ತ್ಯಾಜ್ಯ ವಿಂಗಡಣೆ; ಸಮಸ್ಯೆಯ ನಡುವೆಯೂ ಪೂರಕ ಸ್ಪಂದನೆ

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹ

Team Udayavani, Nov 10, 2020, 5:00 AM IST

MLR

ಮಹಾನಗರ: ತ್ಯಾಜ್ಯ ಸಂಗ್ರಹ ಮಾಡುವ ವಾಹನಗಳಿಗೆ ಹಸಿ, ಒಣ ಕಸವಾಗಿ ವಿಂಗಡಿಸಿ ನೀಡುವ ನಿಯಮ ಒಂದು ತಿಂಗಳಿನಿಂದ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಪೂರ್ಣಮಟ್ಟದಲ್ಲಿ ಜಾರಿಗೆ ಬಂದಿದೆ. ಆದರೆ ಕೆಲವೆಡೆಗಳಲ್ಲಿ ತ್ಯಾಜ್ಯ ಸಂಗ್ರಹದಲ್ಲಿ ಸಮಸ್ಯೆ ಆಗುತ್ತಿದೆ ಎಂಬ ಆರೋಪವೂ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ನಗರದಲ್ಲಿ ಶುಕ್ರವಾರ ಮಾತ್ರ ಒಣ ಕಸ ಸಂಗ್ರಹ ಮಾಡಲಾಗುತ್ತಿದೆ. ಕಳೆದ ಶುಕ್ರವಾರ ಒಟ್ಟು 330 ಟನ್‌ ಒಣಕಸ ಸಂಗ್ರಹವಾಗಿದೆ. ಒಣಕಸ ಪ್ರತ್ಯೇಕವಾಗಿ ಸಂಗ್ರಹ ಮಾಡಿದ ಪರಿಣಾಮ ಸದ್ಯ ಪ್ರತೀ ದಿನ ಹಸಿ ಕಸ ಪ್ರಮಾಣ 220 ಟನ್‌ಗಳಿಗೆ (ಹಿಂದೆ ಸುಮಾರು 300 ಟನ್‌) ಇಳಿದಿದೆ.

ವಾರದಿಂದ ವಾರಕ್ಕೆ ಒಣಕಸದ ಪ್ರಮಾ ಣದಲ್ಲಿ ಏರಿಕೆಯಾಗುತ್ತಿದೆ. ಇದರಿಂದ ಒಂದೇ ವಾಹನದಲ್ಲಿ ಅದನ್ನು ಸಾಗಿಸಲು ಸಮಸ್ಯೆಯಾಗುತ್ತಿದೆ. ಹೀಗಾಗಿ ನಗರದ ವಿವಿಧ ಕಡೆಗಳಲ್ಲಿ ಶುಕ್ರವಾರ ಒಣಕಸ ನಿರ್ವಹಣೆ ಸಮರ್ಪಕವಾಗಿ ನಡೆದಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಈ ಮಧ್ಯೆ, ಪ್ರತೀ ದಿನ ಹಸಿ ಕಸ ಸಾಗಾಟ ನಡೆಸುವಲ್ಲಿಯೂ ಇದೀಗ ಹೊಸ ಸಮಸ್ಯೆ ಕೇಳಿಬಂದಿದೆ. ವಸತಿ ಸಮುಚ್ಚಯ ಸಹಿತ ನಿರ್ದಿಷ್ಟ ಪ್ರದೇಶಗಳಿಂದ ಪ್ರತಿನಿತ್ಯ ಹಸಿಕಸ ನಿರ್ವಹಣೆಯಾಗುತ್ತಿದ್ದರೆ, ಪ್ರತ್ಯೇಕ ಮನೆಗಳಿರುವ ಕೆಲವು ಭಾಗಗಳಿಂದ 2-3 ದಿನಗಳವರೆಗೂ ಹಸಿ ಕಸ ಕೊಂಡೊ ಯ್ಯುತ್ತಿಲ್ಲ ಎಂಬ ದೂರು ಕೇಳಿಬಂದಿದೆ.

