ನೆರೆ ಪರಿಹಾರಕ್ಕೆ ಆಗ್ರಹಿಸಿ ದಂಪತಿ ಧರಣಿ
Team Udayavani, Nov 6, 2020, 10:30 PM IST
ಹಾನಗಲ್ಲ: ನೆರೆ ಹಾವಳಿಗೆ ಬಿದ್ದುಹೋದ ಮನೆಗೆ ಸರಕಾರದಿಂದ ಪರಿಹಾರ ಬರುವ ಭರವಸೆ ಮೇಲೆ ಮನೆ ನಿರ್ಮಾಣಕ್ಕೆ
ಮುಂದಾದ ತಾಲೂಕಿನ ಮಾಸನಕಟ್ಟಿ ಗ್ರಾಮದ ಫಲಾನುಭವಿ ದಂಪತಿ, ಪರಿಹಾರಕ್ಕಾಗಿ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದರು. ಗುರುವಾರ ತಹಶೀಲ್ದಾರ ಕಚೇರಿ ಎದುರು ತಾಲೂಕಿನ ಮಾಸನಕಟ್ಟಿ ಗ್ರಾಮದ ದ್ಯಾಮವ್ವ ಬಾರಿಗಿಡದ ಹಾಗೂ ದೇವೇಂದ್ರಪ್ಪ ಬಾರಿಗಿಡದ ಧರಣಿ ನಡೆಸಿದರು. ಈ ಮೊದಲು ಹತ್ತಾರು ಬಾರಿ ತಾಲೂಕು ತಹಶೀಲ್ದಾರ್ ಹಾಗೂ ಗ್ರಾಮ ಪಂಚಾಯತಿಗೆ ಮನವಿ ನೀಡಿದ್ದರೂ ಯಾವುದೇ ಫಲ ನೀಡದ ಕಾರಣ ಅನಿವಾರ್ಯವಾಗಿ ಧರಣಿ ನಡೆಸುತ್ತಿರುವುದಾಗಿ ಹೇಳಿದರು.
ಕಳೆದ ಮಳೆಗಾಲದಲ್ಲಿ ಅತಿವೃಷ್ಟಿಗೆ ಬಿದ್ದುಹೋದ ಮನೆಗೆ 5 ಲಕ್ಷ ರೂ. ಕೊಡುವುದಾಗಿ ಸರಕಾರ ಘೋಷಿಸಿತ್ತು. ಈ ದಂಪತಿ ಅದರ ಫಲಾನುಭವಿಯಾಗಿದ್ದರು. ಆದರೆ ಇದರಲ್ಲಿ ಕೇವಲ ಒಂದು ಲಕ್ಷ ನೀಡಿ ಕಂದಾಯ ಇಲಾಖೆ ಕೈತೊಳೆದುಕೊಂಡಿತ್ತು.
ತಾಂತ್ರಿಕ ದೋಷಗಳಿಂದ ಪರಿಹಾರ ನೀಡಲಾಗದು ಎಂದು ಅಧಿ ಕಾರಿಗಳು ಹೇಳಿದ್ದರಿಂದ ನ್ಯಾಯಕ್ಕಾಗಿ ಧರಣಿ
ಕುಳಿತಿರುವುದಾಗಿ ದೇವೆಂದ್ರಪ್ಪ ಬಾರಿಗಿಡದ ಹಾಗೂ ಪತ್ನಿ ದ್ಯಾಮವ್ವ ಬಾರಿಗಿಡದ ತಿಳಿಸಿದರು.
ಧರಣಿಗೆ ಸ್ಪಂದಿಸಿದ ತಹಶೀಲ್ದಾರ್ ಪಿ.ಎಸ್.ಎರ್ರಿಸ್ವಾಮಿ, ಅವರು ಕಟ್ಟಿಕೊಳ್ಳುತ್ತಿರುವ ಮನೆಯ ಜಾಗದ ಬಗೆಗೆ ದಾಖಲಾತಿ ಗೊಂದಲಗಳಿರುವುದರಿಂದ ಪರಿಹಾರ ಧನ ನೀಡಲಾಗಿಲ್ಲ. ಅವರೇ ನೀಡಿದ ದಾಖಲೆಗಳು ಪರಿಹಾರ ನೀಡಲು ಅನಾನುಕೂಲವಾಗಿವೆ. ಇನ್ನೂ ಪರಿಶೀಲಿಸಿ ನ್ಯಾಯ ಒದಗಿಸಿಕೊಡಲು ಮುಂದಾಗುತ್ತೇವೆ. ಈ ಪ್ರಕರಣವನ್ನು ಮೇಲಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲಾಗುತ್ತದೆ. ಹಾಗಾಗಿ, ಧರಣಿ ಕೈಬಿಡುವಂತೆ ಮನವಿ ಮಾಡಿದರು. ತಹಶೀಲ್ದಾರ್ ಆಶ್ವಾಸನೆಗೆ ಒಪ್ಪಿದ ದಂಪತಿ ತಾತ್ಕಾಲಿಕವಾಗಿ ಧರಣಿ ಹಿಂಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