ಸಾವಿತ್ರಿ ಆದ ತಾರಾ
Team Udayavani, Nov 6, 2020, 2:48 PM IST
ಕನ್ನಡ ಚಿತ್ರರಂಗದಲ್ಲಿಕಳೆದ ಮೂರು ದಶಕಗಳಿಂದ ನೂರಾರು ಪಾತ್ರಗಳಿಗೆ ಜೀವತುಂಬಿ, ಸಿನಿಪ್ರಿಯರ ಮನರಂಜಿಸಿರುವ ನಟಿ ತಾರಾ ಅನುರಾಧ ಈಗ “ಸಾವಿತ್ರಿ’ ಆಗಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.
ಹೌದು, ತಾರಾ ಅಭಿನಯಿಸುತ್ತಿರುವ ಹೊಸಚಿತ್ರಕ್ಕೆ “ಸಾವಿತ್ರಿ’ ಎಂದು ಹೆಸರಿಡಲಾಗಿದೆ. ಇದೇ ನ.19 ರಿಂದ ಬೆಂಗಳೂರು ಸುತ್ತಮುತ್ತ ಸುಮಾರು45 ದಿನಗಳಕಾಲ ಈಚಿತ್ರದ ಚಿತ್ರೀಕರಣ ನಡೆಯಲಿದೆ. “ಪಿಎನ್ಪಿ ಪ್ರೊಡಕ್ಷನ್ಸ್’ ಬ್ಯಾನರ್ನಲ್ಲಿ ಸಾಫ್ಟ್ವೇರ್ ಉದ್ಯೋಗಿ ಪ್ರಶಾಂತ್ಕುಮಾರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಹಿಂದೆ “ಉಯ್ನಾಲೆ’ ಚಿತ್ರವನ್ನು ನಿರ್ದೇಶಿಸಿದ್ದ ಎಸ್. ದಿನೇಶ್ ಈ ಚಿತ್ರಕ್ಕೆಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರ ಸಾಹಿತಿ ಹೃದಯ ಶಿವ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗುತ್ತಿದ್ದು, ಚಿತ್ರಕ್ಕೆ ಸಂಗೀತದ ಜೊತೆಗೆ ಸಾಹಿತ್ಯ, ಸಂಭಾಷಣೆಯನ್ನೂ ಬರೆಯುತ್ತಿದ್ದಾರೆ.
ಉಳಿದಂತೆ “ಸಾವಿತ್ರಿ’ ಚಿತ್ರದಲ್ಲಿ ತಾರಾ ಅವರೊಂದಿಗೆ ಪ್ರಕಾಶ್ ಬೆಳವಾಡಿ, ಸಂಜು ಬಸಯ್ಯ, ಬೇಬಿ ಲೈಲಾ, ಪ್ರಮೋದ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಅಂದಹಾಗೆ, ಸ್ಮಾರ್ಟ್ಫೋನ್ ಮೊದಲಾದ ಆಧುನಿಕ ತಂತ್ರಜ್ಞಾನ ಮತ್ತು ಉಪಕರಣಗಳು ಮಕ್ಕಳ ಮೇಲೆ ಏನೆಲ್ಲ ಪರಿಣಾಮ ಬೀರುತ್ತದೆ ಎನ್ನುವುದರ ಸುತ್ತ ಈ ಚಿತ್ರದಕಥೆ ನಡೆಯುತ್ತದೆ ಎನ್ನುತ್ತದೆ ಚಿತ್ರತಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.