ಭತ್ತದ ಬೆಲೆ ಕುಸಿತ-ರೈತರಲ್ಲಿ ಆತಂಕ


Team Udayavani, Nov 6, 2020, 8:02 PM IST

ಭತ್ತದ ಬೆಲೆ ಕುಸಿತ-ರೈತರಲ್ಲಿ ಆತಂಕ

ಸಿರುಗುಪ್ಪ: ತಾಲೂಕಿನ ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ನದಿ, ಹಳ್ಳದ ನೀರಾವರಿಪ್ರದೇಶದಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಯಲ್ಲಿ ಇಳುವರಿ ಕಡಿಮೆ ಬರುತ್ತಿದೆ.

ಪ್ರಸಕ್ತ ವರ್ಷ ಒಂದು ಎಕರೆ ಭತ್ತ ಬೆಳೆಯಲು 23 ರಿಂದ 30ಸಾವಿರ ರೂ. ಖರ್ಚು ಮಾಡಿದ್ದು, ಎಕರೆಗೆ 35 ರಿಂದ 40 ಚೀಲ ಇಳುವರಿ ಬರುತ್ತಿದ್ದು, ಸಾಲ ಮಾಡಿ ಭತ್ತ ಬೆಳೆದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.

ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ಹಾಗೂ ಆಗಸ್ಟ್‌ತಿಂಗಳಲ್ಲಿಯೇ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಿದ್ದರಿಂದ ತಾಲೂಕಿನ ರೈತರು ಗಂಗಾ ಕಾವೇರಿ ಸೋನಾಮಸೂರಿ, ಕಾವೇರಿ ಸೋನ, ಎರ್ರಮಲ್ಲಿ, ಗಂಗಾವತಿ ಸೋನಾ ಮುಂತಾದ ವಿವಿಧ ತಳಿಯ ಭತ್ತ ಬೆಳೆದಿದ್ದಾರೆ. ಆದರೆ ಸತತವಾಗಿ ಸುರಿದ ಮಳೆ ಮತ್ತು ಭತ್ತದ ಬೆಳೆಯಲ್ಲಿ ಕಾಣಿಸಿಕೊಂಡ ಕಣೆರೋಗ ಸೇರಿದಂತೆ ವಿವಿಧ ರೋಗಗಳು ಕಾಣಿಸಿಕೊಂಡಿದ್ದವು. ಅಲ್ಲದೆ ಅತಿಯಾದ ರಸಗೊಬ್ಬರ, ಕ್ರಿಮಿನಾಶಕವನ್ನು ಗದ್ದೆಗಳಿಗೆ ಬಳಸಿದ್ದರಿಂದ ಖರ್ಚು ಹೆಚ್ಚಾಗಿದ್ದು, ಒಂದು ಎಕರೆ ಭತ್ತ ಬೆಳೆಯಲು 23 ರಿಂದ 30 ಸಾವಿರರೂ. ವೆಚ್ಚವಾಗಿದೆ. ಆದರೆ ಒಂದು ಎಕರೆಗೆ 35 ರಿಂದ 40 ಚೀಲ ಭತ್ತದ ಇಳುವರಿಬರುತ್ತಿದ್ದು, ರೈತ ಖರ್ಚು ಮಾಡಿದ ಹಣ ವಾಪಸ್‌ ಬರುತ್ತಿಲ್ಲ.

ಸತತವಾಗಿ ಸುರಿದ ಮಳೆಯಿಂದಾಗಿ ಭತ್ತದ ಬೆಳೆಯಲ್ಲಿ ಈ ಬಾರಿ ಕಣೆಹುಳು ರೋಗ, ಬಡ್ಡೆ ಕೊಳೆಯುವ ರೋಗ ಹೀಗೆ ಹಲವು ರೋಗಗಳು ಕಾಣಿಸಿಕೊಂಡ ಪರಿಣಾಮ ಭತ್ತವು ಟಿಸಿಲು ಒಡೆಯದಿರುವುದು ಇಳುವರಿ ಕಡಿಮೆಯಾಗಲು ಮುಖ್ಯಕಾರಣವಾಗಿದೆ. ರೋಗ ನಿಯಂತ್ರಿಸಲು ರೈತರು ದುಬಾರಿ ವೆಚ್ಚದ ಕ್ರಿಮಿನಾಶಕಗಳನ್ನು ಸಿಂಪಡಣೆ ಮಾಡಿ ಅಧಿಕ ಖರ್ಚು ಮಾಡಿದ್ದಾರೆ. ತಾಲೂಕಿನ ಭತ್ತದ ಅಚ್ಚುಕಟ್ಟು ಪ್ರದೇಶದಲ್ಲಿ ಮುಂಗಾರು ಹಂಗಾಮಿನಲ್ಲಿ ಒಂದು ಎಕರೆಗೆ 40 ರಿಂದ 45 (75 ಕೆಜಿ) ಕ್ವಿಂಟಲ್‌ ಭತ್ತದ ಇಳುವರಿ ಬರುತ್ತಿತ್ತು. ಆದರೆ ಈ ಬಾರಿ 33 ರಿಂದ 40 ಕ್ವಿಂಟಲ್‌ ಇಳುವರಿ ಬರುತ್ತಿದ್ದು, ರೈತರು ತೀವ್ರ ನಷ್ಟ ಅನುಭವಿಸುವಂತಾಗಿದೆ.

