ಟ್ರಂಪ್‌ ಪಾರು ಮಾಡಲು ಬಂದ ದೇವದೂತರು! ವೈರಲ್ ಆಯ್ತು ಪೌಲಾ ವೈಟ್‌ ಹೇಳಿಕೆ


Team Udayavani, Nov 6, 2020, 8:29 AM IST

ಟ್ರಂಪ್‌ ಪಾರು ಮಾಡಲು ಬಂದ ದೇವದೂತರು! ವೈರಲ್ ಆಯ್ತು ಪೌಲಾ ವೈಟ್‌ ಹೇಳಿಕೆ

ವಾಷಿಂಗ್ಟನ್ ಡಿಸಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶಕ್ಕೆ ಇಡೀ ಜಗತ್ತು ಕುತೂಹಲದಿಂದ ಕಾಯುತ್ತಿದೆ. ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಿಂದ ಎದುರಾಳಿ ಜೋ ಬೈಡನ್ ಮುನ್ನಡೆ ಸಾಧಿಸಿದ್ದಾರೆ. ಆದರೆ ಇದೀಗ ಅಮೆರಿಕದಲ್ಲಿ ‘ದೇವದೂತ’ರ ವಿಚಾರವೊಂದು ಭಾರಿ ವೈರಲ್ ಆಗುತ್ತಿದೆ.

ರಿಪಬ್ಲಿಕನ್‌ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌ರನ್ನು ಸೋಲಿನ ದವಡೆಯಿಂದ ಪಾರು ಮಾಡಲು ದೇವದೂತರು ಆಫ್ರಿಕಾದಿಂದ ಅಮೆರಿಕದತ್ತ ಧಾವಿಸುತ್ತಿದ್ದಾರೆ! ಹೀಗೆ ಹೇಳಿ, ಟ್ರಂಪ್‌ರನ್ನು ಸಂತೈಸುತ್ತಿರುವುದು ಅವರ ಆಧ್ಯಾತ್ಮಿಕ ಸಲಹೆಗಾರ್ತಿ ಪೌಲಾ ವೈಟ್‌!

ಟ್ರಂಪ್‌ ಮತ್ತೆ ಗದ್ದುಗೆಗೇರುವ ಸಲುವಾಗಿ ಈಕೆ ನಡೆಸಿದ ಪ್ರಾರ್ಥನೆ ಭಾರೀ ವೈರಲ್‌ ಆಗಿದೆ. “ನಾನು ವಿಜಯದ ಸದ್ದನ್ನು ಕೇಳುತ್ತಿದ್ದೇನೆ. ದೇವರೇ ಹೇಳಿದ್ದಾನೆ, ಆ ಗೆಲುವು ಈಗಾಗಲೇ ಘಟಿಸಿದೆ. ರಿಪಬ್ಲಿಕನ್‌ಗೆ ಸೋಲುಣಿಸಲು ರಕ್ಕಸಕೂಟಗಳು ಹೋರಾಡುತ್ತಿವೆ. ಆದರೆ, ಟ್ರಂಪ್‌ರನ್ನು ಗೆಲ್ಲಿಸುವುದಕ್ಕಾಗಿಯೇ ಆಫ್ರಿಕಾದಿಂದ ಯೇಸುವಿನ ದೇವದೂತರು ಇಲ್ಲಿಗೆ ಆಗಮಿಸುತ್ತಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ:ಅಮೆರಿಕ ಫ‌ಲಿತಾಂಶ: ಮುಂದೇನು?

ಪೌಲಾ ವೈಟ್‌ ರ ಈ ಹೇಳಿಕೆ ಇದೀಗ ಅಮೆರಿಕದಲ್ಲಿ ಸಿಕ್ಕಾಪಟ್ಟೆ ಸುದ್ದಿಮಾಡಿದೆ. ನೆಟ್ಟಿಗರು ಇದೊಂದು “ಅರ್ಥಹೀನ ಪ್ರಾರ್ಥನೆ’ ಎಂದು ಟೀಕಿಸುತ್ತಿದ್ದಾರೆ.

ಟ್ರಂಪ್‌ ಸೋತರೆ ಅದು ಕೂಡ ದಾಖಲೆ!

ಹಾಲಿ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ ಸೋಲನುಭವಿಸಿದರೆ 1992ರ ಬಳಿಕ ಮೊದಲ ಬಾರಿಗೆ ಎರಡನೇ ಅವಧಿಗೆ ಆಯ್ಕೆಯಾಗದೇ ಇರುವ ಅಭ್ಯರ್ಥಿ ಎಂಬ ಕುಖ್ಯಾತಿಗೆ ಪಾತ್ರರಾಗಲಿದ್ದಾರೆ. 1992ರಲ್ಲಿ ನಡೆದ ಚುನಾವಣೆಯಲ್ಲಿ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಬಿಲ್‌ ಕ್ಲಿಂಟನ್‌ ಎದುರು ರಿಪಬ್ಲಿಕನ್‌ನ ಅಭ್ಯರ್ಥಿ, ಆಗಿನ ಅಧ್ಯಕ್ಷ ಜಾರ್ಜ್‌ ಎಚ್‌ಡಬ್ಲೂ ಬುಷ್‌ ಸೋಲನುಭವಿಸಿದ್ದರು. ಅಮೆರಿಕದ 100 ವರ್ಷಗಳ ಇತಿಹಾಸದಲ್ಲಿ ಕೇವಲ ಮೂವರು ಮಾತ್ರ 2ನೇ ಅವಧಿಗೆ ಆಯ್ಕೆಯಾಗಿರಲಿಲ್ಲ.

ಟಾಪ್ ನ್ಯೂಸ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.