ಗಡಿ ಗುರುತಿಸಿ ಪಹಣಿ ಪತ್ರ ತಯಾರಿಸಲು ಸೂಚನೆ

ಪುತ್ತೂರು ತಾಲೂಕು ಪಂಚಾಯತ್‌ ಮಾಸಿಕ ಕೆಡಿಪಿ ಸಭೆ

Team Udayavani, Nov 5, 2020, 9:51 PM IST

Put

ಪುತ್ತೂರು ತಾ.ಪಂ. ಸಭಾಂಗಣದಲ್ಲಿ ಸಭೆ ನಡೆಯಿತು.

ಪುತ್ತೂರು: ಸರಕಾರಿ ಶಾಲೆ, ಅಂಗನವಾಡಿ ಕೇಂದ್ರ ಗಳಿಗೆ ಜಾಗ ಮಂಜೂರು ಮಾಡಿ, ಗಡಿ ಗುರುತಿಸಿ ಪಹಣಿ ಪತ್ರ ತಯಾರಿಸುವಂತೆ ತಾಲೂಕು ಪಂಚಾಯತ್‌ ಅಧ್ಯಕ್ಷ ಕೆ. ರಾಧಾಕೃಷ್ಣ ಬೋರ್ಕರ್‌ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾ.ಪಂ. ಮಾಸಿಕ ಕೆಡಿಪಿ ಸಭೆ ನ. 5ರಂದು ತಾ.ಪಂ. ಸಭಾಂಗಣದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಸಿ. ಮಾತನಾಡಿ, ತಾಲೂಕಿನಲ್ಲಿ 75 ಶಾಲೆಗಳಿಗೆ ಜಾಗ ಮಂಜೂರುಗೊಂಡಿಲ್ಲ ಎನ್ನುವ ಮಾಹಿತಿ ನೀಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ, ತಾಲೂಕಿನಲ್ಲಿ 11 ಅಂಗನವಾಡಿ ಕೇಂದ್ರಗಳಿಗೆ ಜಾಗ ಮಂಜೂರು ಬಗ್ಗೆ ಗಡಿ ಗುರುತು ಆಗಿಲ್ಲ ಎಂದು ಪ್ರಸ್ತಾವಿಸಿದರು.

ತಾ.ಪಂ. ಅಧ್ಯಕ್ಷರು ಉತ್ತರಿಸಿ, ಈ ಬಗ್ಗೆ ಕ್ರಮ ಕೈಗೊಂಡು ಗಡಿ ಗುರುತು ನಡೆಸಿ ಪಹಣಿ ತಯಾರಿಸಬೇಕು. ಈ ವರ್ಷದ ಅಂತ್ಯದ ಒಳಗಾಗಿ ಎಲ್ಲ ಅಂಗನವಾಡಿ ಮತ್ತು ಸರಕಾರಿ ಶಾಲೆಗಳಿಗೆ ಜಾಗ ಗುರುತಿಸಿ ಪಹಣಿ ಪತ್ರ ಸಿದ್ಧಗೊಳ್ಳಬೇಕು ಎಂದು ಕಂದಾಯ ಮತ್ತು ಭೂ ದಾಖಲೆಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಸ್ತೆ ಬದಿ ಮಾರಾಟ: ನಿಗಾ ವಹಿಸಲು ಸೂಚನೆ
ರಸ್ತೆ ಬದಿಯಲ್ಲಿ ಕಿಟಿಕಿ, ಬಾಗಿಲು ಇನ್ನಿತರ ಗೃಹ ನಿರ್ಮಾಣದ ವಸ್ತುಗಳನ್ನಿಟ್ಟು ಮಾರಾಟ ಮಾಡುತ್ತಿ ರುವುದರಿಂದ ವಾಹನಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಅಧ್ಯಕ್ಷರು ಪ್ರಸ್ತಾವಿಸಿದರು. ರಸ್ತೆ ಬದಿಗಳಲ್ಲಿ ವಾಹನ ಮತ್ತು ಪಾದಚಾರಿ ಸಂಚಾರಕ್ಕೆ ತೊಂದರೆ ಮಾಡುವಂತಹ ಮಾರಾಟಕ್ಕೆ ಅವಕಾಶ ನೀಡಬಾರದು. ಈಗ ಅಂತಹ ಪ್ರಕರಣಗಳನ್ನು ಗುರುತಿಸಿ ತೆರವುಗೊಳಿಸುವ ಮೂಲಕ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

