ನಾಡು, ಭಾಷೆಯನ್ನು ತಾಯಿಯಂತೆ ಗೌರವಿಸಿ: ಯಡಿಯೂರಪ್ಪ


Team Udayavani, Nov 8, 2020, 6:00 AM IST

ನಾಡು, ಭಾಷೆಯನ್ನು ತಾಯಿಯಂತೆ ಗೌರವಿಸಿ: ಯಡಿಯೂರಪ್ಪ

ಬೆಂಗಳೂರು: ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿ ನಮ್ಮ ಅಸ್ಮಿತೆಯ ಭಾಗವಾಗಿದ್ದು, ಭಾಷೆ ಮತ್ತು ಜನ್ಮಭೂಮಿ ಹೆತ್ತ ತಾಯಿಗೆ ಸಮಾನವಾಗಿದೆ. ಹೀಗಾಗಿ ಹೆತ್ತ ತಾಯಿಗೆ ಸಲ್ಲುವಂತಹ ಗೌರವ, ಆದರಗಳು ನಮ್ಮ ಭಾಷೆ ಮತ್ತು ತಾಯ್ನಾಡಿಗೂ ಸಲ್ಲಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 65 ಮಂದಿ ಸಾಧಕರಿಗೆ ಈ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಿಸಿ ಮಾತನಾಡಿದ ಅವರು, ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಅಗ್ರಸ್ಥಾನ. ಕನ್ನಡವನ್ನು ನಾವು ಇಲ್ಲಿ ಬೆಳಸದಿದ್ದರೆ ಬೇರೆಲ್ಲೂ ಬೆಳಸಲು ಸಾಧ್ಯವಿಲ್ಲ ಎಂದರು.

ಕನ್ನಡವು ನಮ್ಮ ಹೃದಯ ಭಾಷೆಯಾಗಿದ್ದು, ಇದು ವ್ಯವಹಾರದ ಭಾಷೆಯಾಗಬೇಕು. ಕನ್ನಡವನ್ನು ದೈನಂದಿನ ವ್ಯವಹಾರದಲ್ಲಿ ಹೆಚ್ಚೆಚ್ಚು ಬಳಸಬೇಕು. ಭಾಷೆಯನ್ನು ಬಳಸಿದಂತೆ ಅದು ಬೆಳೆಯುತ್ತದೆ ಎಂದ ಅವರು, ಈ ಬಾರಿ 65 ಮಂದಿ ಸಾಧಕರನ್ನು ನಾಡಿನ ವಿವಿಧ ಮೂಲೆಗಳನ್ನು ಶೋಧಿಸಿ ಪಾರದರ್ಶಕವಾಗಿ ಪ್ರಶಸ್ತಿಗೆ ಆರಿಸಲಾಗಿದೆ ಎಂದು ಹೇಳಿದರು.

ಸಾಧಕ ಮುತ್ತುಗಳನ್ನು ಹೆಕ್ಕಿದ್ದೇವೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ. ಟಿ. ರವಿ ಮಾತನಾಡಿ, ರಾಜ್ಯೋತ್ಸವ ಪ್ರಶಸ್ತಿಗಾಗಿ ಸುಮಾರು 1,872 ಅರ್ಜಿಗಳು ಬಂದಿದ್ದವು. ಸಾಧಕರನ್ನು ಮುತ್ತುಗಳನ್ನು ಹೆಕ್ಕಿ ತೆಗೆದ ರೀತಿಯಲ್ಲಿ ಆಯ್ಕೆ ಮಾಡಲಾಗಿದೆ. ಇನ್ನಷ್ಟು ಮಂದಿ ಅರ್ಹರಾಗಿದ್ದರೂ, ಪ್ರಶಸ್ತಿ ಸಂಖ್ಯೆ ಕಡಿಮೆ ಇದ್ದ ಕಾರಣ ಆಯ್ಕೆ ಮಾಡಲಾಗಿಲ್ಲ ಎಂದರು.

“ಕಲಾತಂಡ’ ಆ್ಯಪ್‌ ಬಿಡುಗಡೆ
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕಲಾವಿದರ ಆನುಕೂಲಕ್ಕಾಗಿ “ಕಲಾತಂಡ’ ಆ್ಯಪ್‌ ಅನ್ನು ಬಿಡುಗಡೆ ಮಾಡಿದರು.

