ಹದಗೆಟ್ಟ ಶುದ್ಧ ನೀರಿನ ಘಟಕಗಳು!


Team Udayavani, Nov 6, 2020, 8:09 PM IST

ಹದಗೆಟ್ಟ ಶುದ್ಧ ನೀರಿನ ಘಟಕಗಳು!

ಕೂಡ್ಲಿಗಿ: ಪಟ್ಟಣದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಸಲುವಾಗಿ ಪಟ್ಟಣದ ವಿವಿಧ ಭಾಗಗಳಲ್ಲಿ ನಿರ್ಮಿಸಿರುವ ಶುದ್ಧ ನೀರು ಘಟಕಗಳು ಕೆಟ್ಟು ನಿಂತಿವೆ. ಇದರಿಂದಾಗಿ ಸಾರ್ವಜನಿಕರಿಗೆ ಶುದ್ಧ ನೀರು ದೊರೆಯದಾಗಿದೆ.

ಪಪಂ ಅಡಿಯಲ್ಲಿ ರಾಜ್ಯ ಹಣಕಾಸು ಆಯೋಗ ಮತ್ತು 14ನೆ ಹಣಕಾಸು ನಿಧಿ ಯಿಂದ ಅನುದಾನ ಬಳಸಿಕೊಂಡು ಶುದ್ಧೀಕರಣ ಘಟಕ ನಿರ್ಮಿಸಿ ಕೆಲವು ಏಜೆನ್ಸಿಗಳಿಗೆ ಘಟಕಗಳ ನಿರ್ಮಾಣ ಮತ್ತು ಎರಡು ವರ್ಷಗಳನಿರ್ವಹಣೆ ಮಾಡಲು ಷರತ್ತು ಮಾಡಿಕೊಂಡಿದೆ. ಆದರೆ ನಿರ್ಮಿಸಿದ ಕೆಲವೇ ತಿಂಗಳಲ್ಲಿ ಶುದ್ಧಕುಡಿಯುವ ನೀರಿನ ಘಟಕಗಳು ದುರಸ್ತಿಗೆ ಬಂದಿವೆ. ಅದನ್ನು ನಿರ್ವಹಿಸುವ ಹೊಣೆಗಾರಿಕೆಹೊತ್ತಿರುವ ಏಜೆನ್ಸಿಗಳು ಇತ್ತ ತಲೆ ಹಾಕದೆಕೈಚೆಲ್ಲಿವೆ. ಪಪಂನಿಂದ 2 ರೂ.ಗೆ 20 ಲೀ. ನೀರನ್ನು ಕುಡಿಯುತ್ತಿದ್ದೆವು. ಆದರೆ ಇತ್ತೀಚೆಗೆ 20 ಲೀ. 5 ರೂ. ಮಾಡಿ ನಮಗೆ ಹೊರೆ ಮಾಡಿದ್ದಾರೆ ಎಂದು ನಿವಾಸಿಗಳಾದ ಬಸವರಾಜ್‌ ಸ್ವಾಮಿ, ಮುತ್ತು, ಬ್ಯಾಳಿರಾಜು ಬ್ಯಾಳಿಶರಣಪ್ಪ, ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಪಪಂ ಅಡಿಯಲ್ಲಿ ಕಳೆದ ಐದು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕವನ್ನು ಅಹ್ಮದ್‌ ಬಾದ್‌ ಸಿನರೇಜ್‌ ಸಲ್ಯೂಷನ್‌ ಪ್ರç.ಲಿಮಿಟೆಡ್‌ ಪಟ್ಟಣ ಪಂಚಾಯಿತಿಗೆ ಒಟ್ಟು 18 ಆರ್‌.ಓ ಪ್ಲಾಂಟ್‌ಗೆ ಭದ್ರತಾ ಠೇವಣಿ ಮೊತ್ತ-2,20,000 ರೂ. ಈಗಾಗಲೇ 11 ಆರ್‌.ಓ ಪ್ಲಾಂಟ್‌ ಏಜೆನ್ಸಿ ನಿರ್ವಹಿಸುತ್ತಿದೆ. ಬಾಕಿಯಿರುವ ಆರು ಕುಡಿಯುವ ನೀರಿನ ಘಟಕ ನೀಡಬೇಕಿದೆ ಎಂದು ಮುಖ್ಯಾಧಿಕಾರಿ ತಿಳಿಸಿದರು.

