಬದಲಾವಣೆಯ ನಿರೀಕ್ಷೆಯನ್ನು ಕಾಣುತ್ತಿರುವುದಾಗಿ ತಿಳಿಸಿದರು.
Team Udayavani, Nov 5, 2020, 6:24 PM IST
ಕೋಲ್ಕೋತಾ: ಪಶ್ಚಿಮ ಬಂಗಾಳದ ಜನರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಡಳಿತದ ವಿರುದ್ಧ ಆಕ್ರೋಶಿತಗೊಂಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ(ನವೆಂಬರ್ 5, 2020) ಹೇಳಿದರು.
ಎರಡು ದಿನಗಳ ಪಶ್ಚಿಮಬಂಗಾಳ ಭೇಟಿಗಾಗಿ ಆಗಮಿಸಿದ್ದ ಶಾ ಅವರು ಇಂದು ಬಂಕುರಾದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ವೇಳೆ, ಪಶ್ಚಿಮಬಂಗಾಳದ ಜನತೆಯ ಕಣ್ಣುಗಳಲ್ಲಿ ಬದಲಾವಣೆಯ ನಿರೀಕ್ಷೆಯನ್ನು ಕಾಣುತ್ತಿರುವುದಾಗಿ ತಿಳಿಸಿದರು. ಇದು ಕೇವಲ ನರೇಂದ್ರ ಮೋದಿ ಅವರ ನಾಯಕತ್ವದಿಂದ ಮಾತ್ರ ಸಾಧ್ಯ ಎಂದರು.
ಕೇಂದ್ರ ಸರ್ಕಾರ ನೀಡಿರುವ ಸುಮಾರು 80ಕ್ಕೂ ಅಧಿಕ ಯೋಜನೆಗಳು ಪಶ್ಚಿಮ ಬಂಗಾಳದ ಜನರಿಗೆ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ದೊರೆಯದಂತೆ ಮಾಡಿದೆ ಎಂದು ದೂರಿದರು. ಪಶ್ಚಿಮಬಂಗಾಳಕ್ಕೆ ಭೇಟಿ ನೀಡಿದ್ದ ಶಾ ಅವರು ಖ್ಯಾತ ಬುಡಕಟ್ಟು ಮುಖಂಡ ಬಿರ್ಸಾ ಮುಂಡಾ ಅವರ ಪ್ರತಿಮೆಗೆ ಹೂಮಾಲೆ ಹಾಕಿದರು.
ಇಲ್ಲಿನ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಬುಡಕಟ್ಟು ಜನರ ವಸತಿ ಯೋಜನೆಗೆ ನೀಡಿದ ಹಣವೂ ಕೂಡಾ ತಲುಪಿಲ್ಲ. ರೈತರಿಗೆ ವಾರ್ಷಿಕವಾಗಿ ಸಿಗಬೇಕಾಗಿದ್ದ ಕೇಂದ್ರದ ಆರು ಸಾವಿರ ರೂಪಾಯಿ ಹಣವನ್ನೂ ಕೂಡಾ ಮಮತಾ ಸರ್ಕಾರ ನಿರಾಕರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
MUST WATCH
ಹೊಸ ಸೇರ್ಪಡೆ
Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್ ರೈ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!