ಹತ್ತಿ ಕೇಂದ್ರ ಪರಿಶೀಲಿಸಿದ ಜಿಲ್ಲಾಧಿಕಾರಿ


Team Udayavani, Nov 10, 2020, 5:50 PM IST

ಹತ್ತಿ ಕೇಂದ್ರ ಪರಿಶೀಲಿಸಿದ ಜಿಲ್ಲಾಧಿಕಾರಿ

ಯಾದಗಿರಿ: ಜಿಲ್ಲೆಯ ಹತ್ತಿ ಕೇಂದ್ರಗಳಲ್ಲಿನ ರೈತರಿಗೆ ದರದಲ್ಲಿ ಮೋಸ, ಸೂಟ್‌ ನೆಪದಲ್ಲಿ ರೈತರ ಕೆಲ ಕೆಜಿ ಹತ್ತಿಯನ್ನು ಕಸಿಯುತ್ತಿದ್ದ ದಲ್ಲಾಳಿಗಳಿಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಬಿಸಿ ಮುಟ್ಟಿಸಿದ್ದಾರೆ.

ಜಿಲ್ಲೆಯ ವಿವಿಧ ಕಡೆಗಳಲ್ಲಿ ರಸ್ತೆಯುದ್ದಕ್ಕೂ ತೆರೆದಿರುವ ಹತ್ತಿ ಕೇಂದ್ರಗಳು ರೈತರಿಂದ ಹತ್ತಿ ಖರೀದಿಸುತ್ತಿದ್ದು, ಮೊದಲೇ ಪ್ರವಾಹ, ಅತಿವೃಷ್ಟಿಯಿಂದ ತೊಂದರೆಗೀಡಾಗಿದ್ದ ರೈತರಗಾಯದ ಮೇಲೆ ಬರೆ ಎಳೆಯುತ್ತಿರುವ ಕುರಿತು “ಉದಯವಾಣಿ’ ನ.8ರಂದು ವರದಿ ಪ್ರಕಟಿಸಿತ್ತು.

ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ ರೈತರಿಗೆಅನ್ಯಾಯವಾಗುತ್ತಿರುವುದನ್ನು ತೀವ್ರವಾಗಿಸ್ಪಂದಿಸಿದ್ದು, ಸೋಮವಾರ ನಗರದ ಹೊರವಲಯದ ಮುಂಡರಗಿ ರಸ್ತೆಯಮೌಲಾಲಿ ಅನ್ಪುರ್‌ ರೈಸ್‌ ಮಿಲ್‌ ಬಳಿಯಿರುವ ಹಾಗೂ ಇಂಪಿರಿಯಲ್‌ ಗಾರ್ಡನ್‌, ಯಾದಗಿರಿ ಬಸ್‌ ಕಾರ್ಯಾಗಾರ ಎದುರುಗಡೆ ತೆರೆದಿರುವ ಹತ್ತಿ ಖರೀದಿ ಕೇಂದ್ರಗಳಿಗೆ ಖುದ್ದಾಗಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಆರ್‌. ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹತ್ತಿ ಖರೀದಿ ಕೇಂದ್ರಗಳಲ್ಲಿ ರೈತರಿಗೆ ತೂಕ ಮತ್ತು ಅಳತೆಗಳಲ್ಲಿ ಅನ್ಯಾಯವಾಗುತ್ತಿದೆ ಎಂಬದೂರುಗಳ ಆಧಾರದಲ್ಲಿ ಅವರು ಅನಿರೀಕ್ಷಿತವಾಗಿ ನಗರದ ವಿವಿಧ ಹತ್ತಿ ಖರೀದಿ ಕೇಂದ್ರಗಳಿಗೆ ತೆರಳಿ ಅಲ್ಲಿನ ವಸ್ತುಸ್ಥಿತಿ ಅವಲೋಕಿಸಿದರು.

ಹತ್ತಿ ಖರೀದಿ ಕೇಂದ್ರಗಳಿಂದ ರೈತರಿಗೆ ನೀಡಲಾದ ಬಿಲ್‌ಗ‌ಳನ್ನ ಪರಿಶೀಲಿಸಿದರು. ಈ ವೇಳೆ ಅನ ಧಿಕೃತ ಕಡಿತಗಳ ಮೂಲಕ ರೈತರಿಂದ ಹಣ ವಸೂಲಿ ಮಾಡುತ್ತಿರುವ ಖರೀದಿದಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಸ್ಥಳದಲ್ಲಿದ್ದ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಂದಾಯ ನಿರೀಕ್ಷಕರು ನಾಲ್ವರು ಖರೀದಿದಾರರ ವಿರುದ್ಧ ಪ್ರಕರಣ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.

ಕಾಯ್ದೆ ತಿದ್ದುಪಡಿಯಿಂದ ತೊಂದರೆ: ಸರ್ಕಾರ ಕೃಷಿ ಮಾರಾಟ ಕಾಯ್ದೆಯನ್ನು ತಿದ್ದುಪಡಿ ಮಾಡಿರುವುದು ಕೃಷಿ ಮಾರಾಟ ಇಲಾಖೆ ಅಧಿಕಾರಿಗಳ ಪಾಡು ಹಲ್ಲಿಲ್ಲದ ಹಾವಿನಂತಾಗಿದೆ. ಅನಧಿಕೃತ ಖರೀದಿದಾರರ ಮೇಲೆ ಕ್ರಮ ಕೈಗೊಳ್ಳುವ ಯಾವುದೇ ಅಧಿಕಾರ ಕೃಷಿ ಮಾರುಕಟ್ಟೆ ಅಧಿಕಾರಿಗಳಿಗಿಲ್ಲ ಎನ್ನಲಾಗುತ್ತಿದೆ.

ಕಳೆದ ಬಾರಿ ಅನಧಿಕೃತ ಹತ್ತಿ ಖರೀದಿ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು 23 ಲಕ್ಷಕ್ಕೂ ಅಧಿಕ ದಂಡ ವಿಧಿಸಿ 196 ಪ್ರಕರಣಗಳನ್ನು ದಾಖಲಿಸಿದ್ದರು. ಆದರೇ ಇತ್ತೀಚೆಗಷ್ಟೇ ಕಾಯ್ದೆ ತಿದ್ದುಪಡಿಯಂತೆ ಯಾರಿಗಾದರೂ ರೈತರು ತಮ್ಮ ಉತ್ಪನ್ನಗಳನ್ನು ಮಾರಬಹುದಾಗಿದ್ದು, ಕಾಯ್ದೆಯಲ್ಲಿ ಹಲವು ಸಡಿಲಿಕೆ ಇರುವುದರಿಂದ ಅಧಿಕೃತ ಪರವಾನಗಿ ಪಡೆಯದಿದ್ದರೂ ರೈತರಿಂದ ಖರೀದಿಸಲು ಅವಕಾಶವಿದೆ ಎಂದು ಕೃಷಿ ಮಾರಾಟ ಇಲಾಖೆ ಅಧಿಕಾರಿಯೊಬ್ಬರುಮಾಹಿತಿ ನೀಡಿದ್ದಾರೆ. ಇದರಿಂದಾಗಿ ರೈತರು ಮತ್ತಷ್ಟು ಅನ್ಯಾಯಕ್ಕೊಳಗಾಗುವ ಆತಂಕ ಎದುರಾಗಿದೆ.

ಹತ್ತಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ರೈತರಿಂದ ಅನಧಿ ಕೃತ ಕಡಿತಗಳ ಮೂಲಕ ಹಣ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.  –ಡಾ.ರಾಗಪ್ರಿಯಾ, ಡಿಸಿ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.