18 ಕುಟುಂಬಗಳಿಗೆ ನೋಟಿಸ್‌
ಕೊಳ್ತಿಗೆ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 18 ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟಿಸು ನೀಡಿ ತೆರವುಗೊಳಿಸುವಂತೆ ತಿಳಿಸಿದೆ. ಸುಮಾರು 15 ವರ್ಷಗಳಿಂದ ಇಲ್ಲಿ ಕೃಷಿ ಮಾಡಿಕೊಂಡು ಬದುಕುತ್ತಿರುವ ಇಲ್ಲಿನ ಬಡ ಕುಟುಂಬಗಳಿಗೆ ಇದರಿಂದ ತೊಂದರೆಯಾಗಲಿದೆ ಎಂದು ಅಧ್ಯಕ್ಷರು ಅಧಿಕಾರಿಗಳ ಗಮನಕ್ಕೆ ತಂದರು. ಈ ಬಗ್ಗೆ ಸ್ಪಷ್ಟನೆ ನೀಡಿದ ಅರಣ್ಯ ಅಧಿಕಾರಿ, ಈ ಪ್ರದೇಶ ಮೀಸಲು ಅರಣ್ಯ ವ್ಯಾಪ್ತಿಗೆ ಬರುತ್ತಿರುವುದರಿಂದ ವಾಸಕ್ಕೆ ನೀಡಲು ಅವಕಾಶವಿಲ್ಲ ಎಂದು ತಿಳಿಸಿದರು. ಅರಣ್ಯ ಇಲಾಖೆಗೆ ಪಹಣಿ ಪತ್ರವಾಗಿಲ್ಲ ಎಂಬ ಕಾರಣಕ್ಕೆ ಅದನ್ನು ಅರಣ್ಯದ ಜಾಗ ಅಲ್ಲವೆಂದು ಹೇಳಲು ಆಗುವುದಿಲ್ಲ. ಪಹಣಿ ಪತ್ರ ನೀಡುವಂತೆ ಕಂದಾಯ ಇಲಾಖೆಗೆ ಹಲವು ಬಾರಿ ಮನವಿ ಮಾಡಿದ್ದರೂ ಈ ತನಕ ಅವರು ಮಾಡಿಕೊಟ್ಟಿಲ್ಲ ಎಂದು ದೂರಿದರು. ನೀವು ಅರ್ಜಿ ನೀಡಿದಲ್ಲಿ ನಾವು ಪಹಣಿ ಪತ್ರ ನೀಡುತ್ತೇವೆ ಎಂದು ತಹಶೀಲ್ದಾರ್‌ ರಮೇಶ್‌ ಬಾಬು ತಿಳಿಸಿದರು. ಅರಣ್ಯ ಇಲಾಖೆಗೆ ಪಹಣಿ ಪತ್ರ ಸಿಗಬಹುದು. ಆದರೆ ಅಲ್ಲಿನ ಬಡವರ ಗತಿಯೇನು ಎಂದು ಪ್ರಶ್ನಿಸಿದ ರಾಧಾಕೃಷ್ಣ ಬೋರ್ಕರ್‌ ಅದೇ ಪ್ರದೇಶದಲ್ಲಿ ತಲಾ 5 ಸೆಂಟ್ಸ್‌ ಸರಕಾರಿ ಜಮೀನನ್ನು ತತ್‌ಕ್ಷಣವೇ ಆ ಕುಟುಂಬಗಳಿಗೆ ಮಂಜೂರುಗೊಳಿಸುವಂತೆ ತಹಶೀಲ್ದಾರ್‌ಗೆ ತಿಳಿಸಿದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್‌ ಭಂಡಾರಿ ಕಲಾಪ ನಿರ್ವಹಿಸಿದರು.

ಆರ್ಲಪದವು: ಅಪಾಯಕಾರಿ ಸ್ಥಿತಿಯಲ್ಲಿ ವಸತಿ ಸಮುಚ್ಚಯ
ಆರ್ಲಪದವು ಆರೋಗ್ಯ ಇಲಾಖೆಯ ವಸತಿ ಸಮುಚ್ಚಯ ಕುಸಿಯುವ ಹಂತದಲ್ಲಿದ್ದು, ಈ ಕಟ್ಟಡ ತೆರವುಗೊಳಿಸಲು ಗುತ್ತಿಗೆದಾರರು ಮುಂದಾಗದ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದರು. ಟೆಂಡರ್‌ ದರ ಕಡಿಮೆಗೊಳಿಸಿ ಮತ್ತೆ ಏಲಂ ನಡೆಸುವಂತೆ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಹಿಂದಿನ ಸಭೆಯಲ್ಲಿ ಅಧ್ಯಕ್ಷರು ತಿಳಿಸಿರುವಂತೆ ಪಾಣಾಜೆ ಆರೋಗ್ಯ ಕೇಂದ್ರಕ್ಕೆ ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿಯೊಬ್ಬರನ್ನು ನೇಮಕ ಮಾಡಲಾಗಿದೆ ಎಂದು ಆರೋಗ್ಯಾಧಿಕಾರಿ ಸಭೆಗೆ ತಿಳಿಸಿದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.