ಪ್ರಶಸ್ತಿ ಮೊತ್ತ ಸಿಎಂ ಪರಿಹಾರ ನಿಧಿಗೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಹಿರಿಯ ಪತ್ರಕರ್ತ ಟಿ. ವೆಂಕಟೇಶ್‌ ಹಾಗೂ ಚಿಕ್ಕಬಳ್ಳಾಪುರ ಮೂಲದ ಪರಿಸರವಾದಿ, ನಿವೃತ್ತ ಐಎಎಸ್‌ ಅಧಿಕಾರಿ ಕೆಂಪರೆಡ್ಡಿ ಅಮರನಾರಾಯಣ ಅವರು ತಮಗೆ ದೊರೆತ 1 ಲ. ರೂ. ಪ್ರಶಸ್ತಿ ಮೊತ್ತವನ್ನು ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದರು. ಕಲಬುರಗಿ ಮೂಲದ ಕೃಷಿ ಸಾಧಕ ಡಾ| ಸಿದ್ರಾಮಪ್ಪ ಬಸವಂತರಾವ್‌ ಪಾಟೀಲ್‌ ಧಂಗಾಪೂರ ಅವರು 50 ಸಾ. ರೂ. ಅನ್ನು ರೈತರ ನೆರವಿಗಾಗಿ ಸಿಎಂ ಪರಿಹಾರ ನಿಧಿಗೆ ಮತ್ತು ಉಳಿದ 50 ಸಾ. ರೂ.ಅನ್ನು ಹುಟ್ಟೂರು ಧಂಗಾಪುರದ ದೇವಸ್ಥಾನಕ್ಕೆ ನೀಡುವುದಾಗಿ ಘೋಷಿಸಿದರು.

ತಪ್ಪು ಮಾಹಿತಿ ನೀಡಿದ್ದ ಕೇಶಪ್ಪ
ಕೇಶಪ್ಪ ಶಿಳ್ಳೇಕ್ಯಾತರ್‌ ಅವರು ಸುಳ್ಳು ಮಾಹಿತಿಯನ್ನು ನೀಡಿದ್ದರು. ವಿಶೇಷ ಪ್ರಕರಣ ಹೊರತುಪಡಿಸಿದರೆ ಸಾಮಾನ್ಯವಾಗಿ ಈ ಪ್ರಶಸ್ತಿ ಪಡೆಯಲು 60 ವಯಸ್ಸಾಗಬೇಕು. ಆದರೆ ಕೇಶಪ್ಪ ಅವರಿಗೆ 46 ವರ್ಷವಾಗಿತ್ತು. ಇದು ಅವರ ಆಧಾರ್‌ ಕಾರ್ಡ್‌ ಸಹಿತ ಇನ್ನಿತರ ಪೂರಕ ದಾಖಲೆಗಳ ಪರಿಶೀಲನೆ ಸಂದರ್ಭ ಗಮನಕ್ಕೆ ಬಂದಿದೆ. ಆ ಹಿನ್ನೆಲೆಯಲ್ಲಿ ಆ ಪ್ರಶಸ್ತಿಯನ್ನು ಹಿರಿಯ ರಂಗಭೂಮಿ ಕಲಾವಿದೆ ವಂದನಾ ಅವರಿಗೆ ನೀಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್‌.ರಂಗಪ್ಪ ಸ್ಪಷ್ಟಪಡಿಸಿದ್ದಾರೆ.

ಮೋಡ ಬಿತ್ತನೆ ಮಾಡಿ
ಪ್ರಶಸ್ತಿ ಪುರಸ್ಕೃತರ ಪರವಾಗಿ ಮಾತನಾಡಿದ ಚಿತ್ರದುರ್ಗ ಜಿಲ್ಲೆಯ ಬೀದಿಗೆರೆ ಹಳ್ಳಿಯ ಕೃಷಿ ಸಾಧಕಿ ಎಸ್‌.ವಿ. ಸುಮಂಗಲಮ್ಮ ಅವರು, ಬರಗಾಲದಿಂದ ತತ್ತರಿಸಿರುವ ಚಿತ್ರದುರ್ಗ ಸಹಿತ ಇನ್ನಿತರ ಪ್ರದೇಶಗಳಲ್ಲಿ ಮೋಡ ಬಿತ್ತನೆ ಮಾಡುವಂತೆ ಸರಕಾರಕ್ಕೆ ಮನವಿ ಮಾಡಿದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.