ಮುನಿರತ್ನ ವಿರುದ್ಧ ದಾಖಲೆ ಬಿಡುಗಡೆ ಮಾಡುವುದಿಲ್ಲ: ಡಿಕೆ ಸುರೇಶ್ ಯೂಟರ್ನ್
Team Udayavani, Nov 6, 2020, 3:31 PM IST
ಬೆಂಗಳೂರು: ಮುನಿರತ್ನ ವಿರುದ್ಧದ ದಾಖಲೆಗಳನ್ನು ನಾವು ಬಿಡುಗಡೆ ಮಾಡುತ್ತೇವೆ ಎಂದಿದ್ದ ಸಂಸದ ಡಿ ಕೆ ಸುರೇಶ್ ಇದೀಗ ಯೂ ಟರ್ನ್ ಹೊಡೆದಿದ್ದು, ಮುನಿರತ್ನ ವಿರುದ್ಧ ದಾಖಲೆ ಬಿಡುಗಡೆ ಮಾಡುವುದಿಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗತ್ಯ ಇದ್ದರೆ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದೆ. ಆದರೆ ಈಗ ಚುನಾವಣೆ ಮುಗಿದಿದೆ, ಹೀಗಾಗಿ ದಾಖಲೆ ಬಿಡುಗಡೆಯ ಅಗತ್ಯ ಇಲ್ಲ. ಈಗ ನಾವು ದಾಖಲೆ ಬಿಡುಗಡೆ ಮಾಡಲ್ಲ ಎಂದರು.
ಮುನಿರತ್ನ ಅವರು ಐಡಿ ಕಾರ್ಡ್ ಸಂಗ್ರಹ ಮಾಡಿದ್ದರ ಬಗ್ಗೆ ಹೇಳಲಿ, ಹೈಕೋರ್ಟ್ ನಲ್ಲಿ ಈ ಪ್ರಕರಣ ವಜಾ ಆಗಿಲ್ಲ. ವಜಾ ಆಗಿರೋದು ಎರಡನೇ ಸ್ಥಾನ ಬಂದಿರುವ ತಮಗೆ ವಿಜಯಿ ಮಾಡಿ ಎಂದು ಮುನಿರಾಜು ಸಲ್ಲಿಸಿದ ಅರ್ಜಿ. ಮುನಿರತ್ನ ಮಾದ್ಯಮದವರಿಗೇ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದರು.
ಆರ್ ಆರ್ ನಗರದಲ್ಲಿ ಕಾಂಗ್ರೆಸ್ಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಕಾರ್ಯಕರ್ತರು ಗೆಲ್ಲುವ ಉತ್ಸಾಹದಿಂದ ಇದ್ದಾರೆ. ಅಂಡರ್ ಕರೆಂಟ್ ನಮ್ಮ ಪರವಿದೆ. ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ:ವಿನಯ ಕುಲಕರ್ಣಿ ಬಂಧನದ ಹಿಂದೆ ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲ: ಸವದಿ
ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ ವಿಚಾರದ ಬಗ್ಗೆ ಮಾತನಾಡಿದ ಅವರು, ವಿನಯ್ ಕುಲರ್ಣಿಗೆ ತೊಂದರೆ ಕೊಡಲು ಬಂಧನ ಮಾಡಲಾಗಿದೆ. ಆ ಭಾಗದಲ್ಲಿ ವಿನಯ್ ಪ್ರಭಾವಿ ವೀರಶೈವ ನಾಯಕ, ಅವರಿಂದ ಸಮಸ್ಯೆ ಆಗುತ್ತದೆ ಎಂದು ದುರುದ್ದೇಶದಿಂದ ಬಂಧನ ಮಾಡಲಾಗಿದೆ. ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ. ಆರೋಪ ಮುಕ್ತರಾಗಿ ಹೊರಗೆ ಬರುತ್ತಾರೆ ಎಂದರು.
ಶಾಲೆಗಳ ಆರಂಭ ವಿಚಾರವಾಗಿ ಮಾತನಾಡಿದ ಡಿಕೆ ಸುರೇಶ್, ಬೇರೆ ಬೇರೆ ದೇಶಗಳಲ್ಲಿ ಶಾಲಾರಂಭಕ್ಕೆ ವೈಜ್ಞಾನಿಕ ಮಾನದಂಡಗಳನ್ನು ಅನುಸರಿಸುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಸರ್ಕಾರಕ್ಕೆ ಶಾಲಾ ಮಕ್ಕಳ ಸುರಕ್ಷತೆಯ ಚಿಂತೆ ಇಲ್ಲ. ಎಂಟು ತಿಂಗಳಿಂದ ಮಕ್ಕಳ ಸುರಕ್ಷತೆ ಬಗ್ಗೆ ಪ್ಲಾನ್ ಮಾಡಬೇಕಿತ್ತು. ಆದರೆ ಈಗ ಜನಾಭಿಪ್ರಾಯ ಪಡೆಯುತ್ತೇವೆ ಎನ್ನುತ್ತಿದ್ದಾರೆ. ಸಚಿವರು, ಶಾಸಕರಿಗೆ, ಅಧಿಕಾರಿಗಳಿಗೆ ಸುರಕ್ಷತೆ ಕೊಡಲು ಸರ್ಕಾರಕ್ಕೆ ಗೊತ್ತು, ಆದರೆ ಅದೇ ಸುರಕ್ಷತೆ ಮಕ್ಕಳಿಗೆ ಯಾಕೆ ಕೊಡಲ್ಲ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ನಮ್ಮನ್ನು ಎದುರಿಸಲಾಗದ ಬಿಜೆಪಿ ಸುಳ್ಳು ಆರೋಪಗಳಿಂದ ಹೇಡಿಗಳ ರಾಜಕೀಯ ಮಾಡುತ್ತಿದೆ: ಕಾಂಗ್ರೆಸ್
ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಆಗುತ್ತೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಬಿಹಾರ ಚುನಾವಣೆ ಬಳಿಕ ನೋಡಿ ಗೊತ್ತಾಗುತ್ತದೆ. ಬಿಜೆಪಿಯಲ್ಲಿ ದೊಡ್ಡ ಬದಲಾವಣೆ ಆಗ ಆಗಬಹುದು. ಯತ್ನಾಳ್ ವಿರುದ್ಧ ಇನ್ನೂ ಬಿಜೆಪಿ ಕ್ರಮ ತಗೊಂಡಿಲ್ಲ, ಯಾಕೆ ? ಅದರರ್ಥ, ಯತ್ನಾಳ್ ಗೆ ಸುಮ್ನಿರಪ್ಪ ಅಂದಿರಬೇಕು. ಬಿಜೆಪಿ ಒಳಗೆ ಏನೋ ನಡೆಯುತ್ತಿದೆ ಎನ್ನುವುದು ಇದು ತೋರಿಸ್ತಿದೆ, ಈ ತಿಂಗಳಲ್ಲಿ ಏನೇನು ಬದಲಾವಣೆ ಆಗುತ್ತೋ ಕಾದು ನೋಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