ಸ್ಥಳೀಯ ಸಮಸ್ಥೆಗಳಿಗೆ ನೋಟಿಸ್‌
ಪಚ್ಚನಾಡಿ ಡಂಪಿಂಗ್‌ ಯಾರ್ಡ್‌ ಪ್ರದೇಶಗಳಿಗೆ ನಗರ ಹೊರತುಪಡಿಸಿ ಇತರ ಭಾಗಗಳಿಂದ ತ್ಯಾಜ್ಯ ಕಳುಹಿಸುವ ಸ್ಥಳೀಯ ಸಂಸ್ಥೆಗಳು ತ್ಯಾಜ್ಯ ವಿಂಗಡಣೆ ಮಾಡಿ ನೀಡುವಂತೆ ಪಾಲಿಕೆಯಿಂದ ನೋಟಿಸ್‌ ನೀಡಲಾಗಿದೆ. ಅಪಾರ್ಟ್‌ ಮೆಂಟ್‌, ಬೃಹತ್‌ ತ್ಯಾಜ್ಯ ಉತ್ಪಾದಕರು, ಮಾಲ್‌, ಉದ್ದಿಮೆದಾರರು ಸ್ವಂತ ತ್ಯಾಜ್ಯ ಸಂಸ್ಕರಣೆ ಕಾಂಪೋ ಸ್ಟಿಂಗ್‌ ಘಟಕವನ್ನು ಕಡ್ಡಾಯವಾಗಿ ನಿರ್ಮಿಸುವಂತೆ, ಉತ್ಪಾದನೆಯಾಗುವ ತ್ಯಾಜ್ಯವನ್ನು ಸ್ಥಳ ದಲ್ಲಿಯೇ ಸಂಸ್ಕರಣೆ ಮಾಡುವಂತೆ ಸೂಚಿಸಲಾಗಿದೆ. ಕಾಂಪೋಸ್ಟಿಂಗ್‌ ಘಟಕ ನಿರ್ಮಿಸುವ ತನಕ ತಮ್ಮ ಸಂಸ್ಥೆಯಲ್ಲಿ ದಿನನಿತ್ಯ ಉತ್ಪತ್ತಿಯಾಗುವ ತ್ಯಾಜ್ಯವನ್ನು ಹಸಿ ಕಸ ಹಾಗೂ ಒಣಕಸವಾಗಿ ವಿಂಗಡಿಸಿ ನೀಡಬೇಕಾಗಿದೆ.

ದಂಡ ಪ್ರಯೋಗ ಜಾರಿ
ಹಸಿ ಕಸ, ಒಣಕಸ ಪ್ರತ್ಯೇಕವಾಗಿ ನೀಡು ವಂತೆ ಪಾಲಿಕೆ ಮಾಡಿದ ಮನವಿಗೆ ಸಾರ್ವ ಜನಿಕರಿಂದ ಉತ್ತಮ ಪ್ರತಿ ಕ್ರಿಯೆ ವ್ಯಕ್ತವಾಗಿದೆ. ತ್ಯಾಜ್ಯ ವಿಂಗ ಡಿಸದಿದ್ದರೆ ಪಾಲಿಕೆಯ ವತಿಯಿಂದ ಕಸ ಸಂಗ್ರಹಣೆಯನ್ನು ಮುಂದಿನ ದಿನಗಳಲ್ಲಿ ಸ್ವೀಕರಿಸುವುದಿಲ್ಲ. ಜತೆಗೆ ಸಂಬಂಧಪಟ್ಟವರಿಂದ ದಂಡ ಸ್ವೀಕರಿಸಲಾಗುವುದು. ತ್ಯಾಜ್ಯ ವಿಂಗಡಣೆ ಮಾಡದವರಿಗೆ, ರಸ್ತೆ ಬದಿಯಲ್ಲಿ ಬಿಸಾ ಡುವವರಿಗೆ 1,000ದಿಂದ 25,000 ರೂ.ವರೆಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು.
-ಅಕ್ಷಯ್‌ ಶ್ರೀಧರ್‌, ಆಯುಕ್ತರು, ಮನಪಾ

ಟಾಪ್ ನ್ಯೂಸ್

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.