ಕೇಂದ್ರ ಸರ್ಕಾರವು ಭತ್ತದ ರಫ್ತು ನಿಷೇಧ ಮಾಡಿರುವುದರಿಂದ ಕಳೆದ ವರ್ಷದಿಂದ ಭತ್ತಕ್ಕೆ ಹೆಚ್ಚಿನ ಬೆಲೆ ದೊರೆಯುತ್ತಿಲ್ಲ. ಇದರಿಂದಾಗಿ ವ್ಯಾಪಾರಿಗಳು ಭತ್ತಖರೀದಿಸಲು ಮುಂದೆ ಬರುತ್ತಿಲ್ಲ.ಸದ್ಯ ಮಾರುಕಟ್ಟೆಯಲ್ಲಿ ಆರ್‌.ಎನ್‌. ಆರ್‌. ಕ್ವಿಂಟಲ್‌ಗೆ ರೂ.1750, ಸೋನಾ ರೂ.1450-1500, ನೆಲ್ಲೂರು ಸೋನಾ ರೂ.1280-1300ಕ್ಕೆ ಬೆಲೆ ದೊರೆಯುತ್ತಿದೆ. ಕಳೆದ ವರ್ಷ ಆರ್‌.ಎನ್‌.ಆರ್‌. ಭತ್ತಕ್ಕೆ ರೂ.1800, ಸೋನಾ ಮಸೂರಿ ರೂ.1850, ನೆಲ್ಲೂರುಸೋನಾ ರೂ.1600, ಬೆಲೆಯಲ್ಲಿಮಾರಾಟವಾಗಿತ್ತು. ರೈತರ ಹೊಲಗಳಿಗೆ ತೆರಳಿ ವ್ಯಾಪಾರಿಗಳು ಭತ್ತ ಖರೀದಿ ಮಾಡಿದ್ದರು. ಆದರೆ ಈ ವರ್ಷ ತಾಲೂಕಿನಲ್ಲಿ ಶೇ.30ರಷ್ಟು

ರೈತರು ಭತ್ತಕೊಯ್ಲು ಮಾಡಿದ್ದು, ಆರ್‌. ಎನ್‌.ಆರ್‌. ಕ್ವಿಂಟಲ್‌ಗೆ ರೂ.1750, ಸೋನಾ ರೂ.1450-1500, ನೆಲ್ಲೂರು ಸೋನಾ ರೂ.1280-1300ಕ್ಕೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಒಂದೆಡೆ ಇಳುವರಿ ಕಡಿಮೆಬೆಲೆಯಲ್ಲಿಯೂ ಕುಸಿತ ಮಾರುಕಟ್ಟೆಯಲ್ಲಿ ಭತ್ತಕ್ಕೆ ಬೇಡಿಕೆ ಇಲ್ಲದಿರುವುದು ತಾಲೂಕಿನ ಭತ್ತ ಬೆಳೆದ ರೈತರನ್ನು ಕಂಗೆಡಿಸಿದೆ.

ಕೇಂದ್ರ ಸರ್ಕಾರ ಭತ್ತ ರಫ್ತು ಮಾಡುವುದನ್ನು ನಿಷೇಧಿ ಸಿರುವುದರಿಂದ ಭತ್ತದ ಬೆಲೆ ಕುಸಿಯಲು ಪ್ರಮುಖ ಕಾರಣವಾಗಿದೆ. ರೈತರು ಬೆಳೆದ ಭತ್ತವನ್ನು ಸರ್ಕಾರ ವೈಜ್ಞಾನಿಕ ಬೆಲೆ ನೀಡಿ ಖರೀದಿಸಿದರೆ ಮಾತ್ರ ರೈತರಿಗೆ ಅನುಕೂಲವಾಗಲಿದೆ. -ವಾ.ಹುಲುಗಯ್ಯ, ಅಧ್ಯಕ್ಷರು, ರೈತ ಸಂಘ, ಹಸಿರು ಸೇನೆ.(ನಂಜುಂಡಸ್ವಾಮಿ ಬಣ)

ಕಳೆದ ವರ್ಷಕ್ಕಿಂತ ಈ ವರ್ಷ ಕ್ವಿಂಟಲ್‌ ಭತ್ತಕ್ಕೆ 250-300 ರೂ. ಬೆಲೆ ಕಡಿಮೆಯಾಗಿದ್ದು, ಒಂದು ಕಡೆಯಾದರೆ ಇಳುವರಿಯಲ್ಲಿಯೂ ಕಡಿಮೆಯಾಗಿರುವುದು ಭತ್ತ ಬೆಳೆದ ರೈತನು ನಷ್ಟ ಅನುಭವಿಸಬೇಕಾಗಿದೆ. -ವೈ.ಕೃಷ್ಣಾರೆಡ್ಡಿ, ಕರೂರು ರೈತ

 

­ಆರ್‌.ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.