ಶಾಸಕ ಭೀಮಾನಾಯ್ಕ್ ಗಲಾಟೆ ಪ್ರಕರಣ : ನ. 11 ರಂದು ಹಗರಿಬೊಮ್ಮನಹಳ್ಳಿ ಬಂದ್ ಗೆ ಬಿಜೆಪಿ ಕರೆ
Team Udayavani, Nov 9, 2020, 12:54 PM IST
ಬಳ್ಳಾರಿ: ಹಗರಿಬೊಮ್ಮನ ಹಳ್ಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮತ ಎಣಿಕೆ ಪ್ರಕ್ರಿಯೆ ಸಂದರ್ಭದಲ್ಲಿ ಶಾಸಕ ಭೀಮಾನಾಯ್ಕ್ ಭುಜ ತಟ್ಟಿ ಬಿಜೆಪಿ ಮುಖಂಡರಿಗೆ ಸವಾಲು ಹಾಕಿದ ನಡೆ ಖಂಡಿಸಿ ನವೆಂಬರ್ 11 ರಂದು ಹಗರಿಬೊಮ್ಮನ ಹಳ್ಳಿ ತಾಲ್ಲೂಕು ಬಂದ್ ಗೆ ಬಿಜೆಪಿ ಕರೆ ನೀಡಿದೆ.
ಹಗರಿಬೊಮ್ಮನ ಹಳ್ಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮತ ಎಣಿಕೆ ಪ್ರಕ್ರಿಯೆ ಸಂದರ್ಭದಲ್ಲಿ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದ ವೇಳೆಯಲ್ಲಿ ಶಾಸಕರಾಗಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಬದಲು ಭೀಮನಾಯ್ಕ್ ಭುಜ ತಟ್ಟಿ ಬಿಜೆಪಿ ಮುಖಂಡರಿಗೆ ಸವಾಲು ಹಾಕಿದ್ದರು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಭೀಮಾನಾಯ್ಕ್ ಬೆಂಬಲಿಸಿ ಭೀಮಾನಾಯ್ಕ್ ಮಗ ಕೂಡ ತಂದೆ ಸಮರ್ಥನೆ ಮಾಡಿ ಪೋಸ್ಟ್ ಹಾಕಿದ್ದರು.
ಶಾಸಕ ಭೀಮಾನಾಯ್ಕ್ ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಛೀಮಾರಿ ವಿಡಿಯೋವೊಂದನ್ನು ಕಾಂಗ್ರೆಸ್ ಕಾರ್ಯಕರ್ತರು ವೈರಲ್ ಮಾಡಿದ್ದಾರೆ. ವಿಡಿಯೋದಲ್ಲಿ ಬಿಜೆಪಿ ಕಾರ್ಯಕರ್ತರು ಶಾಸಕ ಭೀಮ ನಾಯ್ಕ್ ಅವರಿಗೆ “ಬಾ ಲೇ ಭೀಮ” ಎಂದು ಮರು ಸವಾಲು ಹಾಕಿ, ಶಾಸಕ ಭೀಮಾನಾಯ್ಕ್ ರನ್ನು ಏಕವಚನದಲ್ಲಿ ನಿಂದಿಸಿದ್ದಾರೆ.
ಸದ್ಯ ಜಿಲ್ಲೆಯಲ್ಲಿ ಗಲಾಟೆ ಪ್ರಕರಣದ ಕಾವು ಬಿರುಸು ಪಡೆದುಕೊಳ್ಳುತ್ತಿದೆ. ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆ ನಡೆದಿದ್ದ ಗಲಾಟೆಯಲ್ಲಿ ಶಾಸಕ ಭೀಮ ನಾಯ್ಕ್ ಅವರ ವರ್ತನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಸ್ವತಃ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಪಕ್ಷದ ಶಾಸಕರ ನಡೆ ಖಂಡಿಸಿದ್ದರು. ಇದೀಗ ಬಿಜೆಪಿ ಕಾರ್ಯಕರ್ತರ ವಿಡಿಯೋ ವೈರಲ್ ಆಗಿದ್ದು, ಮತ್ತೆ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಪರಿಸ್ಥಿತಿ ಹದಗೆಡುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!