ಪ್ರತಿನಿತ್ಯದ ಬಳಕೆಗೆ ಶುದ್ಧ ಕುಡಿಯುವ ನೀರಿನ್ನೇ ಜನತೆ ಆಶ್ರಯಿಸಿದ್ದು, ಕೊಳವೆಬಾವಿ ನೀರನ್ನು ಕುಡಿಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಲು ಚುನಾಯಿತ ಪ್ರತಿನಿ ಧಿಗಳು, ಸಂಬಂ ಧಿಸಿದ ಏಜೆನ್ಸಿಗಳು ಇತ್ತ ಗಮನ ಹರಿಸಬೇಕು ಎಂಬುದು ವಾರ್ಡ್‌ ನಿವಾಸಿಗಳ ಒತ್ತಾಯವಾಗಿದೆ. ಪಟ್ಟಣದಲ್ಲಿ 18 ಆರ್‌ಓ ಪ್ಲಾಂಟ್‌ಗಳಲ್ಲಿ ಈಗಾಗಲೇ ಅಂಜನೇಯ ದೇವಸ್ಥಾನ ಹತ್ತಿರ, ವೆಂಕಟೇಶ್ವರ ದೇವಸ್ಥಾನ ಬಳಿ, ಗೋವಿಂದಗಿರಿ, ಹಳೆ ಚೌಡಿಯ, ಅಂಬೇಡ್ಕರ್‌ ನಗರ ಬಳಿ ಬೋರ್‌ವೆಲ್‌ಗ‌ಳಲ್ಲಿ ನೀರು ಇಲ್ಲ ಆದರೂ ಪಟ್ಟಣ ಪಂಚಾಯಿತಿ ಅಧಿಕಾರಿ ಗಮನಹರಿಸುತ್ತಿಲ್ಲ ಎಂಬುದು ಸಾರ್ವಜನಿಕರ ದೂರಾಗಿದೆ

ಆರು ತಿಂಗಳಿನಿಂದ ಶುದ್ಧೀಕರಣ ಘಟಕ ನನೆಗುದಿಗೆ ಬಿದ್ದಿದೆ. ಜನರ ಸಣ್ಣ ಪುಟ್ಟ ಸಮಸ್ಯೆ ಅರಿತು ವಾರ್ಡ್‌ ಜನರಿಗೆ ನೀರು ಕೊಡುವ ವ್ಯವಸ್ಥೆ ಮಾಡಬೇಕು. ಆದರೆ ಇತ್ತ ಯಾವುದೇ ರೀತಿಯಲ್ಲಿ ಅಧಿಕಾರಿ ವರ್ಗ ಕುಡಿಯುವ ನೀರಿನ ಘಟಕ ಸರಿಪಡಿಸಲು ಪ್ರಯತ್ನಕ್ಕೆ ಕೈ ಹಾಕುತ್ತಿಲ್ಲ. -ಸಿರಬಿ ಮಂಜು, 10ನೇ ವಾರ್ಡ್‌ ಪಪಂ ಸದಸ್ಯರು

ಈಗಾಗಲೇ ಎಲ್ಲಿ ಶುದ್ಧೀಕರಣ ಬಳಿ ಬೋರ್‌ ವೆಲ್‌ನಿಂದ ನೀರು ಕಡಿಮೆ ಬರುತ್ತಿದೆ ಎಂದು ಗಮನಹರಿಸಿದ್ದೇವೆ. ಇಲಾಖೆ ಮೂಲಕ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದೇವೆ. ನಂತರ ಟೆಂಡರ್‌ಪ್ರಕ್ರಿಯೆ ಆದ ಮೇಲೆ ಅಂತಹ ಶು ದ್ಧೀಕರಣ ಘಟಕದ ಬಳಿ ಮತ್ತೂಂದು ಬೋರ್‌ವೆಲ್‌ ಕೊರೆಸಿ ಏಜೆನ್ಸಿಯವರಿಗೆ ನೀಡುತ್ತೇವೆ. ಅದಕ್ಕಾಗಿ ಪಟ್ಟಣದ ಜನತೆ ಎಲ್ಲಿ ನೀರು ಬರುತ್ತವೆಯೋ ಅಲ್ಲಿಗೆ ತೆರಳಿ ನೀರನ್ನು ಹಿಡಿದುಕೊಳ್ಳಬೇಕು. – ಫಕ್ರುದ್ದೀನ್‌, ಮುಖ್ಯಾಧಿಕಾರಿ, ಪಪಂ ಕೂಡ್ಲಿಗಿ

 

­ ಕೆ.ನಾಗರಾಜ್‌

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.