ರವಿವಾರ ನೇತ್ರಾವತಿ ನದಿಗೆ ಹಾರಿದ್ದ ಯುವಕ: ಪಾಣೆಮಂಗಳೂರು ಸೇತುವೆಯಡಿ ಇಂದು ಮೃತದೇಹ ಪತ್ತೆ
Team Udayavani, Nov 9, 2020, 5:25 PM IST
ಬಂಟ್ವಾಳ: ಪಾಣೆಮಂಗಳೂರು ಸೇತುವೆಯ ಬಳಿ ಬ್ಯಾಗನ್ನಿಟ್ಟು ಯುವಕನೋರ್ವ ನದಿಗೆ ಹಾರಿದ ಘಟನೆ ರವಿವಾರ ನಡೆದಿದ್ದು, ಹುಡುಕಾಟದ ನಂತರ ಸೋಮವಾರ ಸಂಜೆ ಪಾಣೆಮಂಗಳೂರು ಹೊಸ ಸೇತುವೆಯ ತಳಭಾಗದಲ್ಲಿ ಮೃತದೇಹ ಪತ್ತೆಯಾಗಿದೆ.
ನದಿಗೆ ಹಾರಿದ ಯುವಕ ಪುತ್ತೂರು ತಾಲೂಕಿನ ಬಲ್ನಾಡು ಕಾಂತಿಲ ನಿವಾಸಿ ಸುಚೇತನ್ (27) ಎಂದು ಸಂಶಯಿಸಲಾಗಿದೆ.
ಈತ ರವಿವಾರ ಮಂಗಳೂರಿನ ಪಿಜಿಯಿಂದ ಬಂದು ಬೆಳಗ್ಗೆ ಪಾಣೆಮಂಗಳೂರು ಹೊಸ ಸೇತುವೆಯ ಬಳಿ ತನ್ನ ಬ್ಯಾಗ್ ಇರಿಸಿ ನದಿಗೆ ಹಾರಿದ್ದು, ಯಾರೋ ಅದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬ್ಯಾಗಿನಲ್ಲಿ ಸಿಕ್ಕ ಆಧಾರ್ ಕಾರ್ಡ್, ವೋಟರ್ ಐಡಿಯ ಆಧಾರದಲ್ಲಿ ಇದೇ ಯುವಕ ನದಿಗೆ ಹಾರಿದ್ದಾನೆ ಎಂದು ಸಂಶಯಿಸಿ ಮನೆಗೆ ಮಾಹಿತಿ ನೀಡಲಾಗಿತ್ತು. ಮನೆಯವರು ಕೂಡ ಆಗಮಿಸಿದ್ದರು.
ಇದನ್ನೂ ಓದಿ:ಮಲ್ಪೆ: ಸಮುದ್ರದಲ್ಲಿ ಮುಳುಗುತ್ತಿದ್ದ ಯುವತಿಯ ರಕ್ಷಿಸಲು ಹೋದ ಯುವಕನೂ ನೀರುಪಾಲು; ರಕ್ಷಣೆ
ಬಳಿಕ ರಾತ್ರಿವರೆಗೂ ಬಂಟ್ವಾಳ ಅಗ್ನಿಶಾಮಕ ದಳದವರು, ಸ್ಥಳೀಯ ಈಜುಗಾರರು ಬೋಟಿನ ಮೂಲಕ ಸಂಜೆಯವರೆಗೂ ಹುಡುಕಾಡಿದರೂ, ಯುವಕನ ಪತ್ತೆಯಾಗಿರಲಿಲ್ಲ. ಇಂದು ಕೂಡಾ ಹುಡುಕಾಟ ಮುಂದುವರಿಸಿದ್ದು, ಯುವಕನ ಮೃತದೇಹವು ಪಾಣೆಮಂಗಳೂರು ಹೊಸ ಸೇತುವೆಯ ತಳಭಾಗದಲ್ಲಿ ಪತ್ತೆಯಾಗಿದೆ.
ಬಂಟ್ವಾಳ ಅಗ್ನಿ ಶಾಮಕ ದಳದವರು ಬೋಟಿನಲ್ಲಿ ಹುಡುಕಾಡುವಾಗ ಶವ ಪತ್ತೆಯಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು